ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ


Team Udayavani, Nov 30, 2020, 8:15 PM IST

ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಳಿಸಿರುವುದಕ್ಕೆ ಹೆಚ್ಚುವರಿ ಪಡಿತರದ ಜೊತೆಗೆ ಪರಿಹಾರ ಭತ್ಯೆಯನ್ನೂ ನೀಡುವ ಕುರಿತು ವಿವರಣೆ ನೀಡಲು ಡಿ.8ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಖುದ್ದು ವಿಚಾರಣೆಗೆ ಹಾಜರಾಗುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ಅವರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕೊರೊನಾ ಸೋಂಕಿನಿಂದ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆಗಳ ಕುರಿತು ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌ ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ನಿರ್ದೇಶನ ನೀಡಿತು.

ಅಲ್ಲದೇ 2020ರ ಮಾ.24ರಿಂದ ನ.30ರವರೆಗೆ ಅಂಗನವಾಡಿ ಮಕ್ಕಳಿಗೆ ಪೂರೈಕೆ ಮಾಡಿರುವ ಆಹಾರ ಧಾನ್ಯಗಳ ವಿವರಗಳನ್ನು ನೀಡುವಂತೆಯೂ ಸರ್ಕಾರಕ್ಕೆ ಹೈಕೋರ್ಟ್‌ ಇದೇ ವೇಳೆ ನಿರ್ದೇಶನ ನೀಡಿ, ಸರ್ಕಾರ ಸಲ್ಲಿಸುವ ವಿವರಗಳನ್ನು ಪರಿಶೀಲಿಸಿದ ಬಳಿಕ ಸೂಕ್ತ ಆದೇಶಗಳನ್ನು ನೀಡಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ.

ಇದನ್ನೂ ಓದಿ:ಬೇಕಿದ್ದ ಮಾತ್ರೆ ಬಿಟ್ಟು ಬೇರೆ ಮಾತ್ರೆ ಸೇವಿಸಿದ್ದರಿಂದ ಇಷ್ಟೆಲ್ಲ ಆಯಿತು :N.R‌.ಸಂತೋಷ್‌

ಇದಕ್ಕೂ ಮೊದಲು ವಿಚಾರಣೆ ವೇಳೆ, ಸರ್ಕಾರದ ಪರ ವಾದ ಮಂಡಿಸಿದ ವಕೀಲ ವಿಕ್ರಂ ಹುಯಿಲಗೋಳ, ಕೇಂದ್ರ ಸರ್ಕಾರದ ಆದೇಶದಂತೆ ಪಡಿತರ ಧಾನ್ಯಗಳ ಜೊತೆಗೆ ಅದನ್ನು ಬೇಯಿಸಲು ಆಗುವ ಖರ್ಚನ್ನೂ ಕೂಡ ಲೆಕ್ಕ ಹಾಕಿ ಹೆಚ್ಚುವರಿ ಪಡಿತರ ನೀಡಲಾಗುತ್ತಿದೆ. ಇದರಲ್ಲಿ ಯಾವುದೆ ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡರು.

ಆದರೆ ನ್ಯಾಯಾಲಯ, ಕೇಂದ್ರ ಸರ್ಕಾರ ಜು.31ರಂದು ರಾಜ್ಯಗಳಿಗೆ ನೀಡಿರುವ ನಿರ್ದೇಶನವನ್ನು ರಾಜ್ಯ ಸರ್ಕಾರ ತಪ್ಪಾಗಿ ಅರ್ಥೈಸಿಕೊಂಡಿದೆ, ಅದರಂತೆ ಪಡಿತರದ ಜೊತೆಗೆ ಅದನ್ನು ಬೇಯಿಸಲು ಆಗುವ ಹಣವನ್ನೂ ಸಹ ಪರಿಹಾರದ ರೂಪದಲ್ಲಿ ನೀಡಬೇಕಾಗುತ್ತದೆ ಎಂದು ಹೇಳಿತು.

ಸರ್ಕಾರಿ ವಕೀಲರು, ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಸ್ಥಗಿತಿಗೊಳಿಸಲಾಗಿದೆ. ಅದರ ಬದಲಿಗೆ ಮಕ್ಕಳಿಗೆ ಪಡಿತರ ನೀಡಲಾಗುತ್ತಿದೆ. ಆ ಪಡಿತರದ ಜೊತೆಗೆ ಅಡುಗೆ ಬೇಯಿಸುವ ವೆಚ್ಚ (ಕುಕಿಂಗ್‌ ಕಾಸ್ಟ್‌)ಗೆ ಬದಲಾಗಿ ತೊಗರಿಬೇಳೆ ನೀಡಲಾಗುತ್ತಿದೆ. ಮತ್ತೆ ಹೆಚ್ಚುವರಿ ಪರಿಹಾರವನ್ನು ನೀಡಲಾಗದು ಎಂದು ವಿವರಿಸಿದರು. ಅದನ್ನು ಒಪ್ಪದ ನ್ಯಾಯಪೀಠ, ರಾಜ್ಯ ಸರ್ಕಾರ ಕೇಂದ್ರದ ನಿರ್ದೇಶನವನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ, ಬೇಯಿಸುವ ವೆಚ್ಚ ನೀಡಲೇಬೇಕು ಎಂದು ಹೇಳಿತು.

ಇದನ್ನೂ ಓದಿ:ಅರಬ್ಬಿ ಸಮುದ್ರದಲ್ಲಿ ಮಿಗ್‌-29 ವಿಮಾನದ ಭಗ್ನಾವಶೇಷ ಪತ್ತೆ

ಅರ್ಜಿದಾರರ ಪರ ವಕೀಲ ಕ್ಲಿಫ್ಟನ್‌ ರೊಜಾರಿಯೋ, ಮಧ್ಯಾಹ್ನದ ಬಿಸಿಯೂಟ ವಿತರಣೆ ಸಂಬಂಧಿಸಿದ ಸುಪ್ರೀಂಕೋರ್ಟ್‌ ಹಾಗೂ ಕೇಂದ್ರದ ಆದೇಶಗಳನ್ನು ರಾಜ್ಯ ಸರ್ಕಾರ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಮಕ್ಕಳಿಗೆ ತೀವ್ರ ತೊಂದರೆಯಾಗಿದೆ ಎಂದರು.

ಹಿರಿಯ ನ್ಯಾಯವಾದಿ ಜೊಯ್ನಾ ಕೊಠಾರಿ, ಮಕ್ಕಳಿಗೆ ಹಿಂದೆ ನೀಡುತ್ತಿದ್ದ ಹಾಲು ಹಾಗೂ ಮೊಟ್ಟೆಗಳನ್ನೂ ಸ್ಥಗಿತಗೊಳಿಸಲಾಗಿದೆ. ಅಂಗನವಾಡಿ ಮಕ್ಕಳಿಗೆ ನೀಡಿರುವ ಪಡಿತರದ ಬಗ್ಗೆ ವಿವರ ನೀಡಿಲ್ಲ, ಜೊತೆಗೆ ಮಾತೃವಂದನಾ ಯೋಜನೆಯಲ್ಲಿ ಎಷ್ಟು ಗರ್ಭಿಣಿಯರಿಗೆ ಪ್ರೋತ್ಸಾಹಧನ ವಿತರಣೆ ಮಾಡಲಾಗಿದೆ ಎಂಬ ಮಾಹಿತಿಯನ್ನೂ ಸಹ ನೀಡಿಲ್ಲ ಎಂದರು.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.