ಟಿ20: ಬೇರ್‌ಸ್ಟೊ ಬಿರುಗಾಳಿಗೆ ಬೆದರಿದ ಆಫ್ರಿಕಾ; ಇಂಗ್ಲೆಂಡ್‌ 5 ವಿಕೆಟ್‌ ವಿಕ್ರಮ


Team Udayavani, Nov 28, 2020, 6:16 PM IST

ಟಿ20: ಬೇರ್‌ಸ್ಟೊ ಬಿರುಗಾಳಿಗೆ ಬೆದರಿದ ಆಫ್ರಿಕಾ; ಇಂಗ್ಲೆಂಡ್‌ 5 ವಿಕೆಟ್‌ ವಿಕ್ರಮ

ಕೇಪ್‌ಟೌನ್‌: ಜಾನಿ ಬೇರ್‌ಸ್ಟೊ ಅವರ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ದಕ್ಷಿಣ ಆಫ್ರಿಕಾ ಎದುರಿನ ದೊಡ್ಡ ಮೊತ್ತದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್‌ 5 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ.

ಕೇಪ್‌ಟೌನ್‌ನ “ನ್ಯೂಲ್ಯಾಂಡ್ಸ್‌’ನಲ್ಲಿ ನಡೆದ ಡೇ-ನೈಟ್‌ ಮುಖಾಮುಖಿಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ದಕ್ಷಿಣ ಆಫ್ರಿಕಾ 6 ವಿಕೆಟಿಗೆ 179 ರನ್‌ ಪೇರಿಸಿ ಸವಾಲೊಡ್ಡಿತು. ಚೇಸಿಂಗ್‌ ವೇಳೆ ಇಂಗ್ಲೆಂಡ್‌ 3 ವಿಕೆಟ್‌ಗಳನ್ನು ಕ್ಷಿಪ್ರಗತಿಯಲ್ಲಿ ಕಳೆದುಕೊಂಡರೂ ಬೇರ್‌ಸ್ಟೊ ಬಿರುಗಾಳಿಯಾಗಿ ಪರಿಣಮಿಸಿದರು. 19.2 ಓವರ್‌ಗಳಲ್ಲಿ 5 ವಿಕೆಟಿಗೆ 183 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು.

ರನ್‌ ಖಾತೆ ತೆರೆಯಲ್ಪಡುವ ಮೊದಲೇ ಆರಂಭಕಾರ ಜಾಸನ್‌ ರಾಯ್‌ ಪೆವಿಲಿಯನ್‌ ಸೇರಿಕೊಂಡರು. ಮತ್ತೋರ್ವ ಓಪನರ್‌ ಜಾಸ್‌ ಬಟ್ಲರ್‌ ಕೇವಲ 7 ರನ್‌ ಮಾಡಿ ನಿರ್ಗಮಿಸಿದರು. ಡೇವಿಡ್‌ ಮಾಲನ್‌ (19) 3ನೇ ವಿಕೆಟ್‌ ರೂಪದಲ್ಲಿ ವಾಪಸಾಗುವಾಗ ಇಂಗ್ಲೆಂಡ್‌ 5.3 ಓವರ್‌ಗಳಲ್ಲಿ 3 ವಿಕೆಟಿಗೆ 34 ರನ್‌ ಮಾಡಿ ಆತಂಕಕ್ಕೆ ಸಿಲುಕಿತ್ತು. ಆದರೆ 4ನೇ ಕ್ರಮಾಂಕದಲ್ಲಿ ಆಡಲಿಳಿದ ಬೇರ್‌ಸ್ಟೊ ಪಂದ್ಯದ ಚಿತ್ರಣವನ್ನೇ ಬದಲಿಸಿದರು.

8.2 ಓವರ್‌ಗಳಿಂದ 85 ರನ್‌
ಹರಿಣಗಳ ಮೇಲೆರಗಿ ಹೋದ ಬೇರ್‌ಸ್ಟೊ ಅಜೇಯ 86 ರನ್ನುಗಳ ಬೊಂಬಾಟ್‌ ಬ್ಯಾಟಿಂಗ್‌ ಪ್ರದರ್ಶಿಸಿದರು. 48 ಎಸೆತಗಳ ಈ ಸ್ಫೋಟಕ ಆಟದ ವೇಳೆ 9 ಬೌಂಡರಿ, 4 ಸಿಕ್ಸರ್‌ ಸಿಡಿಯಲ್ಪಟ್ಟಿತು. ಅವರಿಗೆ ಬೆನ್‌ ಸ್ಟೋಕ್ಸ್‌ (37) ಉತ್ತಮ ಬೆಂಬಲವಿತ್ತರು. ಈ ಜೋಡಿ 8.2 ಓವರ್‌ಗಳಿಂದ 85 ರನ್‌ ಸೂರೆಗೈದಿತು.

ದಕ್ಷಿಣ ಆಫ್ರಿಕಾ ಬ್ಯಾಟಿಂಗ್‌ ಸರದಿಯಲ್ಲಿ ಫಾ ಡು ಪ್ಲೆಸಿಸ್‌ 58, ವಾನ್‌ ಡರ್‌ ಡುಸೆನ್‌ 37, ಕ್ವಿಂಟನ್‌ ಡಿ ಕಾಕ್‌ 30 ರನ್‌ ಹೊಡೆದರು.

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ-6 ವಿಕೆಟಿಗೆ 179 (ಡು ಪ್ಲೆಸಿಸ್‌ 58, ಡುಸೆನ್‌ 37, ಡಿ ಕಾಕ್‌ 30, ಸ್ಯಾಮ್‌ ಕರನ್‌ 28ಕ್ಕೆ 3, ಆರ್ಚರ್‌ 28ಕ್ಕೆ 1).

ಇಂಗ್ಲೆಂಡ್‌-19.2 ಓವರ್‌ಗಳಲ್ಲಿ 4 ವಿಕೆಟಿಗೆ 183 (ಬೇರ್‌ಸ್ಟೊ ಔಟಾಗದೆ 86, ಸ್ಟೋಕ್ಸ್‌ 37, ಮಾಲನ್‌ 19, ಲಿಂಡೆ 20ಕ್ಕೆ 2, ಎನ್‌ಗಿಡಿ 31ಕ್ಕೆ 2).

ಪಂದ್ಯಶ್ರೇಷ್ಠ: ಜಾನಿ ಬೇರ್‌ಸ್ಟೊ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.