ಜನಸ್ಪಂದನದಲ್ಲಿ ಸಿಕ್ಕಿದ್ದು ಭರವಸೆ, ನಿರಾಸೆ ಮಾತ್ರ


Team Udayavani, Dec 1, 2020, 6:03 PM IST

ಜನಸ್ಪಂದನದಲ್ಲಿ ಸಿಕ್ಕಿದ್ದು ಭರವಸೆ, ನಿರಾಸೆ ಮಾತ್ರ

ಪಿರಿಯಾಪಟ್ಟಣ: ಬಹುಕಾಲದ ಸಮಸ್ಯೆಗಳಿಗೆ ತಾಲೂಕಿಗೆ ಪ್ರಥಮ ಬಾರಿಗೆ ಆಗಮಿಸುತ್ತಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಂದ ಸ್ಥಳದಲ್ಲೇ ಪರಿಹಾರ ಸಿಗುತ್ತದೆ ಎಂಬ ಮಹತ್ವಾಕಾಂಕ್ಷೆಯಿಂದ ದೂರದ ಊರುಗಳಿಂದ ಬಂದಿದ್ದ ಸಾರ್ವಜನಿಕರಿಗೆ ಸಿಕ್ಕಿದ್ದು ಕೇವಲ ಭರವಸೆ ಹಾಗೂ ನಿರಾಸೆ ಮಾತ್ರ.

ತಾಲೂಕುಪಂಚಾಯಿತಿಸುವರ್ಣಸೌಧದಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧ್ಯಕ್ಷತೆಯಲ್ಲಿ ನಡೆದ ಸ್ಪಂದನ ಸಭೆಗೆ ಆಗಮಿಸಿದ್ದ ರೈತರು, ವಯೋ ವೃದ್ಧರು, ಅಂಗವಿಕಲರು, ಮಹಿಳೆಯರು ತಮ್ಮ ಸಮಸ್ಯೆಗಳಿಗೆ ಪರಿಹಾರಕಾಣದೇ ನಿರಾಸೆಗೊಂಡರು.

ದೂರುಗಳು: ಜಮೀನಿನ ರಸ್ತೆ ಸಮಸ್ಯೆ, ಜಮೀನಿನ ಪೋಡಿ ವಿಳಂಬ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಅಕ್ರಮ, ಮಠದ ಹಣ ದುರ್ಬಳಕೆ, ಜಮೀನು ಒತ್ತುವರಿ, ಸ್ಮಶಾನದ ಸಮಸ್ಯೆ, ಕೆರೆ ಒತ್ತುವರಿ, ಮುಖ್ಯಮಂತ್ರಿಗಳ ಪರಿ ಹಾರ ನಿಧಿ, ರೈತ ಆತ್ಮಹತ್ಯೆಯ ಪರಿಹಾರ, ಆಗ್ರಹ, ಪಂಚಾಯಿತಿಗಳಲ್ಲಿ ಹಣ ದುರುಪಯೋಗ, ಅಧಿಕಾರಿಗಳಿಂದ ಕಿರು ಕುಳ, ನಿವೇಶನದ ಸಮಸ್ಯೆ ಕುರಿತು ಸಾರ್ವಜನಿಕರು ಅರ್ಜಿ ಸಲ್ಲಿಸಿದರು.

124 ಅರ್ಜಿ ಸಲ್ಲಿಕೆ: ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಮಾತನಾಡಿ, ಜನರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ತಾಲೂಕಿನಿಂದ ಸಮಸ್ಯೆಗಳ ಪರಿಹಾರಕ್ಕಾಗಿ 124 ಅರ್ಜಿಗಳು ಬಂದಿದ್ದು, ಇದರಲ್ಲಿ ಬಹುತೇಕ ಅರ್ಜಿಗಳು ಸರ್ವೆ ಹಾಗೂ ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ಭೂ ವಿವಾದ ಕುರಿತು ಮೈಸೂರಿನಲ್ಲಿಯೂ ಇಷ್ಟು ಸಮಸ್ಯೆಗಳಿಲ್ಲ, ಮೈಸೂರಿನಲ್ಲಿ ಪರಿಹಾರಕ್ಕಾಗಿ ಬೇಡಿಕೆ ಇಟ್ಟರೆ ಇಲ್ಲಿ ಸರ್ವೆ, ಪೋಡಿ, ಹಾಗೂ ಜಮೀನಿಗೆ ತೆರಳಲು ರಸ್ತೆಯನ್ನು ಬಿಡಿಸಿಕೊಡುವಂತೆ ದೂರುಗಳು ಬಂದಿವೆ. ಆದ್ದರಿಂದ ಸರ್ವೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಜನರ ಸಮಸ್ಯೆಗಳನ್ನುಕೂಡಲೇ ಬಗೆಹರಿಸುವಂತೆ ಸೂಚಿಸಿದರು.

ಆಸ್ಪತ್ರೆ ಸಮಸ್ಯೆ: ಕೋವಿಡ್‌ ಕೇರ್‌ ಸೆಂಟರ್‌ ಅನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆದಿರುವ ಕಾರಣ ಸಾರ್ವ ಜನಿಕರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ಭಯ ಪಡುತ್ತಿದ್ದಾರೆ. ಆಸ್ಪತ್ರೆಗೆ ಸಾಮಾನ್ಯ ಚಿಕಿತ್ಸೆಗಾಗಿ ಬರುವ ರೋಗಿಗಳಿಗೂ ಹಾಗೂ ಕೋವಿಡ್‌ ಚಿಕಿತ್ಸೆಗಾಗಿ ಬರುವ ರೋಗಿಗಳಿಗೂ ಒಂದೇ ದ್ವಾರರದಲ್ಲಿ ಪ್ರವೇಶ ನಿಗದಿ ಮಾಡಿರುವುದರಿಂದ ಜನರು ಆಸ್ಪತ್ರೆಗೆ ಬರಲು ಭಯಪಡುತ್ತಿದ್ದಾರೆ. ಇದಕ್ಕೆ ಪರಿ ಹಾರ ನೀಡಬೇಕು ಎಂದು ಪತ್ರಕರ್ತರು ಕೋರಿಕೆಗೆ ಪ್ರತಿಕ್ರಿಯಿ ಸಿದ ಜಿಲ್ಲಾಧಿಕಾರಿ, ಈ ವಿಚಾರವಾಗಿ ಎರಡು ಬಾರಿ ದೂರುಗಳು ಬಂದಿವೆ.ಕೂಡಲೇ ಆಸ್ಪತ್ರೆಯ ಆಡಳಿತಾಧಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ನೀಡಿ, ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಶರತ್‌ಕುಮಾರ್‌ಗೆ ಎಚ್ಚರಿಕೆ ನೀಡಿದರು.

ಇದಕ್ಕೂ ಮೊದಲು ತಾಲೂಕು ಪಂಚಾಯಿತಿ ಸಭಾಂಗಣದ ಮುಂಭಾಗ ಸಮಸ್ಯೆಗಳನ್ನು ನೋಂದಣಿ ಮಾಡಿಕೊಳ್ಳಲು ಬರುವ ಸಾರ್ವಜನಿಕರಿಗೆ ಇಲಾಖಾವಾರು ಪ್ರತ್ಯೇಕ ಕೌಂಟರ್‌ ತೆರೆದು ಅವುಗಳಿಗೆ ನಂಬರ್‌ ನೀಡಲಾಗಿತ್ತು. ಸಭೆಯಲ್ಲಿ ಜಿಪಂ ಸಿಇಒ ಭಾರತಿ, ಹುಣಸೂರು ಉಪ ವಿಭಾಗಾಧಿಕಾರಿ ಬಿ.ಎನ್‌.ವೀಣಾ, ತಹಶೀಲ್ದಾರ್‌ ಶ್ವೇತಾ ಎನ್‌. ರವೀಂದ್ರ, ಉಪ ತಹಶೀಲ್ದಾರ್‌ ನಿಜಾಮುದ್ದೀನ್‌, ಶಿರಸ್ತೇದಾರ್‌ ಶಕೀಲಾ ಬಾನು, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.