ಹೈದರಾಬಾದ್ ನಗರ ಪಾಲಿಕೆ ಚುನಾವಣೆ: ಇಂದು ಮತ ಎಣಿಕೆ, ಬಿಜೆಪಿ- ಟಿಆರ್ ಎಸ್ ಪ್ರತಿಷ್ಠೆ
Team Udayavani, Dec 4, 2020, 8:37 AM IST
ಹೈದರಾಬಾದ್: ಹೈದರಾಬಾದ್ ನಗರ ಪಾಲಿಕೆಗಳಿಗೆ ನಡೆದ ಹೈವೋಲ್ಟೇಜ್ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಫಲಿತಾಂಶ ಸಿಗಲಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.
ಈ ಬಾರಿ ಬಿಜೆಪಿ ನಿಜಾಮರ ನಾಡಿನ ಪಾಲಿಕೆ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ಸ್ವೀಕರಿಸಿದೆ. ಬಿಜೆಪಿ ಘಟಾನುಘಟಿ ನಾಯಕರು ಹೈದರಾಬಾದ್ ನಲ್ಲಿ ಚುನಾವಣಾ ಪ್ರಚಾರ ಮಾಡಿದ್ದರು. ಅಮಿತ್ ಶಾ, ಯೋಗಿ ಆದಿತ್ಯನಾಥ್, ರಾಜ್ಯದ ಸಚಿವರಾದ ಸುಧಾಕರ್, ಈಶ್ವರಪ್ಪ ಸೇರಿದಂತೆ ಹಲವರು ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದರು. ಹೀಗಾಗಿ ಹೈದರಾಬಾದ್ ನಗರ ಪಾಲಿಕೆ ಕಣ ಬಿಜೆಪಿ-ಟಿಆರ್ ಎಸ್ ಗೆ ಪ್ರತಿಷ್ಠೆಯ ಕಣವಾಗಿದೆ.
ಇದನ್ನೂ ಓದಿ:ಹುಷಾರ್, ನಕಲಿ ಲಸಿಕೆ ಬರುತ್ತೆ! “ಇಂಟರ್ಪೋಲ್’ ಎಚ್ಚರಿಕೆ ರವಾನೆ
ಇದೇ ವೇಳೆ, ಗುರುವಾರ ಮತಗಟ್ಟೆ ಸಮೀಕ್ಷೆಯ ವರದಿಗಳು ಹೊರಬಂದಿದ್ದು, ಟಿಆರ್ಎಸ್ ಗೆಲುವು ಖಚಿತ ಎಂದು ಹೇಳಿವೆ. ಆಡಳಿತಾರೂಢ ಟಿಆರ್ಎಸ್ಗೆ 75-78 ಸೀಟುಗಳು ಲಭ್ಯವಾದರೆ, ಒವೈಸಿ ಅವರ ಎಐಎಂಐಎಂ 38-42 ಸ್ಥಾನಗಳಲ್ಲಿ ಜಯ ಗಳಿಸಲಿದೆ.
ವಿಶೇಷವೆಂದರೆ, ಬಿಜೆಪಿ 25-35 ಸ್ಥಾನಗಳನ್ನು ಗೆಲ್ಲುವ ಮೂಲಕ ಶೇ.31.21ರಷ್ಟು ಮತಗಳನ್ನು ಪಡೆಯಲಿದೆ. ಕಾಂಗ್ರೆಸ್ ಕೇವಲ 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ