ಮೆಣಸಿನಕಾಯಿಗೆ ಬೂದಿ ರೋಗದ ಕಾಟ!

ಮಳೆ ಅಭಾವದಿಂದ ಶೇ. 90ರಷ್ಟು ಬೆಳೆ ಹಾನಿ,ಇಳುವರಿ ಕುಸಿತ,ಆತಂಕದಲ್ಲಿ ಅನ್ನದಾತ

Team Udayavani, Dec 3, 2020, 5:23 PM IST

ಮೆಣಸಿನಕಾಯಿಗೆ ಬೂದಿ ರೋಗದ ಕಾಟ!

ಕೊಟ್ಟೂರು: ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಮೆಣಸಿನಕಾಯಿ ಬೆಳೆಗೆ ಬೂದಿ ರೋಗ, ಎಲೆ ಮುಟುರು ರೋಗ ಕಾಣಿಸಿಕೊಂಡಿದ್ದು ರೈತರಿಗೆ ನಷ್ಟದ ಭೀತಿ ಎದುರಾಗಿದೆ.

ನೀರಾವರಿ ಜಮೀನುಗಳಲ್ಲಿ ಮೆಣಸಿನಕಾಯಿ ಗಿಡಗಳು ಸಮೃದ್ಧವಾಗಿ ಬೆಳೆದಿವೆ. ಎಲೆಯ ಮೇಲೆ ಬೂದಿ ಚೆಲ್ಲಿದಂತಹ ರೋಗ ಲಕ್ಷಣ ಕಂಡೊಡನೆ ಎಲೆ, ಹೂ ಉದುರಲು ಆರಂಭಿಸಿ ಗಿಡಗಳು ಬರಡಾಗುತ್ತಿವೆ. ಈ ವಿಚಿತ್ರ ರೋಗದಿಂದ ಇಳುವರಿಗಣನೀಯವಾಗಿ ಕುಸಿತಗೊಳ್ಳುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ತಾಲೂಕಿನಲ್ಲಿ ಈ ವರ್ಷ 1000 ಹೆಕ್ಟೇರ್‌ ಪ್ರದೇಶದಲ್ಲಿ ಮೆಣಸಿನಕಾಯಿ ಬಿತ್ತನೆಯಾಗಿದ್ದು ಮಳೆ ಅಭಾವದಿಂದ ಖುಷ್ಕಿ ಜಮೀನಿನಲ್ಲಿ ಶೇ. 90 ರಷ್ಟು ಬೆಳೆ ಹಾನಿಗೀಡಾಗಿದೆ. ನೀರಾವರಿಪ್ರದೇಶದಲ್ಲಿನ ಬೆಳೆ ರೋಗಬಾಧೆಗೆ ತುತ್ತಾಗಿದೆ. ಮೆಣಸಿನಕಾಯಿ ಬೆಳೆಗೆ ಹಿಂದಿನ ವರ್ಷ ಸೊರಗು ರೋಗ ಮತ್ತು ಮಚ್ಚೆ ರೋಗ ಕಾಣಿಸಿಕೊಂಡು ರೈತರು ನಷ್ಟ ಅನುಭವಿಸಿದ್ದರು. ಈ ಬಾರಿಬೂದಿ ರೋಗ ಬೆನ್ನತ್ತಿರುವುದರಿಂದ ರೈತರು ಚಿಂತೆಗೀಡಾಗಿದ್ದಾರೆ.

ಬೂದಿರೋಗ ಹತೋಟಿಗಾಗಿ ವಾರಕ್ಕೆ ಎರಡು ಬಾರಿಗಿಂತ ಅಧಿಕವಾಗಿ ಕೀಟನಾಶಕ ಸಿಂಪಡಿಸಿದರೂ ರೋಗ ನಿಯಂತ್ರಣಕ್ಕೆ ಬಂದಿಲ್ಲ. 2 ಎಕರೆ ಮೆಣಸಿನಕಾಯಿ ಕೃಷಿಗೆ ಈಗಾಗಲೇರೂ. 1.60 ಲಕ್ಷ ಖರ್ಚು ಮಾಡಿದ್ದೇವೆ.ರೋಗಬಾಧೆಯಿಂದ ಇಳುವರಿ ಅರ್ಧದಷ್ಟು ಕುಸಿಯುವ ಲಕ್ಷಣಗಳಿರುವುದರಿಂದ ದಿಕ್ಕುತೋಚದಂತಾಗಿದೆ ಎಂದು ರೈತ ಬಿ.ಎಸ್‌. ಆರ್‌. ಮೂಗಣ್ಣ ಅಳಲು ತೋಡಿಕೊಂಡರು.ಮೆಣಸಿನಕಾಯಿ ಕೃಷಿಗೆ ಹೆಚ್ಚು ರಸಗೊಬ್ಬರ, ಕ್ರಿಮಿನಾಶ ಬಳಸುವುದರಿಂದ ಭೂಮಿ ಸತ್ವ ಕಳೆದುಕೊಳ್ಳುತ್ತದೆ. ಈ ಸತ್ಯ ಗೊತ್ತಿದ್ದರೂ ಹೆಚ್ಚಿನ ಇಳುವರಿ ಪಡೆದು ಸಾಲದ ಹೊರೆ ಕಡಿಮೆ ಮಾಡಿಕೊಳ್ಳಲು ಅದರ ಬಳಕೆ ಮಾಡುವುದು ಅನಿವಾರ್ಯವಾಗಿದೆ ಎಂದರು.

ಹಿಂದಿನ ವರ್ಷ ಎಕರೆಗೆ 15ರಿಂದ 20 ಕ್ವಿಂಟಲ್‌ ಇಳುವರಿ ಬಂದಿತ್ತು. ಬೆಳೆದಿದ್ದ ಬ್ಯಾಡಗಿ ತಳಿಯ ಮೆಣಸಿನಕಾಯಿ ಪ್ರತಿ ಕ್ವಿಂಟಲ್‌ಗೆ ರೂ. 15ರಿಂದರೂ. 20 ಸಾವಿರ ಬೆಲೆ ಸಿಕ್ಕಿತ್ತು. ಆದರೆ ಈ ವರ್ಷ 20 ರಿಂದ 30 ಸಾವಿರಕ್ಕೇರಿದೆ. ಮೆಣಸಿನಕಾಯಿಕೃಷಿ ಕೈಹಿಡಿದ್ದಿದರಿಂದ ಈ ವರ್ಷ 2 ಎಕರೆಯಲ್ಲಿಮೆಣಸಿನಕಾಯಿ ಬಿತ್ತನೆ ಮಾಡಿದ್ದೆ. ಆದರೆ, ಇಡೀ ಹೊಲ ರೋಗಕ್ಕೆ ತುತ್ತಾಗಿದೆ. ಬೆಳೆಯನ್ನುನಂಬಿಕೊಂಡು ಸಾಲ ಪಡೆದಿದ್ದೆ. ಈಗ ಏನುಮಾಡಬೇಕೆಂಬುದೇ ತಿಳಿಯುತ್ತಿಲ್ಲ ಎನ್ನುತ್ತಾರೆ ಉಳಿದ ರೈತರು.

ಕಷ್ಟಪಟ್ಟು ಬೆಳೆದ ಮೆಣಸಿನಕಾಯಿ ರೋಗಬಾಧೆಯಿಂದನೆಲಪಾಲಾಯಿತು. ಸರ್ಕಾರ ಇಂಥ ನಷ್ಟಗಳ ಪಟ್ಟಿ ಮಾಡಿ ಕಷ್ಟದಲ್ಲಿರುವ ನಮ್ಮ ಸಹಾಯಕ್ಕೆ ಬರಬೇಕು. ಬಿ.ಎಸ್‌.ಆರ್‌. ಮೂಗಣ್ಣ, ರೈತ, ಕೊಟ್ಟೂರು

ಮೆಣಸಿನಕಾಯಿಗೆ ಬೂದಿ ರೋಗ ಬಂದಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿ ಸಿದಂತೆ ಔಷಧ ಸಿಂಪಡಣೆಗೆಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಬೆಳೆ ನಾಶವಾಗಿರುವ ರೈತರು ಕಂಗಲಾಗದೆ ಇದಕ್ಕೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಮತ್ತುಬೆಳೆ ಸಮೀಕ್ಷೆ ನಂತರ ಪರಿಹಾರ ಒದಗಿಸಲು ಮುಂದಾಗುತ್ತೇವೆ. ನೀಲಪ್ಪ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೂಡ್ಲಿಗಿ

-ರವಿಕುಮಾರ ಎಂ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.