200 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ: ಚಂದ್ರಪ್ಪ
Team Udayavani, Dec 1, 2020, 4:58 PM IST
ಹೊಳಲ್ಕೆರೆ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ 1500 ಕೋಟಿ ರೂ. ಅನುದಾನ ತಂದಿದ್ದು, ಎಲ್ಲಾ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಸುಮಾರು 200 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ತಾಲೂಕಿನ ಸಿರಾಪನಹಳ್ಳಿ ಗ್ರಾಮದಲ್ಲಿ 4 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮಾರಿಕಣಿವೆಯಿಂದತಾಲೂಕಿನ ಎಲ್ಲಾ ಗ್ರಾಮಗಳಿಗೆ ಶಾಶ್ವತವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 350ಕೋಟಿ ರೂ. ನೀಡಲಾಗಿದೆ. 200 ಕೋಟಿ ರೂ. ಅನುದಾನದಲ್ಲಿ ಎಲ್ಲಾ ಕೆರೆಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ಅಂತರ್ಜಲ ವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.
ಹಳ್ಳೇಹಳ್ಳಿ-ಗೊಲ್ಲರಹಳ್ಳಿ ಗ್ರಾಮದ ಅಭಿವೃದ್ಧಿಗೆ 15 ಲಕ್ಷ, ದಾಸಯ್ಯನ ಹಟ್ಟಿಗೆ 15 ಲಕ್ಷ, ಶುದ್ಧ ಕುಡಿಯುವ ನೀರಿನ ಘಟಕಕ್ಕೆ 5 ಲಕ್ಷ, ಮದ್ದೇರು ಗ್ರಾಮದಲ್ಲಿ ಮೂಲ ಸೌಕರ್ಯ ಕಲ್ಪಿಸಲು 100 ಲಕ್ಷ ರೂ. ನೀಡಲಾಗಿದೆ. ತಾಳ್ಯದಲ್ಲಿ 20 ಲಕ್ಷದ ಸಿಸಿ ರಸ್ತೆ, ಗಟ್ಟಿಹೊಸಹಳ್ಳಿಯಲ್ಲಿ ಶಾಲಾ ಕೊಠಡಿ, ಗೋಕಟ್ಟೆ ನಿರ್ಮಾಣಕ್ಕೆ 20 ಲಕ್ಷ, ನೇಲಕಟ್ಟೆಗೆ 10 ಲಕ್ಷದ ಸಿಸಿ ರಸ್ತೆ, ವೆಂಕಟೇಶಪುರಕ್ಕೆ 15 ಲಕ್ಷದಲ್ಲಿ ಸಿಸಿ ರಸ್ತೆ, 1 ಅಂಗನವಾಡಿ ಕಟ್ಟಡ, 1 ಶುದ್ಧ ನೀರಿನ ಘಟಕ, ಹುಲಿಕೆರೆ ಗ್ರಾಮಕ್ಕೆ 1 ಶಾಲಾ ಕಟ್ಟಡ, ಪಾಪೇನಹಳ್ಳಿಗೆ 1ಶಾಲಾ ಕಟ್ಟಡ, ಮಲ್ಲಸಿಂಗಹಳ್ಳಿಗೆ 1 ಶಾಲಾ ಕೊಠಡಿ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಸೋಮವಾರ ಎಲ್ಲಾ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಕೋಟೆಹಾಳ್ ಹತ್ತಿರ 250 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಸ್ಥಾವರ ನಿರ್ಮಾಣ ಮಾಡಿ ಚಿತ್ರಹಳ್ಳಿ, ಎಚ್.ಡಿ. ಪುರ, ಮಲ್ಲಾಡಿಹಳ್ಳಿ, ಚಿಕ್ಕಜಾಜೂರು, ಸಾಸಲು ಭಾಗದಲ್ಲಿರುವ ವಿದ್ಯುತ್ ಘಟಕಗಳಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಈ ಮೂಲಕ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಇಲ್ಲದಂತೆ ಮಾಡಲಾಗುತ್ತದೆ. ಇದರಿಂದ ಕೃಷಿ ಕಾರ್ಯಕ್ಕೆ ಅನುಕೂಲವಾಗಲಿದೆ ಎಂದರು.
ಪ್ರಥಮದರ್ಜೆ ಗುತ್ತಿಗೆದಾರ ಚಿಕ್ಕಕಂದವಾಡಿ ರಾಜಣ್ಣ, ಗ್ರಾಮದ ಹಿರಿಯ ಮುಖಂಡ ಹನುಮಂತಪ್ಪ, ಎಪಿಎಂಸಿ ಉಪಾಧ್ಯಕ್ಷ ರಮೇಶ್, ಸುರೇಶ್, ಚಿತ್ರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ