ಸಂಪುಟ ಸಂಕಟ ಸೋತವರಿಗೇಕೆ ಮಣೆ

ಯೋಗೇಶ್ವರ್‌ ಕೇಂದ್ರಬಿಂದು; ಮೂಲ-ವಲಸಿಗರ ಒಡಕಿನ ಮಾತು

Team Udayavani, Nov 29, 2020, 6:35 AM IST

ಸಂಪುಟ ಸಂಕಟ ಸೋತವರಿಗೇಕೆ ಮಣೆ

ಬೆಂಗಳೂರು: ಸಂಪುಟ ಕಸರತ್ತಿನ ಪ್ರಹಸನ ರಾಷ್ಟ್ರ ರಾಜಧಾನಿಯಿಂದ ಮತ್ತೆ ರಾಜ್ಯ ರಾಜಧಾನಿಗೆ ಸ್ಥಳಾಂತರಗೊಂಡಿದ್ದು, ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವಿನ ತಿಕ್ಕಾಟ ತೀವ್ರಗೊಂಡಿದೆ. ಇದರ ನಡುವೆ ಬಿಜೆಪಿ ಸರಕಾರ ರಚನೆಗೆ ಕಾರಣ ರಾದವರೆಂದು ಹೆಮ್ಮೆಯಿಂದ ಹೇಳಿಕೊಳ್ಳು ತ್ತಿದ್ದ ವಲಸಿಗರ ಒಗ್ಗಟ್ಟಿನಲ್ಲೇ ಬಿರುಕು ಮೂಡಿದಂತಿದೆ.

ಸಿ.ಪಿ. ಯೋಗೇಶ್ವರ್‌ ಅವರನ್ನು ಸಂಪುಟಕ್ಕೆ
ಸೇರಿಸಿಕೊಳ್ಳಬಾರದು ಎಂಬ ವಿಚಾರದಲ್ಲಿ ಪಟ್ಟು ಸಡಿಲಿಸದೆ ಒತ್ತಡ ತಂತ್ರ ಮುಂದು ವರಿಸಲು ಕೆಲವು ಮೂಲ ಬಿಜೆಪಿಗರು ತೀರ್ಮಾನಿಸಿದ್ದಾರೆ. ಸೋತವರಿಗೆ ಅವ ಕಾಶ ಕೊಡುವುದಾದರೆ ಮಾಲೀಕಯ್ಯ ಗುತ್ತೇದಾರ್‌, ಬಾಬೂರಾವ್‌ ಚಿಂಚನಸೂರ್‌ ಅವರಿಗೂ ಪರಿಷತ್‌ ಸದಸ್ಯರನ್ನಾಗಿಸಿ ಸಂಪುಟದಲ್ಲಿ ಅವಕಾಶ ಕೊಡಿ ಎಂಬ ಹೊಸ ವರಸೆ ಆರಂಭಿಸಿದ್ದಾರೆ.

ಇದರ ಜತೆಗೆ ವಲಸಿಗರ ಗುಂಪಿನ ಮುಂದಾಳತ್ವ ಮತ್ತು ಸಚಿವ ಸ್ಥಾನ ಕೊಡಿಸುವ ಕಾರ್ಯದ ನೇತೃತ್ವವನ್ನು ವಹಿಸಿದಂತೆ ನಡೆದುಕೊಳ್ಳುತ್ತಿರುವ ರಮೇಶ್‌ ಜಾರಕಿಹೊಳಿ ಅವರ ಬಗ್ಗೆ ವಲಸಿಗರಿಂದಲೇ ಅಪಸ್ವರ ಕೇಳಿಬಂದಿದೆ. ಸರಕಾರ ರಚನೆಗಾಗಿ ತ್ಯಾಗ ಮಾಡಿದವರಿಗಿಂತ ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ಅವರಿಗೆ ಸಚಿವ ಸ್ಥಾನ ಕೊಡಿಸಲು ವಕಾಲತ್ತು ವಹಿಸುತ್ತಿರುವುದು ಅವರ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ.

ಸಭೆ ಬಗ್ಗೆ ಜಾರಕಿಹೊಳಿ ಅತೃಪ್ತಿ
ಇದೇ ವಿಚಾರವಾಗಿ ಹಲವು ಸಚಿವರು, ಶಾಸಕರು ಶುಕ್ರವಾರ ರಾತ್ರಿ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ. ಇದಕ್ಕೆ ಬಹಿರಂಗ ವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ರಮೇಶ್‌ ಜಾರಕಿಹೊಳಿ, ಈ ರೀತಿಯ ಸಭೆ ನಡೆಸುವುದು ತಪ್ಪು ಎಂದು ಖಾರವಾಗಿ ಹೇಳಿದ್ದಾರೆ. ಇದು ಬಿಜೆಪಿ ಸೇರಿ ವರ್ಷ ಕಳೆಯುವ ಹೊತ್ತಿನಲ್ಲೇ ವಲಸಿಗರಲ್ಲಿ ಭಿನ್ನಾಭಿಪ್ರಾಯ ಮೂಡಿರುವ ಮಾತಿಗೆ ಪುಷ್ಟಿ ನೀಡಿದೆ.

“ಶುಕ್ರವಾರ ಸಭೆ ನಡೆಸಿದ ಯಾರನ್ನೂ ನಾನು ಭೇಟಿಯಾಗಿಲ್ಲ. ಅವರು ನನ್ನನ್ನು ಭೇಟಿ ಮಾಡಿದರೂ ಮಾಡದಿದ್ದರೂ ಅವರಿಗೋಸ್ಕರ ನಾನು ಹೋರಾಟ ಮುಂದುವರಿಸುತ್ತೇನೆ’ ಎಂದು ಜಾರಕಿಹೊಳಿ ಹೇಳಿದ್ದಾರೆ. ನಾನು 17 ಮಂದಿ ಶಾಸಕರ ನಾಯಕನಲ್ಲ. ಎಲ್ಲರಿಗೂ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಒತ್ತಾಯ. ಕೆಲವು ವಿಚಾರಗಳನ್ನು ನಾನು ಬಹಿರಂಗವಾಗಿ ಚರ್ಚಿಸುವಂತಿಲ್ಲ ಎಂದರು.

ಈ ಮಧ್ಯೆ ಸಚಿವ ಸ್ಥಾನ ಹಂಚಿಕೆ ವಿಳಂಬವಾಗುತ್ತಿರುವ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎಂ.ಟಿ.ಬಿ. ನಾಗರಾಜ್‌ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸೋತವರಿಗೆ ಸಚಿವ ಸ್ಥಾನ ಬೇಡವೆನ್ನುತ್ತಿರುವ ಶಾಸಕರ ಬಗ್ಗೆ ಪ್ರಸ್ತಾವಿಸಿದ ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌, ಯಾಕೋ ವಿವಾದ ತನ್ನ ಬೆನ್ನು ಹಿಡಿದಿದೆ ಎಂದು ಬೇಸರದಿಂದ ನುಡಿದಿದ್ದಾರೆ.

ಯೋಗೇಶ್ವರ್‌ಗೆ ಸಚಿವ ಸ್ಥಾನ ಕೊಡಿಸಲು ಕಸರತ್ತು ನಡೆದಿರುವ ಬಗ್ಗೆ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ರಾಜುಗೌಡ, ಸೋತ ಇತರರಿಗೂ ಸಚಿವ ಸ್ಥಾನ ಕೊಡುವುದ ಸೂಕ್ತ ಎಂಬುದಾಗಿ ಹೊಸ ವರಸೆ ಆರಂಭಿಸಿದ್ದಾರೆ. “ಯೋಗೇಶ್ವರ್‌ ಮೇಲೆ ಜಾರಕಿಹೊಳಿಗೆ ಪ್ರೀತಿ ಇದೆಯೇ ಎಂದು ಗೊತ್ತಿಲ್ಲ. ಎಚ್‌.ವಿಶ್ವನಾಥ್‌, ಎಂ.ಟಿ.ಬಿ. ನಾಗರಾಜ್‌, ಆರ್‌. ಶಂಕರ್‌ ಅವರಿಗೆ ಸಚಿವ ಸ್ಥಾನ ನೀಡಿದರೆ ಬೇಸರವಿಲ್ಲ. ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಬಾರದು ಎಂದು ನೇರವಾಗಿಯೇ ಹೇಳಿದ್ದೇನೆ. ಆದರೆ ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದು ಸಿಎಂ ಹೇಳಿದ್ದಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಿದರೆ ಬಾಬುರಾವ್‌ ಚಿಂಚನಸೂರ್‌, ಮಾಲೀಕಯ್ಯ ಗುತ್ತೇದಾರ್‌ಗೂ ನೀಡಲಿ ಎಂದರು.

ಬಿಎಸ್‌ವೈಗೆ ಜಾರಕಿಹೊಳಿ ಮಾಹಿತಿ
ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿದ್ದ ಸಚಿವ ರಮೇಶ್‌ ಜಾರಕಿಹೊಳಿ ಅವರು ಶನಿವಾರ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು. ದಿಲ್ಲಿಯಿಂದ ವಾಪಸಾದ ಜಾರಕಿಹೊಳಿ ಶನಿವಾರ ಬೆಳಗ್ಗೆ ಯಡಿಯೂರಪ್ಪ ಅವರನ್ನು “ಕಾವೇರಿ’ ನಿವಾಸದಲ್ಲಿ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ದಿಲ್ಲಿಯಲ್ಲಿ ವರಿಷ್ಠರೊಂದಿಗಿನ ಸಮಾಲೋಚನೆ ಮತ್ತಿತರ ವಿಚಾರಗಳ ಬಗ್ಗೆಯೂ ವಿವರಿಸಿದ್ದಾರೆ ಎನ್ನಲಾಗಿದೆ. ಅನಂತರ ಸದಾಶಿವನಗರದ ನಿವಾಸದಲ್ಲಿ ಜಾರಕಿಹೊಳಿ ಅವರನ್ನು ಭೇಟಿ ಯಾದ ಎಂ.ಟಿ.ಬಿ. ನಾಗರಾಜ್‌ ಸ್ವಲ್ಪ ಹೊತ್ತು ಚರ್ಚಿಸಿದರು. ಬಳಿಕ ಪ್ರತಿಕ್ರಿಯಿಸಿದ ಎಂ.ಟಿ.ಬಿ. ನಾಗರಾಜ್‌, ನಮಗೆ ಯಾರ ಮೇಲೂ ಅಸಮಾಧಾನವಿಲ್ಲ. ಜಾರಕಿಹೊಳಿ ಬಗ್ಗೆಯೂ ಬೇಸರವಿಲ್ಲ. ಸಚಿವ ಸ್ಥಾನ ನೀಡುವುದಾಗಿ ಸಿಎಂ ಹೇಳುತ್ತಲೇ ಇದ್ದಾರೆ. ಆದರೆ ಈ ವರೆಗೆ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಾವು 17 ಮಂದಿ ಒಟ್ಟಾಗಿಯೇ ಇದ್ದೇವೆ ಎಂದರು.

ನನಗೆ ನಲುವತ್ತು ವರ್ಷಗಳ ರಾಜಕೀಯ ಅನುಭವವಿದೆ. ನನ್ನ ಅನುಭವ ಪರಿಗಣಿಸಿ ಸಚಿವ ಸ್ಥಾನ ನೀಡಿದರೆ ಕೆಲಸ ಮಾಡಿ ತೋರಿಸುತ್ತೇನೆಯೇ ವಿನಾ ಸಚಿವ ಸ್ಥಾನಕ್ಕಾಗಿ ದಿಲ್ಲಿಗೆ ಅಲೆಯುವುದಿಲ್ಲ
-ಎಚ್‌. ವಿಶ್ವನಾಥ್‌, ವಿಧಾನ ಪರಿಷತ್‌ ಸದಸ್ಯ

ಕಾಂಗ್ರೆಸ್‌, ಜೆಡಿಎಸ್‌ಗೆ ರಾಜೀನಾಮೆ ಕೊಟ್ಟು ಬಂದು ಸಚಿವರಾಗಿ ಒಂದು ವರ್ಷವಾಗಿದೆ. ಅವರನ್ನು ವಲಸಿಗರು ಎಂದು ಕರೆಯಬೇಡಿ. ಅವರೆಲ್ಲ ಬಿಜೆಪಿಗೆ ಸೇರಿ ಶಕ್ತಿ ತುಂಬಿದ್ದಾರೆ.
-ಬಿ.ವೈ. ವಿಜಯೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.