ಬಾಹ್ಯಾಕಾಶದಲ್ಲಿ ಭಾರತ- ರಷ್ಯಾ ಉಪಗ್ರಹ ಮುಖಾಮುಖಿ: ಅಲ್ಪ ಅಂತರದಲ್ಲಿ ತಪ್ಪಿದ ಘರ್ಷಣೆ !
Team Udayavani, Nov 29, 2020, 12:55 PM IST
ನವದೆಹಲಿ: ಭಾರತ ಮತ್ತು ರಷ್ಯಾದ ಉಪಗ್ರಹಗಳು ಶುಕ್ರವಾರ (ನ.29) ಬಾಹ್ಯಾಕಾಶದಲ್ಲಿ ಮುಖಾಮುಖಿಯಾದ ಘಟನೆ ನಡೆದಿದ್ದು, ಅಲ್ಪ ಅಂತರದಲ್ಲಿ, ಘರ್ಷಣೆಯನ್ನು ತಪ್ಪಿಸಲಾಗಿದೆ ಎಂದು ವರದಿಯಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ರಿಮೋಟ್ ಸೆನ್ಸಿಂಗ್ ಉಪಗ್ರಹವು, ರಷ್ಯಾದ ಭೂ ವೀಕ್ಷಣಾ ಉಪಗ್ರಹ ‘ಕನೋಪಸ್-ವಿ’ ಗೆ ಅಪಾಯಕಾರಿಯಾಗಿ ಸಮೀಪಕ್ಕೆ ಬಂದಿದ್ದು , ಕೂಡಲೇ ನಡೆಯಬಹುದಾದ ಭಾರೀ ಘರ್ಷಣೆಯನ್ನು ತಪ್ಪಿಸಲಾಗಿದೆ. ಈ ಘಟನೆಯು ಭೂಮಿಯ ಸಮೀಪ ಕಕ್ಷೆಯಲ್ಲಿ ಸಂಭವಿಸಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.
ರಷ್ಯಾದ ಬಾಹ್ಯಕಾಶ ಸಂಸ್ಥೆಯಾದ ರೋಸ್ಕೋಸ್ ಮೊಸ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಭಾರತದ ಉಪಗ್ರಹವು ರಷ್ಯಾದ ಸ್ಯಾಟಿಲೈಟ್ ಗೆ 224 ಮೀಟರ್ ನಷ್ಟು ಸಮೀಪ ಬಂದಿದ್ದು, ಕೂಡಲೇ ನಡೆಯಬಹುದಾಗಿದ್ದ ಘರ್ಷಣೆಯನ್ನು ತಪ್ಪಿಸಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಲವ್ ಜಿಹಾದ್ ಕಾಯ್ದೆ ತರುವಮೊದಲು ಯಾವ ನಾಯಕರ ಮಕ್ಕಳುಯಾರನ್ನು ಲವ್ ಮಾಡಿದ್ದಾರೆ ನೋಡಲಿ:ಡಿಕೆಶಿ
ಈ ಕುರಿತು ಪ್ರತಿಕ್ರಿಯೆ ನೀಡಿದ ಇಸ್ರೋ, ರಷ್ಯಾದ ಉಪಗ್ರಹವು ಸುಮಾರು 420 ಮೀಟರ್ ದೂರದಲ್ಲಿತ್ತು. ಕಳೆದ 4 ದಿನಗಳಿಂದ ಇದನ್ನು ನಿರಂತರವಾಗಿ ಪರಿಶೀಲನೆ ಮಾಡಲಾಗುತ್ತಿತ್ತು. 150 ಮೀಟರ್ ಸಮೀಪಕ್ಕೆ ಬಂದಿದ್ದರೇ ಮಾತ್ರ ಅಪಾಯಕಾರಿಯಾಗಿ ಪರಣಮಿಸುವ ಸಾಧ್ಯತೆಯಿತ್ತು ಎಂದು ತಿಳಿಸಿದೆ.
ಬಾಹ್ಯಾಕಾಶದಲ್ಲಿ ಈ ರೀತಿಯ ವಿದ್ಯಾಮಾನ ಜರಗುವುದು ಸಾಮಾನ್ಯ. ಸಾವಿರಾರು ಉಪಗ್ರಹಗಳು ಇರುವ ಸಂದರ್ಭದಲ್ಲಿ ಎದುರುಬದುರಾಗುವುದು ನಿರೀಕ್ಷಿತ. ಇದೀಗ ಎರಡು ಬಾಹ್ಯಾಕಾಶ ಸಂಸ್ಥೆಗಳು ನಡೆಯಬಹುದಾಗಿದ್ದ ಘರ್ಷಣೆಯನ್ನು ತಪ್ಪಿಸಿವೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ತಿಳಿಸಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ನೀವು ಧೈರ್ಯವಾಗಿ ಮುನ್ನುಗ್ಗಿ: ಮುರುಘಾ ಶರಣರ ಅಭಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ