ಬುರೇವಿ’ ಸೈಕ್ಲೋನ್ : ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ ಭಾಗಗಳಲ್ಲಿ ಮಳೆ
Team Udayavani, Dec 4, 2020, 7:05 AM IST
ಚೆನ್ನೈ/ ತಿರುವನಂತಪುರ: ಬಂಗಾಲ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ “ಬುರೇವಿ’ ಸೈಕ್ಲೋನ್ ಉದ್ಭವಿಸಿದ್ದು, ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ ಭಾಗಗಳಲ್ಲಿ ಬುಧವಾರ ರಾತ್ರಿಯಿಂದಲೇ ಮಳೆ ರಭಸದಿಂದ ಸುರಿಯಲಾರಂಭಿಸಿದೆ.
ಉತ್ತರ ಶ್ರೀಲಂಕಾ ಸಾಗರ ಭಾಗದಲ್ಲಿ ಗುರುವಾರ ಸಂಜೆ ವೇಳೆ ಗಂಟೆಗೆ 70-80 ಕಿ.ಮೀ. ವೇಗದಲ್ಲಿ ಬೀಸುತ್ತಿದ್ದ ಚಂಡಮಾರುತ ಮಧ್ಯರಾತ್ರಿ ವೇಳೆಗೆ ರಾಮೇಶ್ವರದ ಪಂಬನ್ ತೀರದತ್ತ ಮುನ್ನುಗ್ಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಮುಖ್ಯವಾಗಿ ತಮಿಳುನಾಡಿನ ಕಾವೇರಿ ನದಿಪಾತ್ರದ ಕೊಡವಾಸಲ್, ನಾಗ ಪಟ್ಟಿಣಂ, ವೇದಾರಣ್ಯಂ, ಕರಾಯಿಕಲ್, ತಿರುತುರೈಪೂಂಡಿ, ಮದುಕುಲತೂರ್, ಪಂಬನ್, ಕನ್ಯಾಕುಮಾರಿ ಭಾಗಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಕೇರಳದ ಅಲಪ್ಪುಳದಲ್ಲೂ ಧಾರಾಕಾರ ಮಳೆಯಾಗಲಿದೆ. ಈ ಭಾಗಗಳಲ್ಲಿ ಗರಿಷ್ಠ 20 ಸೆಂ.ಮೀ. ಮಳೆ ಬೀಳುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಸಿದೆ.
ಶಾ ಅಭಯ: ಬರೇವಿಯಿಂದ ತಮಿಳು ನಾಡು, ಕೇರಳ ದಕ್ಷಿಣ ಭಾಗಗಳ ಜನತೆಯನ್ನು ರಕ್ಷಿಸಲು ಕೇಂದ್ರ ಸರಕಾರ ಸಕಲ ನೆರವು ನೀಡುವುದಾಗಿ ಗೃಹ ಸಚಿವ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆಯ 26 ತಂಡಗಳು ಈಗಾಗಲೇ ಕರಾವಳಿ ತೀರದಲ್ಲಿ ಬೀಡುಬಿಟ್ಟಿವೆ.
ಸೈಕ್ಲೋನ್ ಹೈಲೈಟ್ಸ್
– ಟ್ಯುಟಿಕೊರಿನ್- ಮೈಸೂರು ಸ್ಪೆಷಲ್ ರೈಲು (06235/ 36) ಸಂಚಾರ ರದ್ದು.
– ಪುದುಚೇರಿ ಭಾಗದ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ.
– ಪಂಬನ್ನಿಂದ 300 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದ ಜಿಲ್ಲಾಡಳಿತ.
– ಕೊಡೈಕನಾಲ್ ಗಿರಿಧಾಮ ದತ್ತ ಸಾಗುವ ವಾಹನಗಳಿಗೆ ನಿರ್ಬಂಧ.
– ದಕ್ಷಿಣ ಕೇರಳದಲ್ಲಿ ರೆಡ್ ಅಲರ್ಟ್ ಘೋಷಣೆ.
– ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್