ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಹೋಗಿದೆ;ದೇಶದ್ರೋಹಿಗಳನ್ನು ಮಟ್ಟ ಹಾಕುವುದು ಖಂಡಿತಾ: CT ರವಿ
Team Udayavani, Nov 29, 2020, 5:40 PM IST
ಚಿಕ್ಕಮಗಳೂರು: ಉಗ್ರವಾದಿಗಳು ಹೋಗಬೇಕಿರುವುದು ಮಸಣಕ್ಕೆ. ಅವರನ್ನ ಅಲ್ಲಿಗೆ ಕಳಿಸುವ ಕೆಲಸವನ್ನು ಪೊಲೀಸ್ ಮತ್ತು ಸೇನೆ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಗೋಡೆ ಮೇಲೆ ದೇಶದ್ರೋಹ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಹೋಗಿದೆ, ಆ ವ್ಯವಸ್ಥೆ ಈಗಿಲ್ಲ. ಉಗ್ರರಿಗೆ ಮಣೆ ಹಾಕಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆಯೂ ನಿಂತಿದೆ. ಕಾಶ್ಮೀರದಲ್ಲೇ ಉಗ್ರರ ತಲೆ-ಬಾಲ ಕತ್ತರಿಸಿದ್ದೇವೆ. ಇಲ್ಲಿ ಬಾಲ ಬಿಚ್ಚಿದ್ರೆ ಬಾಲ ಮಾತ್ರವಲ್ಲ ಉಳಿದದ್ದೂ ಕಟ್ ಆಗುವುದು ಎಂದು ಕಿಡಿಕಾರಿದ್ದಾರೆ.
ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ಕುರಿತಾಗಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ಸಿ.ಟಿ. ರವಿ, ತಮ್ಮ ಪಕ್ಷದ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿರುವವರ ಪರ ರಕ್ಷಣೆ ಮಾತನಾಡುತ್ತೀರಾ. ಸಂತ್ರಸ್ತ ಶಾಸಕರು ದೂರು ನೀಡಿದರೂ ಏನೂ ಕ್ರಮ ಕೈಗೊಂಡಿಲ್ಲ ಏಕೆ ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಅಣ್ಣನನ್ನು ತಂಡಕ್ಕೆ ಸೇರಿಸಿಕೊಳ್ಳಲು ಹಾರ್ದಿಕ್ ಪಾಂಡ್ಯ ಪರೋಕ್ಷ ಸಂದೇಶ
ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ. ಅದಕ್ಕೂ ಮುಂಚೆಯೇ ಆರೋಪ ಮಾಡೋಕೆ ಸರಿಯಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ಸ್ವಯಂ ಪ್ರೇರಿತರಾಗಿ ರಾಜ್ಯದ ವಿದ್ಯಾಮಾನದ ಬಗ್ಗೆ ತಲೆಹಾಕಲ್ಲ. ಪಕ್ಷದ ಸೂಚನೆಯಿಲ್ಲದೆ ಯಾವುದೇ ಮಾತನಾಡುವುದಿಲ್ಲ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮರ್ಥರಿದ್ದಾರೆ. ಅವರೇ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರ ಜೊತೆ ಸಮಲೋಚನೆ ನಡೆಸುತ್ತಾರೆ. ಮಾತ್ರವಲ್ಲದೆ ಅಗತ್ಯವಿರುವ ಸಲಹೆ ಸೂಚನೆ ನೀಡ್ತಾರೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರಿಗೆ ಬಿಟ್ಟಿದ್ದು ಎಂದರು.
ಇದನ್ನೂ ಓದಿ: ಅಫ್ಘಾನಿಸ್ಥಾನ ಸೇನಾ ನೆಲೆ ಗುರಿಯಾಗಿಸಿ ಕಾರ್ ಬಾಂಬ್ ಸ್ಪೋಟ; 31 ಸೈನಿಕರ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ