ದೇವೇಗೌಡರ ಕಣ್ಣೀರ ಶಾಪ ತುಮಕೂರಿಗೆ ತಟ್ಟುತ್ತೆ: ಎಚ್‌.ಡಿ.ರೇವಣ್ಣ


Team Udayavani, Dec 5, 2020, 10:36 AM IST

ದೇವೇಗೌಡರ ಕಣ್ಣೀರ ಶಾಪ ತುಮಕೂರಿಗೆ ತಟ್ಟುತ್ತೆ: ಎಚ್‌.ಡಿ.ರೇವಣ್ಣ

ಚನ್ನರಾಯಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣ್ಣೀರು ಹಾಕಿಸಿದ ಶಾಪ ಶೀಘ್ರದಲ್ಲಿ ತುಮಕೂರಿಗೆ ತಟ್ಟಲಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ ಆವರಣದಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯನ್ನು
ಸಂಪೂರ್ಣ ನೀರಾವರಿ ಮಾಡಲು ಮಾಜಿ ಪ್ರಧಾನಿ ದೇವೇಗೌಡರು ಹಗಲಿರುಳು ಶ್ರಮಿಸಿದ್ದರು. ಆದರೆ, ಅಲ್ಲಿನ ಮುಖಂಡರು ಅವರನ್ನೇ ಕಣಕ್ಕೆ ಇಳಿಸಿ, ವಿಶ್ವಾಸ ದ್ರೋಹ ಮಾಡಿದ್ದಾರೆ. ಅವರಿಗೆ ಆ ದೇವರೇ ಶಿಕ್ಷೆಕೊಡುತ್ತಾನೆ ಎಂದುಹೇಳಿದರು.

ದೇವೇಗೌಡರು ತುಮಕೂರಿನಿಂದ ಲೋಕಸಭೆಗೆ ಹೋದರೆ ಹೇಮಾವತಿ ನೀರು ಹರಿಸುವುದಿಲ್ಲ ಎಂದು ತಪ್ಪು ಸಂದೇಶ ಸಾರಿದಲ್ಲದೆ, ಜೆಡಿಎಸ್‌ ಪಕ್ಷದ ಕೆಲ ಮುಖಂಡರು ವಿರೋಧ ಪಕ್ಷದೊಂದಿಗೆ ಚುನಾವಣೆ ವೇಳೆ ಕೈ ಜೋಡಿಸಿದ್ದರಿಂದ ‌ ಸೊಲುವಂತಾಯಿತು, ಇದರಿಂದ ಅವರು ಕುಗ್ಗಿ ಹೋಗಿದ್ದಾರೆ, ಜಿಲ್ಲೆಗೆ ಹೋಲಿಸಿದರೆ ತುಮಕೂರಿಗೆ ಹೆಚ್ಚು ನೀರು ಹೇಮಾವತಿ
ಅಣೆಕಟ್ಟೆಯಿಂದ ಹರಿಯುತ್ತಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಪಕ್ಕಗಳ ಒಳ ಒಪ್ಪಂದ: ಪಕ್ಷದ ವರಿಷ್ಠ ದೇವೇಗೌಡರು ಹಾಗೂ ಜೆಡಿಎಸ್‌ ಪಕ್ಷವನ್ನು ಮುಗಿಸಲು ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿವೆ. ಇದು ಹೆಚ್ಚು ದಿನ ನಡೆಯುವುದಿಲ್ಲ, ದೇವೇಗೌಡರ ಮಾರ್ಗದರ್ಶನ, ಯುವಕರಾದ ನಿಖೀಲ್‌ ಮತ್ತು ಪ್ರಜ್ವಲ್‌ ಮೂಲಕ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಸವಾಲು ಹಾಕಿದರು.

ಇದನ್ನೂ ಓದಿ:ಕುರಿ ರೀತಿ ಜನರ ತುಂಬಿದ್ದ ವಾಹನ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ, ಹಲವರಿಗೆ ಸಣ್ಣಪುಟ್ಟ ಗಾಯ

ತಿಂಗಳು ಸರ್ಕಾರ ನಮ್ಮದು: ರಾಜ್ಯದ ಜನತೆ ನಮಗೆ ಸಂಪೂರ್ಣ ಅವಕಾಶ ನೀಡುತ್ತಿಲ್ಲ. ಹಾಗಾಗಿ 20 ತಿಂಗಳು, 14 ತಿಂಗಳು ಅಧಿಕಾರ ಮಾಡುವಂತಾಯಿತು. ಈ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿಸಿದ್ದೇನೆ,ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಕೆಲಸಮಾಡಿಸಿದ್ದು, ಮರು ಹುಟ್ಟು ಕಾಣುವಂತಾಯಿತು. ಡಿಕೆಶಿ ನೀರಾವರಿ ಮಂತ್ರಿಯಾಗಿದ್ದರು. ನಾವು
ತುಮಕೂರಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದೇವೆ ಎಂದುಹೇಳಿದರು.

ನಾಲ್ಕು ಪಟ್ಟು ದರ ಏರಿಕೆ: ತಾನು ಇಂಧನ ಮಂತ್ರಿ ಆಗಿದ್ದ ವೇಳೆ ವಿದ್ಯುತ್‌ ಶುಲ್ಕ ಏರಿಕೆ ಮಾಡಿರಲಿಲ್ಲ. ಆದರೆ, ಬಿಜೆಪಿ ಹಾಗೂ
ಕಾಂಗ್ರೆಸ್‌ ಸರ್ಕಾರ 10 ಬಾರಿ ದರ ಏರಿಕೆ ಮಾಡಿದ್ದು, ನಾಲ್ಕು ಪಟ್ಟು ದುಬಾರಿ ಹಣ ಕಟ್ಟುವಂತಾಗಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಬಳಕೆದಾರರು ಹೈರಾಣಾಗುವಂತಾಗಿದೆ. ರೈತರಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ರೈತರಿಗೆ ಹೊರೆ ಹೊರಿಸುತ್ತಿದ್ದಾರೆ
ಎಂದು ಆಪಾದನೆ ಮಾಡಿದರು.

ಶ್ರೀಕಂಠಯ್ಯ ದೇಷ ರಾಜಕಾರಣಿ ಅಲ್ಲ: ಜಿಲ್ಲೆಯಲ್ಲಿ ಶ್ರೀಕಂಠಯ್ಯ ಎಂದಿಗೂ ದ್ವೇಷರಾಜಕೀಯ ಮಾಡಿಲ್ಲ. ಅವರು ಹಲವು ಬಾರಿ ದೇವೇಗೌಡರಿಗೆ ರಾಜಕೀಯ ಸಲಹೆ ನೀಡಿದ್ದರು. ಶ್ರೀಕಂಠಯ್ಯ ಅವರನ್ನು ನಿಂಧನೆ ಮಾಡಿದವರುಇಂದುಅವರಪಕ್ಷಕ್ಕೆ ಸೇರಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಪುಟ್ಟೇಗೌಡ ಹೆಸರು ಹೇಳದೆ ತಿರುಗೇಟು ನೀಡಿದರು.

ಶಾಸಕ ಬಾಲಕೃಷ್ಣ, ತಾಲೂಕು ಅಧ್ಯಕ್ಷ ದೇವರಾಜೇಗೌಡ, ಜಿಪಂ ಸದಸ್ಯ ಪುಟ್ಟಸ್ವಾಮಿಗೌಡ, ಮುಖಂಡ ರಾದಕೃಷ್ಣೇಗೌಡ, ರಾಮಕೃಷ್ಣ, ತಿಮ್ಮೇಗೌಡ, ನವೀನ್‌, ವಿರೇಶ್‌, ಶಿವಣ್ಣ,ಲೋಕೇಶ್‌,ವೆಂಕಟೇಶ್‌, ಶಿವರಾಜ್‌ ಮೊದಲಾದವರು ಉಪಸ್ಥಿತರಿದ್ದರು.

ನಿಂಬೇಹಣ್ಣಿನ ಶಕ್ತಿ ತಿಳಿಯಲಿ
ಎಚ್‌.ಡಿ.ರೇವಣ್ಣ ನಿಂಬೇಹಣ್ಣು ಇಟ್ಟುಕೊಂಡಿರುವ ಬಗ್ಗೆ ಇತ್ತೀಚೆಗೆ ನಡೆದ ಗ್ರಾಮ ಸ್ವಾರಜ್‌ಕಾರ್ಯಕ್ರಮದಲ್ಲಿ ಸಹಕಾರ
ಮಂತ್ರಿ ಸೋಮಶೇಖರ್‌ ವ್ಯಂಗ್ಯವಾಡಿದ್ದರು. ಮೊದಲು ಅವರು ನಿಂಬೇಹಣ್ಣಿನ ಶಕ್ತಿ ತಿಳಿದು ನಂತರ ಮಾತನಾಡುವುದು
ಒಳಿತು, ವಿರೋಧಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರ ಮಾಠ ಮಂತ್ರಗಳು ನನಗೆ ತಟ್ಟದಿರಲೆಂದು ದೇವಾಲಯದ ಅರ್ಚಕರು ನಿಂಬೇಹಣ್ಣು ನೀಡುತ್ತಾರೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.