ಬಸ್‌ ನಿಲ್ದಾಣ ಕಾಮಗಾರಿಗೆ ಅಡ್ಡಿಪಡಿಸಿಲ್ಲ: ನಾಡಗೌಡ


Team Udayavani, Dec 1, 2020, 3:46 PM IST

ಬಸ್‌ ನಿಲ್ದಾಣ ಕಾಮಗಾರಿಗೆ ಅಡ್ಡಿಪಡಿಸಿಲ್ಲ: ನಾಡಗೌಡ

ನಾಲತವಾಡ: ಇಲ್ಲಿನ ಬಸ್‌ನಿಲ್ದಾಣ ಕಾಮಗಾರಿಗೆ ನಾನು ಅಡ್ಡಿಪಡಿಸುತ್ತಿದ್ದೇನೆಂದು ಬಿಜೆಪಿ ಧುರೀಣ ಎಂ.ಎಸ್‌.ಪಾಟೀಲರು ಆರೋಪಿಸಿದ್ದು ಸುಳ್ಳು. ನನ್ನ ಹೆಸರು ಬಳಸಿ ತಾವು ಪ್ರಚಾರ ಪಡೆದುಕೊಳ್ಳಲು ಹೀಗೆ ಮಾಡುತ್ತಿದ್ದಾರೆ ಎಂದು ಪಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಪೃಥ್ವಿರಾಜ್‌ನಾಡಗೌಡ ತಿರುಗೇಟು ನೀಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲೂರ ಗ್ರಾಪಂ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಕಾಮಗಾರಿಗಳಿಗೆ ಚಾಲನೆ ನೀಡುವ ಸಂದರ್ಭ ಇಲ್ಲಸಲ್ಲದ ಆರೋಪ ಮಾಡಿರುವುದು ಹತಾಶೆಯ ಪ್ರತೀಕ. ನಿಲ್ದಾಣ ಜಾಗ ಪಪಂ ಹೆಸರಲ್ಲಿದ್ದು ಪಪಂಗೆ ಆದಾಯ ತಂದುಕೊಡುವ ಮಾರುಕಟ್ಟೆ ನಿರ್ಮಾಣಕ್ಕೆ ಹಿಂದಿನ ಪಪಂ ಆಡಳಿತದಲ್ಲಿ ನಿರ್ಣಯಿಸಲಾಗಿತ್ತು. ಬೇರೆಡ ಇರುವ 4 ಎಕರೆ ಜಾಗದಲ್ಲಿ ನಿಲ್ದಾಣ ಕಟ್ಟಲು ಪತ್ರ ಬರೆದಿದ್ದೆವು. ಡಿಸಿಎಂ ಸವದಿ ಇಲ್ಲಿಗೆ ಬಂದಾಗಲೂ ಮನವಿ ಸಲ್ಲಿಸಿದ್ದೆವು. ಇದೆಲ್ಲ ಗೊತ್ತಿದ್ದರೂ ಜನರ ಸಹಾನುಭೂತಿ ಗಿಟ್ಟಿಸಲು ಸುಳ್ಳು ಆರೋಪ ಹರಿಬಿಡುತ್ತಿದ್ದಾರೆ. ನಾನು ಸಾರಿಗೆ ಸಂಸ್ಥೆಯ ಎಇಇಗೆ ಫೋನ್‌ ಮಾಡಿ ಕಾಮಗಾರಿ ಬಂದ್‌ ಮಾಡಲುಧಮಕಿ ಹಾಕಿದ್ದೇನೆ ಎನ್ನುವ ಆರೋಪವನ್ನು ಪಾಟೀಲರು ಸಾಬೀತುಪಡಿಸಬೇಕು ಎಂದು ಸವಾಲೆಸೆದರು.

ಪಾಟೀಲ ಅನುಕೂಲಸಿಂಧು ರಾಜಕಾರಣಿ. ಗೆದ್ದೆತ್ತಿನ ಬಾಲ ಹಿಡಿಯೋ ಸ್ವಭಾವದವರು. ವೀರೇಶ್ವರ ಶರಣರ ಶತಮಾನೋತ್ಸವಕ್ಕೆ ಜನರಿಂದ ಸಂಗ್ರಹಿಸಿದ ಹಣದಲ್ಲಿ 40 ಲಕ್ಷ ಉಳಿತಾಯವಾಗಿದೆ ಎಂದಿದ್ದರು. ಆ ಹಣದಲ್ಲಿ ಶರಣರ ದ್ವಾರ ಮಾಡಬೇಕೆನ್ನುವುದು ಜನರ ಬೇಡಿಕೆಯಾಗಿತ್ತು. ಇದರ ಬಗ್ಗೆ ಪಾಟೀಲರು ಉತ್ತರಿಸಿ ಆಮೇಲೆ ನನ್ನ ಬಗ್ಗೆ ಮಾತಾಡಲಿ ಎಂದು ಕುಟುಕಿದರು.

ವೀರೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪಾಟೀಲರು ನಿರ್ದೇಶಕರಾದ ಮೇಲೆ ದೊಡ್ಡ ಹಗರಣ ನಡೆದಿದೆ. ತಮ್ಮ ಲಾಭಕ್ಕಾಗಿ ಯಾವ ಮಟ್ಟಕ್ಕೂ ಇಳಿಯುವಂಥವರಿಂದ ನಾನು ಪಾಠ ಕಲಿಯುವುದು ಅಗತ್ಯವಿಲ್ಲ. ದೇಶಮುಖ, ನಾಡಗೌಡರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗಿಲ್ಲ. ಈ ಹಿಂದೆ ಮಾಜಿ ಸಚಿವರಾಗಿದ್ದ ದೇಶಮುಖರಒಡನಾಟದಲ್ಲೇ ಬೆಳೆದು, ಬೆನ್ನಿಗೆ ಚೂರಿ ಹಾಕಿ ಸ್ವಾರ್ಥ ಸಾಧಿಸಿಕೊಂಡಿದ್ದವರು ಈಗ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿಯವರ ಒಡನಾಟದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಬೆನ್ನಿಗೂ ಚೂರಿ ಹಾಕಿದರೆ ಯಾರೂ ಅಚ್ಚರಿಪಡಬೇಕಿಲ್ಲ. ಅವರ ಎಲ್ಲ ಹಗರಣ ಜನತೆ ಮುಂದಿಡಲು ತಯಾರಾಗಿದ್ದೇನೆ ಎಂದರು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.