ಗ್ರಾ.ಪಂ.ಚುನಾವಣೆ ಘೋಷಣೆ; ಸುರಕ್ಷತೆಯ ಪಾಲನೆ ಮುಖ್ಯ


Team Udayavani, Dec 2, 2020, 6:01 AM IST

ಗ್ರಾ.ಪಂ.ಚುನಾವಣೆ ಘೋಷಣೆ; ಸುರಕ್ಷತೆಯ ಪಾಲನೆ ಮುಖ್ಯ

ಸಾಂದರ್ಭಿಕ ಚಿತ್ರ

ಗ್ರಾಮ ಪಂಚಾಯತ್‌ ಚುನಾವಣೆ ನಡೆಯುತ್ತದೋ ಇಲ್ಲವೋ ಎನ್ನುವ ಚರ್ಚೆ-ಗೊಂದಲ ನಡೆದೇ ಇತ್ತು. ಕೊನೆಗೂ ಈ ಗೊಂದಲಗಳಿಗೆಲ್ಲ ತೆರೆಬಿದ್ದಿದ್ದು, ಡಿ. 22 ಹಾಗೂ ಡಿ. 27ರಂದು 30 ಜಿಲ್ಲೆಗಳ 5,762 ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆಯ ವೇಳಾಪಟ್ಟಿ ಘೋಷಿಸಿದೆ ರಾಜ್ಯ ಚುನಾವಣ ಆಯೋಗ. ಮತದಾನದ ಸಮಯದಲ್ಲಿ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮತಗಟ್ಟೆ ಪ್ರವೇಶಿಸುವ ಮುನ್ನ ಸ್ಯಾನಿಟೈಸರ್‌ ಬಳಸಬೇಕು ಎಂಬ ಮುನ್ನೆಚ್ಚರಿಕೆಯ ಕ್ರಮಗಳೂ ಇರಲಿವೆ.

ಆದಾಗ್ಯೂ ಕೋವಿಡ್‌ನ‌ ಈ ಸಮಯದಲ್ಲಿ ಚುನಾವಣೆಗಳನ್ನು ನಡೆಸುವ ವಿಚಾರ ಹಲವು ಆತಂಕಗಳನ್ನು ಹುಟ್ಟುಹಾಕುವುದು ಸಹಜವೇ. ಇದರ ನಡುವೆಯೇ ದೇಶಾದ್ಯಂತ ಹಲವು ಚುನಾವಣೆಗಳು ನಡೆದಿವೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆ, ದೇಶಾದ್ಯಂತ ಕೆಲವು ರಾಜ್ಯಗಳಲ್ಲಿ ಲೋಕಸಭಾ ಉಪಚುನಾವಣೆ ಹಾಗೂ ಕರ್ನಾಟಕದಲ್ಲಿ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳೂ ನಡೆದವು.

ಚುನಾವಣ ಆಯೋಗ ಈ ಚುನಾವಣೆಗಳ ಸಮಯದಲ್ಲೂ ಸುರಕ್ಷತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು. ಆದರೆ ಪ್ರಚಾರ ಸಂದರ್ಭಗಳಲ್ಲಿ ಅಭ್ಯರ್ಥಿಗಳು, ರಾಜಕೀಯ ಕಾರ್ಯಕರ್ತರು ಬಹುತೇಕ ನಿಯಮಗಳನ್ನು ಉಲ್ಲಂ ಸಿರುವುದನ್ನು ನೋಡಿದ್ದೇವೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವೆನ್ನುವುದು ನೆಪಮಾತ್ರಕ್ಕೆ ಎನ್ನುವಂತಾಗಿತ್ತು. ಇನ್ನು ಗೆದ್ದ ಅಭ್ಯರ್ಥಿಗಳ ಬೆಂಬಲಿಗರೂ ಸಾಮಾಜಿಕ ಅಂತರ ಪರಿಪಾಲನೆಯನ್ನು ಮರೆತು ವಿಜೃಂಭಿಸಿದ್ದು ಕೂಡ ವರದಿಯಾಗಿತ್ತು.

ಚುನಾವಣ ಆಯೋಗವು ಮತಗಟ್ಟೆಯಲ್ಲಿ ಅಪಾಯಕ್ಕೆಡೆಯಾಗದಂತೆ ಸುರಕ್ಷತ ಕ್ರಮಗಳನ್ನು ಖಂಡಿತ ಜಾರಿಮಾಡುತ್ತದೆ. ಆದರೆ ಅದರ ಆಚೆಗೂ ಸುರಕ್ಷತ ಕ್ರಮಗಳ ಪಾಲನೆಯ ಜವಾಬ್ದಾರಿ ಎಲ್ಲರ ಮೇಲೂ ಇರುತ್ತದೆ. ಈಗ ಗ್ರಾಮ ಪಂಚಾಯತ್‌ ಚುನಾವಣೆಯ ಸಮಯದಲ್ಲೂ ಸುರಕ್ಷತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರತಿಯೊಂದು ಮತಗಟ್ಟೆಗಳಲ್ಲೂ ಮತದಾರರ ಗರಿಷ್ಠ ಸಂಖ್ಯೆಯನ್ನೂ ಮಿತಿಗೊಳಿಸಲಾಗಿದೆ. ಕೋವಿಡ್‌ ಸಾಂಕ್ರಾಮಿಕವು ಈಗ ನಗರ ಪ್ರದೇಶಗಳಿಗೆ ಸೀಮಿತವಾಗಿ ಉಳಿದಿಲ್ಲ. ಅದು ಗ್ರಾಮೀಣ ಭಾಗದಲ್ಲೂ ತನ್ನ ಬಾಹುಗಳನ್ನು ಚಾಚಿ ಬಿಟ್ಟಿದೆ. ಸಾಂಕ್ರಾಮಿಕದ ಸ್ವರೂಪ ಏಕತೆರನಾಗಿ ಇರುವುದಿಲ್ಲ. ಕೆಲವರಿಗೆ ಲಕ್ಷಣಗಳು ಸ್ಪಷ್ಟವಾಗಿದ್ದರೆ, ರೋಗಲಕ್ಷಣವಿಲ್ಲದೇ ಇರುವವರೂ ಅನೇಕರಿರುತ್ತಾರೆ. ಈ ಕಾರಣಕ್ಕಾಗಿಯೇ ಮತದಾನದ ಸಮಯದಲ್ಲಿ ಸೋಂಕು ಹರಡದಂತೆ ಸೂಕ್ತ ಎಚ್ಚರಿಕೆಗಳನ್ನು ಪಾಲಿಸುವುದು ಎಲ್ಲರ ಜವಾಬ್ದಾರಿ.

ಚುನಾವಣ ಸಮಯದಲ್ಲಿ ಹಣ ಹಾಗೂ ಇತರ ಆಮಿಷಗಳನ್ನು ಒಡ್ಡುವ ಅಡ್ಡ ಮಾರ್ಗಗಳೂ ಎಷ್ಟೇ ಪ್ರಯತ್ನಗಳ ಅನಂತರವೂ ಇನ್ನೂ ನಿಂತಿಲ್ಲ. ಎಲ್ಲಿಯವರೆಗೂ ಮತದಾರರು ಇಂಥ ಆಮಿಷಗಳಿಗೆ ಬಲಿಯಾಗುವುದನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೂ ಬದಲಾವಣೆ ಸಾಧ್ಯವೂ ಇಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕತೆಯೇ ಎಲ್ಲರ ಮೂಲಮಂತ್ರವಾಗಬೇಕು. ಇನ್ನು ಗ್ರಾಮ ಪಂಚಾಯತ್‌ ಚುನಾವಣೆಗಳು ಹಳ್ಳಿಯ ಅಖಾಡವಾಗಿದ್ದರೂ ಗ್ರಾಮಾಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸುವ ಅವಕಾಶಗಳು ಎನ್ನುವುದನ್ನು ಮತದಾರರು ಮರೆಯಬಾರದು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.