ಏಡ್ಸ್ ರೋಗಿಗಳಿಗೆ ವಾರ್ಷಿಕ ಐದು ಲಕ್ಷ ವೆಚ್ಚದಲ್ಲಿ ಉಚಿತ ಔಷಧಿ: ಡಾ.ಕೆ.ಸುಧಾಕರ್
Team Udayavani, Dec 1, 2020, 4:10 PM IST
ಬೆಂಗಳೂರು: ರಾಜ್ಯದ ಎಲ್ಲಾ ಏಡ್ಸ್ ರೋಗಿಗಳಿಗೆ ಪ್ರತಿ ವರ್ಷ ತಲಾ ಐದು ಲಕ್ಷ ರೂ. ವೆಚ್ಚದಲ್ಲಿ ಔಷಧಗಳನ್ನು ಉಚಿತವಾಗಿ ವಿತರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.
ವಿಶ್ವ ಏಡ್ಸ್ ದಿನದ ಅಂಗವಾಗಿ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯು ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಬಡತನ ರೇಖೆಯ ಕೆಳಗಿರುವ (ಬಿಪಿಎಲ್) ಏಡ್ಸ್ ರೋಗಿಗಳಿಗೆ ಉಚಿತ ಔಷಧ ವಿತರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಐದು ಕೋಟಿ ರೂ.ಹೆಚ್ಚುವರಿ ಅನುದಾನ ಲಭ್ಯವಿದ್ದು, ಜತೆಗೆ ರಾಜ್ಯ ಸರ್ಕಾರದಿಂದ ನೆರವು ನೀಡುವ ಮೂಲಕ ಬಿಪಿಎಲ್ ಮತ್ತು ಎಪಿಎಲ್ ಒಳಗೊಂಡಂತೆ ಎಲ್ಲಾ ವರ್ಗದ ಏಡ್ಸ್ ರೋಗಿಗಳಿಗೆ ವಾರ್ಷಿಕ ತಲಾ ಐದು ಲಕ್ಷ ರೂ. ವೆಚ್ಚ ಮಾಡುವ ಮೂಲಕ ಉಚಿತ ಔಷಧಿಯನ್ನು ವಿತರಿಸಬೇಕು. ಈ ನಿಟ್ಟಿನಲ್ಲಿ ಏಡ್ಸ್ ನಿಯಂತ್ರಣ ಸೊಸೈಟಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ:ಕರ್ನಾಟಕ ಬಂದ್ ಗೆ ಕರೆ ನೀಡಿದವರ ಆಸ್ತಿ ಜಪ್ತಿ ಮಾಡಿ! ಡಿ.5ರ ಬಂದ್ ವಿರೋಧಿಸಿ ಪ್ರತಿಭಟನೆ
ಏಡ್ಸ್ ರೋಗಿಗಳ ನಿರ್ವಹಣೆ ನಿಟ್ಟಿನಲ್ಲಿ ಸಾಕಷ್ಟು ಸಂಶೋಧನೆಗಳು ನಡೆದಿವೆ. ರೋಗವು ಸಂಪೂರ್ಣ ಗುಣಮುಖರಾಗದಿದ್ದರೂ, ರೋಗಿಯು ದೀರ್ಘಕಾಲ ಸಹಜ ಜೀವನ ನಡೆದುವಂತೆ ಔಷಧ ಮತ್ತು ಚಿಕಿತ್ಸಾ ವಿಧಾನಗಳನ್ನು ಪತ್ತೆ ಮಾಡಲಾಗಿದೆ. ಸುಮಾರು 40 ವರ್ಷಗಳಿಂದ ಔಷಧ ಸೇವಿಸಿ ಬದುಕುತ್ತಿರುವ ರೋಗಿಗಳು ಇದ್ದಾರೆ. ಔಷಧ ಸೇವನೆ ಮಟ್ಟ ನಿತ್ಯ ಒಂಬತ್ತು ಮಾತ್ರೆಗಳಿಂದ ಒಂದು ಮಾತ್ರೆ ಸೇವನೆ ಹಂತಕ್ಕೆ ತಲುಪಿದೆ. ಸದ್ಯ ರಾಜ್ಯದಲ್ಲಿ 1.68 ಲಕ್ಷ ಏಡ್ಸ್ ರೋಗಿಗಳು ಎಆರ್ಟಿ ಸೆಂಟರ್ಗಳಲ್ಲಿ ನೋಂದಣಿಯಾಗುವ ಮೂಲಕ ಚಿಕಿತ್ಸೆ ಮತ್ತು ಔಷಧ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಒಂದು ಲಕ್ಷ ರೋಗಿಗಳು ಚಿಕಿತ್ಸೆಗೆ ಹಿಂದೇಟು ಹಾಕುತ್ತಿದ್ದಾರೆ. ಇಂತಹವರನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಏಡ್ಸ್ ರೋಗಿಗಳಿಗೆ ಮೊದಲೇ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಇಂತಹವರಿಗೆ ಕೊರೊನಾ ಬಂದರೆ ಉಳಿಸಿಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯವಿತ್ತು. ಈವರೆಗೂ ರಾಜ್ಯದಲ್ಲಿ 280 ಏಡ್ಸ್ ರೋಗಿಗಳಿಗೆ ಕೊರೊನಾ ತಗುಲಿದ್ದು, ಈ ಪೈಕಿ ಐದು ಮಂದಿ ಮಾತ್ರ ಮೃತಪಟ್ಟಿದ್ದಾರೆ. ಕೊರೊನಾ ಸಂದರ್ಭದಲ್ಲಿ ಔಷಧ ಸಮಸ್ಯೆಯಾಗಬಾರದು ಎಂದು ಮೂರು ತಿಂಗಳ ಔಷಧವನ್ನು ರೋಗಿಗಳ ಮನೆಗೆ ಕಳುಹಿಸಿಕೊಡಲಾಗಿತ್ತು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಶ್ರಮ ಶ್ಲಾಘನೀಯ ಎಂದರು.
ಇದನ್ನೂ ಓದಿ:ತೆಲಂಗಾಣ ಕೋಟೆಗೆ ಬಿಜೆಪಿ ಲಗ್ಗೆ ಇಟ್ಟಿದ್ದು ಹೇಗೆ? ದಿಢೀರ್ ಬೆಳವಣಿಗೆಗೆ ಕಾರಣವೇನು…
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ.ಉದಯ್ ಬಿ.ಗರುಡಾಚಾರ್ ವಹಿಸಿಕೊಂಡಿದ್ದರು. ಆರೋಗ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಪಂಕಜ್ ಕುಮಾರ್ ಪಾಂಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವೇಳೆ ಏಡ್ಸ್ ನಿಯಂತ್ರಣದಲ್ಲಿ ಉತ್ತಮ ಕಾರ್ಯಾಚರಣೆ ನಡೆಸಿದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆ ಮತ್ತು ಏಡ್ಸ್ ನಿಯಂತ್ರಣ ಸೊಸೈಟಿ ಸಿಬ್ಬಂದಿಗೆ ಸನ್ಮಾನಿಸಿ ಬಹುಮಾನ ವಿತರಿಸಲಾಯಿತು.
2030 ಏಡ್ಸ್ ನಿರ್ಮೂಲನೆ ಗುರಿ
ಕರ್ನಾಟಕದಲ್ಲಿ 2030 ವೇಳೆ ಏಡ್ಸ್ ನಿರ್ಮೂಲನೆ ಮಾಡಬೇಕು ಎಂಬ ಸಂದೇಶವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಈ ಹಾದಿಯಲ್ಲಿ ಸರ್ಕಾರದ ಜತೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈಜೋಡಿಸಬೇಕು. ಜಾಗೃತಿ ಮೂಡಿಸು, ಸ್ವಯಂ ಮುಂಜಾಗ್ರತೆ ಕೈಗೊಳ್ಳುವ ಹಾಗೂ ಏಡ್ಸ್ ರೋಗಿಗಳನ್ನು ದೂಷಿಸದೆ ಸಾಮಾನ್ಯರಂತೆ ನಡೆಸಿಕೊಳ್ಳುವ ಹಾದಿಯಲ್ಲಿ ಸಾಗಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ