ಕೃಷಿ ಹೊಂಡದಿಂದ ವರ್ಷವಿಡೀ ಬೆಳೆಗೆ ನೀರು!

ಪ್ರಾಯೋಗಿಕವಾಗಿ ಬೆಳೆಗಳನ್ನು ಬೆಳೆದು ಯಶಸ್ವಿಯಾದ ವೈದ್ಯ ಬಾಲಕೃಷ್ಣ ರಾಠೋಡ

Team Udayavani, Dec 6, 2020, 2:43 PM IST

ಕೃಷಿ ಹೊಂಡದಿಂದ ವರ್ಷವಿಡೀ ಬೆಳೆಗೆ ನೀರು!

ಬಸವಕಲ್ಯಾಣ: ಬಸವಕಲ್ಯಾಣ ತಾಲೂಕಿನ ಪರತಾಪೂರ ಗ್ರಾಪಂ ವ್ಯಾಪ್ತಿಗೆ ಬರುವ ಖಾನಾಪುರ ಗ್ರಾಮದ ಡಾ| ಬಾಲಕೃಷ್ಣ ರಾಠೊಡ ಅವರು, ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಿಸಿಕೊಂಡು ಪ್ರಾಯೋಗಿಕವಾಗಿ ವಿವಿಧ ಬೆಳೆ ಹಾಗೂ ತರಕಾರಿ ಬೆಳೆಯುತ್ತಿದ್ದಾರೆ. ಈ ಮೂಲಕ ಇತರೆ ರೈತರಿಗೆ ಮಾದರಿಯಾಗಿದ್ದಾರೆ.

ವೃತ್ತಿಯಲ್ಲಿ ವೈದ್ಯ ಸೇವೆ ಸಲ್ಲಿಸುತ್ತಿರುವ ಬಾಲಕೃಷ್ಣ ಅವರು ಪರವೃತ್ತಿಯಲ್ಲಿ ಕೃಷಿ ಕೈಗೊಂಡಿದ್ದಾರೆ. ಅದರಲ್ಲೂ ಸರ್ಕಾರಿ ಯೋಜನೆಯನ್ನುಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ತಮ್ಮಹೊಲದಲ್ಲಿ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ.ಕೃಷಿ ಹೊಂಡದಿಂದ ಮಳೆಗಾಲದಲ್ಲಿ ಮಳೆಯ ಆಧಾರಿತ ನೀರು ಬಳಸುತ್ತಾರೆ. ಬೇಸಿಗೆ ಮತ್ತು ಚಳಿಗಾಲದಲ್ಲಿ ದೂರದ ಬಾವಿ ಹಾಗೂಕೊಳವೆಬಾವಿ ನೀರನ್ನು ಕೃಷಿ ಹೊಂಡದಲ್ಲಿ ಸಂಗ್ರಹಿಸಲಾಗುತ್ತಿದೆ. ನಂತರ ಹನಿ ನೀರಾವರಿಪದ್ಧತಿ ಮೂಲಕ ವರ್ಷಪೂರ್ತಿ ಬೆಳೆಗಳಿಗೆ ನೀರು ಒದಗಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇನ್ನೆರಡುವರ್ಷದಲ್ಲಿ ವಾರ್ಷಿಕ ಲಕ್ಷಾಂತರ ರೂ. ಆದಾಯ ಪಡೆಯುವಂತೆ ಯೋಜನೆ ಹಾಕಿಕೊಂಡಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಎರಡು ಎಕರೆ ಭೂಮಿಯಲ್ಲಿ ಕೃಷಿ ಹೊಂಡ ನಿರ್ಮಿಸಲಾಗಿದ್ದು, ನುಗ್ಗೆ ಕಾಯಿ-500, ಆ್ಯಪಲ್‌ ಬಾರೆ ಮರ-500, ಟೊಮಾಟೊ, ಕರಿಬೇವು, ಲಿಂಬು, ಹೆಬ್ಬೆವು, ಶುಂಠಿ ಸೇರಿದಂತೆ ವಿವಿಧ ತರಕಾರಿ ಬೆಳೆಗಳನ್ನು ಬೆಳೆಸಲಾಗಿದೆ. ಇದಕ್ಕೆ ಕೃಷಿ ಹೊಂಡ ತುಂಬಾಸಹಾಯಕವಾಗಿದೆ ಎಂದು ವೈದ್ಯ ಡಾ| ಬಾಲಕೃಷ್ಣ ರಾಠೊಡ ಹೇಳಿದರು.

ಕೃಷಿ ಹೊಂಡ ಉದ್ದೇಶ: ಕೃಷಿಕರು ಮಳೆ ನೀರನ್ನು ವ್ಯರ್ಥವಾಗಲು ಬಿಡದೆ ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ನೀರನ್ನು ಸಂಗ್ರಹಿಸಿ ಅದನ್ನು ತಮ್ಮ ಬೆಳೆಗಳಿಗೆ ನೀರು ಒದಗಿಸುವುದು ಈ ಯೋಜನೆ ಉದ್ದೇಶವಾಗಿದೆ. ಕೃಷಿ ಹೊಂಡ ರಚನೆ ನಂತರ ನೀರು ಇಂಗದಂತೆ ತಡೆಯಲು ಪಾಲಿಥಿನ್‌ ಹೊದಿಕೆ, ಅಳವಡಿಕೆ, ಹೊಂಡದಿಂದ ನೀರು ಎತ್ತಲು ಡಿಸೇಲ್‌ ಪಂಪ್‌ ಸೆಟ್‌ ತುಂತುರು ನೀರಾವರಿ ಅಳವಡಿಕೆಗೆ ಈ ಯೋಜನೆಯಡಿ ಅವಕಾಶವಿದೆ. ಕೃಷಿ ಹೊಂಡ ನಿರ್ಮಾಣ ಮಾಡಿದ ರೈತರಿಗೆ ಅಳತೆಯ ಅನುಗುಣವಾಗಿ ಸಾಮಾನ್ಯ ವರ್ಗದವರಿಗೆ ಶೇ.80ರಷ್ಟು, ಎಸ್‌ಸಿ, ಎಸ್‌ಟಿ ಪಂಗಡದವರಿಗೆ ರಿಯಾಯತಿಯಲ್ಲಿ ಈ ಯೋಜನೆ ನೀಡಲಾಗುತ್ತದೆ.

 ಕೃಷಿ ಹೊಂಡ ನಿರ್ಮಿಸಲು ಮಾನದಂಡವೇನು? : ಕನಿಷ್ಠ ಒಂದು ಎಕರೆ ಭೂಮಿ ಹೊಂದಿರುವ ರೈತರು, ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್‌ ದಾಖಲೆ, ಆಧಾರ ಕಾರ್ಡ್‌ ಪ್ರತಿಗಳನ್ನು ನೀಡಬೇಕು. ಸರ್ಕಾರ ಸೂಚಿಸಿದ ಅನುದಾನವನ್ನು ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತದೆ. ನಂತರ ಕೃಷಿ ಅಧಿ ಕಾರಿಗಳು ಖುದ್ದು ಜಮೀನಿಗೆ ಭೇಟಿ ನೀಡಿ ಕೃಷಿ ಹೊಂಡ ನಿರ್ಮಿಸಲು ಸ್ಥಳ ಗುರುತಿಸಿ, ಪರಿಶೀಲನೆ ನಡೆಸುತ್ತಾರೆ.

ಕೃಷಿ ಹೊಂಡದಿಂದ ರೈತರು ಹೆಚ್ಚಿನ ಇಳುವರಿ ಪಡೆಯಲು ಮತ್ತು ಮಣ್ಣಿನ ಸವಕಳಿ ತಡೆಯಲು ಸಹಾಯವಾಗುತ್ತದೆ. ಹೀಗಾಗಿ ರೈತರು ಆಯಾ ಗ್ರಾಪಂ ಅಧಿಕಾರಿಗಳನ್ನು ಸಂಪರ್ಕಿಸಿ ಈ ಯೋಜನೆ ಲಾಭ ಪಡೆದುಕೊಳ್ಳಬೇಕು.- ಸಂತೋಷ ಚವ್ಹಾಣ, ಸಹಾಯಕ ನಿರ್ದೇಶಕರು, ಬಸವಕಲ್ಯಾಣ

 

-ಆರ್‌.ಎಸ್‌.ವೀರುರೆಡ್ಡಿ

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.