ಚಾಮರಾಜನಗರದಲ್ಲಿ ಬಂದ್ ಸಂಪೂರ್ಣ ವಿಫಲ: ಪ್ರತಿಭಟನೆಗಷ್ಟೇ ಸೀಮಿತವಾದ ಕರ್ನಾಟಕ ಬಂದ್
Team Udayavani, Dec 5, 2020, 2:34 PM IST
ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಚಾಮರಾಜನಗರದಲ್ಲಿ ಸಂಪೂರ್ಣ ವಿಫಲವಾಗಿ, ಪ್ರತಿಭಟನೆಗಷ್ಟೇ ಸೀಮಿತವಾಯಿತು.
ಚಾಮರಾಜನಗರದಲ್ಲಿ ಜನಜೀವನ ಸಹಜಸ್ಥಿತಿಯಲ್ಲಿದೆ. ನಗರದ ಭುವನೇಶ್ವರಿ ವೃತ್ತದಲ್ಲಿ ಕನ್ನಡ ಸಂಘಟನೆಗಳ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆಯ ಕಾವು ಹೆಚ್ಚಿಸಲು ಪ್ರಯತ್ನಿಸಿದರು. ಆದರೆ ಬೆಳ್ಳಂಬೆಳಿಗ್ಗೆ ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಪೊಲೀಸರು ಬಂದ್ ವಿಫಲಗೊಳಿಸಿದ್ದಾರೆ.
ಅಂಗಡಿ ಮುಂಗಟ್ಟುಗಳು, ಹೊಟೇಲ್ ಗಳು, ಪೆಟ್ರೋಲ್ ಬಂಕ್ ಗಳು ಎಂದಿನಂತೆ ತೆರೆದಿವೆ. ಕೆಎಸ್ಆರ್ ಟಿಸಿ ಹಾಗೂ ಖಾಸಗಿ ಬಸ್ ಸಂಚಾರ ಎಂದಿನಂತಿದೆ.
ಇದನ್ನೂ ಓದಿ:ಕೌರವನ ವಿರುದ್ಧ ಕೆರಳಿದ ಅನ್ನದಾತ : ರೈತ ಸಂಘಟನೆಯಿಂದ ಪ್ರತಿಕೃತಿ ದಹಿಸಿ ಪ್ರತಿಭಟನೆ
ಆಟೋ, ಕ್ಯಾಬ್, ಇನ್ನಿತರ ವಾಹನ ಸಂಚಾರ ಮಾಮೂಲಿನಂತಿದೆ. ಜನ ಸಂಚಾರಕ್ಕೂ ಯಾವುದೇ ರೀತಿಯ ತೊಂದರೆಯುಂಟಾಗಿಲ್ಲ.
ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕನ್ನಡ ಸಂಘಟನೆಗಳು ಹೊರತಪಡಿಸಿದರೆ ಇತರೆ ಯಾವುದೇ ಸಂಘ ಸಂಸ್ಥೆಗಳು ಬಂದ್ ಗೆ ಬೆಂಬಲ ಸೂಚಿಸಿರಲಿಲ್ಲ. ಅಲ್ಲದೆ ಬೆಳಿಗ್ಗೆಯೇ ಕನ್ನಡ ಕಾರ್ಯಕರ್ತರನ್ನು ಬಂಧಿಸಿದ್ದರಿಂದ ಬಂದ್ ಗೆ ಹಿನ್ನಡೆಯುಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು