ಗದಗಿನಲ್ಲಿ ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್
Team Udayavani, Dec 5, 2020, 9:07 AM IST
ಗದಗ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಅಂಗವಾಗಿ ನಗರದಲ್ಲಿ ಬೆಳಗ್ಗೆಯೇ ಪ್ರತಿಭಟನೆ ಜೋರಾಗಿದೆ.
ಮುಳಗುಂದ ನಾಕಾದಲ್ಲಿ ಬೆಳಗ್ಗೆ ಆರು ಗಂಟೆಗೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮುಖಕ್ಕೆ ಕಪ್ಪುಪಟ್ಟಿ ಧರಿಸಿ, ಹಲಗೆ ಬಾರಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ನಡುವೆ ಸಾರಿಗೆ ಬಸ್ ತಡೆಯಲು ಮುಂದಾದ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಕೆಲಕಾಲ ವಾಗ್ವಾದ ನಡೆಯಿತು.
ರಾಣಿ ಚೆನ್ನಮ್ಮ ವೃತ್ತದಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಬಸವರಾಜ ಪಾಟೀಲ ಯತ್ನಾಳ್ ವಿರುದ್ಧ ಧಿಕ್ಕಾರ ಕೂಗಿದರು.
ಕೆ.ಸಿ.ರಾಣಿ ಚೆನ್ನಮ್ಮ ವೃತ್ತ ಮಾರ್ಗವಾಗಿ ಚಲಿಸುವ ಲಾರಿಗಳನ್ನು ತಡೆದು, ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಮಕಮಕಿ ನಡೆದು, ತಳ್ಳಾಟ ನಡೆಯಿತು. ಬಳಿಕ ಲಾರಿಗಳನ್ನು ಪರ್ಯಾಯ ಮಾರ್ಗವಾಗಿ ರವಾನಿಸಿದರು.
ಸಂಚಾರ ಯಥಾಸ್ಥಿತಿ:
ಬಂದ್ ಗೆ ಬೆಳಗ್ಗೆಯೇ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಸಾರಿಗೆ ಬಸ್, ವಾಹನ ಸಂಚಾರ ಸಹಜವಾಗಿತ್ತು. ಪೆಟ್ರೋಲ್ ಬಂಕ್, ಹೋಟೆಲ್, ಅಂಗಡಿಗಳು ಎಂದಿನಂತೆ ತೆರೆದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ