ಸ್ವಜಾತಿಯವರಿಂದಲೇ ದಂಪತಿಗೆ ಸಾಮಾಜಿಕ ಬಹಿಷ್ಕಾರ


Team Udayavani, Nov 30, 2020, 1:21 PM IST

ಸ್ವಜಾತಿಯವರಿಂದಲೇ ದಂಪತಿಗೆ ಸಾಮಾಜಿಕ ಬಹಿಷ್ಕಾರ

ಯಳಂದೂರು: ತಾಲೂಕಿನಲ್ಲಿ ಬಹಿಷ್ಕಾರ ಪಿಡುಗು ಹೋಗುತ್ತಿಲ್ಲ ಎನ್ನುವುದಕ್ಕೆ ಮತ್ತೂಂದು ಸಾಮಾಜಿಕ ಬಹಿಷ್ಕಾರ ಸಾಕ್ಷಿಯಾಗಿದೆ. ಇತ್ತೀಚೆಗೆ ತಾಲೂಕಿನ ಹೊನ್ನೂರು, ಗಣಿಗನೂರು ಗ್ರಾಮದಲ್ಲಿ ಪ್ರಕರಣಗಳು ನಡೆದಿತ್ತು. ಇದು ಮರೆ ಮಾಚುವ ಮುನ್ನವೇ ದುಗ್ಗಹಟ್ಟಿ ಗ್ರಾಮದಲ್ಲಿ ಮತ್ತೂಂದು ಇಂತಹದ್ದೆ ಅಮಾನವೀಯ ಘಟನೆ ನಡೆದಿದೆ.

ಗ್ರಾಮದ ಪರಿಶಿಷ್ಟ ಜಾತಿಯ ಬೀದಿಯ ನಿವಾಸಿ ನಂಜುಂಡಸ್ವಾಮಿ, ಸರೋಜಮ್ಮ ದಂಪತಿ ಕುಟುಂಬಕ್ಕೆ ಸ್ವಜಾತಿಯವರೇ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್‌ ಹಾಗೂ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಬಹಿಷ್ಕಾರದ ಹಿನ್ನೆಲೆ: ದುಗ್ಗಹಟ್ಟಿ ಗ್ರಾಮದ ಹೊರ ಭಾಗದಲ್ಲಿರುವ ನಂಜುಂಡಸ್ವಾಮಿಗೆ ಸೇರಿರುವ ಸರ್ವೆ ನಂ 9/7ರಲ್ಲಿನ 1.01 ಎಕರೆ ಜಮೀನನ್ನು ನಿವೇಶನ ಮಾಡುವಂತೆ ಇದೇ ಜನಾಂಗದ ಗ್ರಾಮ ಮುಖಂಡರು ಒತ್ತಡ ಹಾಕಿದ್ದರು. ಆದರೆ, ಇದಕ್ಕೆ ನಂಜುಂಡಸ್ವಾಮಿ ಒಪ್ಪದಿದ್ದಾಗ ಗ್ರಾಮದ ಚರಂಡಿ ನೀರನ್ನು ಕೃಷಿ ಭೂಮಿಗೆ ತುಂಬಿಸಿದ್ದಾರೆ. ಇದರಿಂದ ಈ ವ್ಯವಸಾಯದ ಭೂಮಿಯಲ್ಲಿ ಯಾವುದೇ ಫ‌ಸಲನ್ನು ಬೆಳೆಯಲು ಆಗುತ್ತಿಲ್ಲ. ಇದಕ್ಕಾಗಿ ಈ ಜನಾಂಗದ ಮುಖಂಡರು ನಂಜುಂಡ ಸ್ವಾಮಿ ಕುಟುಂಬವನ್ನು ಕೂಲಿ ಕೆಲಸಕ್ಕೆ ಕರೆಯಬಾರದು, ಶುಭ ಕಾರ್ಯಗಳಿಗೆ ಆಹ್ವಾನಿಸಬಾರದು, ಅಂಗಡಿಗಳಲ್ಲಿ ಸಾಮಗ್ರಿಗಳನ್ನು ನೀಡಬಾರದು. ಇವರನ್ನು ಮಾತನಾಡಿಸಿದರೆ 10 ಸಾವಿರ ರೂ. ದಂಡವನ್ನು ವಿಧಿಸುವಂತೆ ಫ‌ರ್ಮಾನು ಹೊರಡಿಸಿದ್ದಾರೆ. ಹಾಗಾಗಿ ನಮ್ಮ ಕುಟುಂಬ ಗ್ರಾಮದಲ್ಲಿ ವಾಸವಾಗಿರುವ ನಮ್ಮ ಕುಟುಂಬಕ್ಕೆ ಜೀವನ ಸಾಗಿಸುವುದು ಕಷ್ಟವಾಗಿದೆ ಎಂದು ಈ ದಂಪತಿ ದೂರು ಸಲ್ಲಿಸಿದ್ದಾರೆ.

ನಿರ್ಬಂಧ ಹೇರಿಲ್ಲ: ಈ ಬಗ್ಗೆ ಗ್ರಾಮದ ಮುಖಂಡರು ಪ್ರತಿಕ್ರಿಯಿಸಿ, ಗ್ರಾಮದಲ್ಲಿ ನಂಜುಂಡಸ್ವಾಮಿ ಕುಟುಂಬಕ್ಕೆ ನಾವು ಯಾವುದೇ ನಿರ್ಬಂಧ ಹೇರಿಲ್ಲ. ಇವರ ಆರೋಪ ನಿರಾಧಾರವಾಗಿದೆ. ವೈಯುಕ್ತಿಕ ವಿಚಾರವಾಗಿ ಗೊಂದಲ ಇರುವುದರಿಂದ ಇವರು ಆರೋಪಿಸುತ್ತಿರುವುದು ಸಮಂಜಸವಲ್ಲ ಎಂದು ತಿಳಿಸಿದ್ದಾರೆ.

ಈ ಹಿಂದೆ ಜಾಗದ ವಿಚಾರವಾಗಿ 2015 ರಲ್ಲೇ ದೂರು ದಾಖಲಾಗಿದೆ. ಈ ಬಗ್ಗೆ ಈಗಾಗಲೇ ನಂಜುಂಡಸ್ವಾಮಿ ನೀಡಿರುವ ದೂರು ದಾಖಲಿಸಿಕೊಳ್ಳಲಾಗಿದ್ದು, ಸೋಮವಾರ ಇಬ್ಬರನ್ನೂಕೂರಿಸಿ ಈ ಸಮಸ್ಯೆಯನ್ನು ಬಗೆಹರಿಸಲುಕ್ರಮ ವಹಿಸಲಾಗುವುದು. ಸುದರ್ಶನ್‌, ತಹಶೀಲ್ದಾರ್

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.