ಕಾಡಾನೆಗಳ ಹಾವಳಿಗೆ ರೈತರ ಬೆಳೆಗಳು ನಾಶ


Team Udayavani, Dec 6, 2020, 7:01 PM IST

ಕಾಡಾನೆಗಳ ಹಾವಳಿಗೆ ರೈತರ ಬೆಳೆಗಳು ನಾಶ

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಗೊಳಪಡುವ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದೆ. ಇದರಿಂದಾಗಿ ರೈತರು ಬೆಳೆದ ಬೆಳೆ ಅವರ ಕೈ ಸೇರುವ ಮೊದಲೇ ಕಾಡಾನೆಗಳ ಬಾಯಿಗೆ ತುತ್ತಾಗುತ್ತಿದೆ. ಇಷ್ಟದ್ದರೂ ಸಹ ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಗೂರು ಹೋಬಳಿಯ ಮಂಚಹಳ್ಳಿ ಸುತ್ತ ಮುತ್ತಲಿನ ಗ್ರಾಮಗಳ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಚ್ಚಿರುವ ಕಂದಕಗಳು: ತಾಲೂಕಿನ ಬಂಡೀಪುರ ಹುಲಿ ಯೋಜನೆಯ ಓಂಕಾರ್‌ ಅರಣ್ಯ ವಲಯದ ಕಾಡಂಚಿನಲ್ಲಿ ಕಂದಕಗಳು ಮುಚ್ಚಿ ಹೋಗಿದ್ದು, ಪ್ರತಿ ದಿನವೂ ಸಂಜೆಯಾಗುತ್ತಿದ್ದಂತೆಯೇ ಆನೆಗಳು ಅರಣ್ಯದಿಂದ ಹೊರಬಂದು ಮಂಚಹಳ್ಳಿ ಸುತ್ತ ಮುತ್ತಲಿನ ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಗಳನ್ನು ನಾಶಪಡಿ ಸುತ್ತಿವೆ. ಕಳೆದ ಒಂದು ವಾರದಿಂದ ಗ್ರಾಮದ ಕಾಡಂಚಿನ ಜಮೀನಿನಲ್ಲಿ ನಿರಂತರವಾಗಿ ಕಾಡಾನೆ ದಾಳಿ ನಡೆಸುತ್ತಿದೆ. ಕಾಡಿನಿಂದ ಬಂದ 6ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಮಂಚಹಳ್ಳಿಸಮೀಪದಲ್ಲಿರುವ ಶಿವು ಎಂಬುವವರಿಗೆ ಸೇರಿದ ಟೊಮೆಟೋ ಬೆಳೆಗಳನ್ನು ನಾಶಪಡಿಸಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ತಿಳಿಸಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ರೈತರು ದೂರಿದ್ದಾರೆ.

ಕಂದಕಗಳು ಮುಚ್ಚಿಕೊಂಡಿರುವ ಪ್ರದೇಶಗಳಲ್ಲಿ ರಾತ್ರಿ ಗಸ್ತು ನಡೆಸುತ್ತಿಲ್ಲ. ಇದರಿಂದ ಆನೆಗಳ ಹಾವಳಿ ಮಿತಿ ಮೀರಿದೆ. ಬೆಳಗಾಗುತ್ತಿದ್ದಂತೆ ಗುಡ್ಡದ ಬದಿಗೆ ತೆರಳುವ ಆನೆಗಳು ಕತ್ತಲಾಗುತ್ತಿದ್ದಂತೆ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ತಿನ್ನುತ್ತಿವೆ.ಆನೆಗಳು ಬಂದಿರುವ ಬಗ್ಗೆ ಕರೆ ಮಾಡಿದರೂ ಅರಣ್ಯ ಇಲಾಖೆಯವರು ಆನೆಗಳನ್ನು ಕಾಡಿ ಗಟ್ಟಲು ಮುಂದಾಗುತ್ತಿಲ್ಲ. ಇತ್ತೀಚಿಗೆ ಆನೆಗಳನ್ನು ಓಡಿಸಲು ಮುಂದಾಗುವ ರೈತರ ಮೇಲೆಯೇ ಆನೆಗಳು ದಾಳಿ ಮಾಡಲು ಮುಂದಾಗುತ್ತಿದ್ದು, ಇದರಿಂದ ರೈತರು ತಮ್ಮ ಬೆಳೆಗಳ ರಕ್ಷಣೆಗೆ ಕಾವಲು ನಡೆಸಲು ಹೆದರುತ್ತಿದ್ದಾರೆ. ಈ ಬಗ್ಗೆ ಓಂಕಾರ್‌ ವಲಯದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ರಾತ್ರಿ ಗಸ್ತು ನಡೆಸುವುದುಹಾಗೂ ಆನೆಗಳನ್ನು ಎದುರಿಸಲು ರೈತರಿಗೆ ಪಟಾಕಿ ವಿತರಣೆ ಮಾಡುತ್ತಿಲ್ಲ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಉಪಯೋಗವಾಗುತ್ತಿಲ್ಲ. ಬೆಳೆನಷ್ಟಕ್ಕೆ ಅರಣ್ಯ ಇಲಾಖೆ ಪುಡಿಗಾಸಿನ ಪರಿಹಾರ ನೀಡುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದ್ದರಿಂದ ಇನ್ನಾದರೂ ಸಂಬಂಧಪಟ್ಟವರು ಆನೆಗಳ ದಾಳಿ ತಡೆಗಟ್ಟಲುಕ್ರಮಕೈಗೊಳ್ಳಬೇಕು ಎಂದು ಮಂಚಹಳ್ಳಿ ಗ್ರಾಮದ ರೈತ ಶಿವು ಹಾಗೂ ಇತರರು ಒತ್ತಾಯಿಸಿದ್ದಾರೆ.

ಓಂಕಾರ್‌ ಅರಣ್ಯ ವಲಯದಕಾಡಂಚಿನಲ್ಲಿ ಹಳೆಯ ಕಂದಕಗಳು ಮಳೆಯಿಂದ ಮುಚ್ಚಿಹೋಗಿವೆ. ಇವುಗಳನ್ನು ಮತ್ತೆ ದುರಸ್ತಿ ಗೊಳಿಸುವವರೆಗೆ ಕಾಡಾನೆಗಳ ಹಾವಳಿ ತಡೆಗೆ ರಾತ್ರಿ ಗಸ್ತು ಹೆಚ್ಚಿಸಲುಕ್ರಮಕೈಗೊಳ್ಳಲಾಗುವುದು. ನಟೇಶ್‌, ಬಂಡೀಪುರ ಹುಲಿ ಯೋಜನೆ ನಿರ್ದೇಶಕ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.