ಹಳ್ಳಿ ಪಂಚಾಯ್ತಿ ಫೈಟ್‌ ಅಖಾಡಕ್ಕಿಳಿಯಲು ಸಜ್ಜು

ಹಳ್ಳಿಕಟ್ಟೆಯಲ್ಲಿ ಆಕಾಂಕ್ಷಿಗಳ ಆಯ್ಕೆ ಕಸರತ್ತು „ಆಕಾಂಕ್ಷಿತರಿಂದಲೇ ಸಮಸ್ಯೆ ಪರಿಹರಿಸುವ ಯತ್ನ

Team Udayavani, Dec 6, 2020, 7:13 PM IST

ಹಳ್ಳಿ ಪಂಚಾಯ್ತಿ ಫೈಟ್‌ ಅಖಾಡಕ್ಕಿಳಿಯಲು ಸಜ್ಜು

ಮಂಡ್ಯ: ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ ಪಂಚಾಯ್ತಿ ಅಖಾಡಕ್ಕಿಳಿಯಲು ಆಕಾಂಕ್ಷಿತರು ಕಸರತ್ತು ನಡೆಸುತ್ತಿದ್ದಾರೆ. ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮೊದಲ ಹಂತದ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ಡಿ.11ರಿಂದ ಪ್ರಾರಂಭವಾಗಲಿದೆ. ಅದಕ್ಕಾಗಿ ಅಭ್ಯರ್ಥಿಗಳ ಆಯ್ಕೆ ರಾಜಕೀಯ ಪಕ್ಷಗಳ ಮುಖಂಡರು ಇನ್ನಿಲ್ಲದಕಸರತ್ತು ನಡೆಸುತ್ತಿದ್ದಾರೆ.

ಹಳ್ಳಿಕಟ್ಟೆ, ಹೋಟೆಲ್‌ಗ‌ಳೇ ಆಯ್ಕೆ ತಾಣಗಳು: ಗ್ರಾಮದಲ್ಲಿರುವ ಹಳ್ಳಿಕಟ್ಟೆ ಹಾಗೂ ಹೋಟೆಲ್‌ಗ‌ಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ನಾಮಪತ್ರ ಸಲ್ಲಿಕೆಗೆ ದಿನ ಹತ್ತಿರವಾಗುತ್ತಿದ್ದಂತೆ ಆಕಾಂಕ್ಷಿತರಲ್ಲಿ ತಳ ಮಳ ತರಿಸಿದೆ. ಮೂರು ಪಕ್ಷಗಳ ನಾಯಕರು ಬೂತ್‌ ಮಟ್ಟದ ಮುಖಂಡರಿಗೆ ಅಭ್ಯರ್ಥಿಗಳ ಆಯ್ಕೆಗೆ ಸೂಚಿಸಿರು ವುದರಿಂದ ಯಾರಿಗೆ ಟಿಕೆಟ್‌ ನೀಡು ವುದು ಎಂಬ ಗೊಂದಲವೂ ಮುಂದು ವರೆದಿದೆ.

ಟಿಕೆಟ್‌ಗಾಗಿ ಮುಖಂಡರಿಗೆಆಕಾಂಕ್ಷಿಗಳು ಒತ್ತಡ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾರಿಗೆ ಟಿಕೆಟ್‌ ನೀಡುವುದು, ಬಂಡಾಯ ಶಮನಗೊಳಿಸುವ ಯತ್ನಗಳು ನಡೆಯುತ್ತಿವೆ. ಅಭ್ಯರ್ಥಿ ಆಯ್ಕೆಗೆ ಮುಂದಾದ ಮುಖಂಡರು: ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾ ವಣೆಯೇ ವಿಧಾನಸಭೆ ಚುನಾವಣೆಗಿಂತಲೂ ರಂಗು ಪಡೆಯುತ್ತದೆ. ಹಳ್ಳಿ ಪಂಚಾಯ್ತಿ ಅಖಾಡದಲ್ಲಿ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ರಾಜಕೀಯ ಪಕ್ಷಗಳ ಚಿಹ್ನೆಯಡಿ ನಡೆಯದಿದ್ದರೂ, ಬೆಂಬಲಿತಅಭ್ಯರ್ಥಿಗಳಾಗಿ ಕಣಕ್ಕಿಳಿಸಲಾಗುತ್ತಿದೆ. ಅದಕ್ಕಾಗಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟ ಶುರುವಾಗಿದೆ. ಈಗಾಗಲೇ ಹಲವು ಗ್ರಾಪಂಗಳಲ್ಲಿ ಅಭ್ಯರ್ಥಿಗಳು ಬಹುತೇಕ ಅಂತಿಮವಾಗಿದ್ದರೂ, ಕೆಲವೊಂದು ಕಡೆ ಬಂಡಾಯದ ಬಿಸಿ ಹೆಚ್ಚಾಗಿದ್ದು, ಶಮನ ಪ್ರಯತ್ನಗಳು ನಡೆಯುತ್ತಿವೆ.

ರಾಜಿ ಸಂಧಾನ ಯತ್ನ: ಜಿಲ್ಲೆಯಲ್ಲಿ ಸಾಂಪ್ರದಾಯಿಕಎದುರಾಳಿಗಳಾಗಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಕ್ಕೆ ಆಕಾಂಕ್ಷಿತರು ಹೆಚ್ಚಾಗಿ ರುವುದರಿಂದ ಬಂಡಾಯದ ಕೂಗುಗಳು ಕೇಳಿ ಬರುತ್ತಿವೆ. ಅದಕ್ಕಾಗಿ ಗ್ರಾಮ ಮಟ್ಟದ ಎರಡು ಪಕ್ಷಗಳ ಮುಖಂಡರು ಟಿಕೆಟ್‌ ಆಕಾಂಕ್ಷಿತರ ನಡುವೆ ಸಮನ್ವಯ ಸಾಧಿಸಿ ರಾಜಿ ಸಂಧಾನ ಮಾಡುವ ಯತ್ನಗಳು ನಡೆಯುತ್ತಿವೆ.

ಅವಿರೋಧ ಆಯ್ಕೆಗೂ ಕಸರತ್ತು: ಕೆಲವು ಕಡೆ ಗ್ರಾಮಸ್ಥರೇ ಪಂಚಾಯ್ತಿ ನಡೆಸಿ ಅವಿರೋಧ ಆಯ್ಕೆ ಮಾಡಲು ಮುಂದಾಗಿದ್ದಾರೆ. ಆಕಾಂಕ್ಷಿತರು ಹೆಚ್ಚಿರುವ ಕಡೆ ಒಬ್ಬ ಒಮ್ಮತ ಅಭ್ಯರ್ಥಿ ಆಯ್ಕೆ ಮಾಡುವ ಮೂಲಕ ಆತನಿಂದ ಗ್ರಾಮದ ಅಭಿವೃದ್ಧಿ ಹಾಗೂ ದೇವಾಲಯಗಳ ಅಭಿವೃದ್ಧಿಗೆ ಇಂತಿಷ್ಟು ಹಣ ನೀಡುವ ಆಫರ್‌ ಕೊಡಲಾಗುತ್ತಿದೆ. ಚುನಾವಣೆಗೆ ಖರ್ಚು ಮಾಡಬೇಕಾದ ಹಣವನ್ನು ಗ್ರಾಮದ ಅಭಿವೃದ್ಧಿಗೆ ನೀಡಿದರೆ, ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಎಂಬ ಮಾತುಕತೆ, ಚರ್ಚೆಗಳು ಹೆಚ್ಚಾಗುತ್ತಿದೆ.

ಆಕಾಂಕ್ಷಿತರಿಂದಲೇ ಸಮಸ್ಯೆ ಪರಿಹರಿಸುವ ಯತ್ನ: ಹೆಚ್ಚಿನ ಸಂಖ್ಯೆಯಲ್ಲಿರುವಆಕಾಂಕ್ಷಿತರನ್ನು ಸಮಾಧಾನಗೊಳಿಸಲು ಬೂತ್‌ ಮಟ್ಟದ ರಾಜಕೀಯ ಮುಖಂಡರು ಆಕಾಂಕ್ಷಿತರನ್ನು ಒಂದೆಡೆ ಸೇರಿಸಿ, ಯಾರು ಚುನಾವಣೆಯಲ್ಲಿ ಗೆಲ್ಲಲು ಹಾಗೂ ಹಣ ಖರ್ಚು ಮಾಡುವ ಸಾಮರ್ಥ್ಯ ವಿರುವವರು ನೀವೇ ಚರ್ಚಿಸಿ, ನಿರ್ಧಾರ ಕೈಗೊಳ್ಳುವಂತೆ ಆಕಾಂಕ್ಷಿತರ ಹೆಗಲಿಗೆ ಜವಾಬ್ದಾರಿ ಹೊರಿಸುವ ಮೂಲಕ ಚುನಾವಣೆಯಲ್ಲಿ ಬಂಡಾಯ ಏಳದಂತೆ ಮಾಡುವ ಪ್ರಯತ್ನಗಳು ಸದ್ದಿಲ್ಲದೆ ನಡೆಯುತ್ತಿದೆ. ಇದಕ್ಕಾಗಿ ಒಂದೇ ಪಕ್ಷದ ಆಕಾಂಕ್ಷಿತರನ್ನು ಮತ್ತೂಬ್ಬ ಟಿಕೆಟ್‌ ಆಕಾಂಕ್ಷಿ ಚುನಾವಣೆಗೆ ಸ್ಪರ್ಧಿಸದಂತೆ ಸಮಾಧಾನಗೊಳಿಸಲು ರಾತ್ರಿಯ ಪಾನಗೋಷ್ಠಿಗಳು ಹೆಚ್ಚಾಗಿ ನಡೆಯುತ್ತಿವೆ.

ಜಿಲ್ಲೆಯ ಮೂರು ಪಕ್ಷ ಗಳಿಗೆ ಪ್ರತಿಷ್ಠೆಯ ಚುನಾವಣೆ :  ಜಿಲ್ಲೆಯಲ್ಲಿ ಯಾವುದೇ ಚುನಾವಣೆ ಬಂದರೂ ಅತಿ ಹೆಚ್ಚು ಪೈಪೋಟಿ ಎದುರಾಗುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ನಡುವೆ ಮಾತ್ರ. ಆದರೆ, ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿ 3797 ಸದಸ್ಯ ಸ್ಥಾನಗಳಲ್ಲಿ ಸ್ಪರ್ಧಿಸುವ ಮೂಲಕ ಪೈಪೋಟಿ ನೀಡಲು ಮುಂದಾಗಿದೆ. ಇದರಿಂದ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ. ಈಗಾಗಲೇ ಬಿಜೆಪಿ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ಗ್ರಾಮ ಸ್ವರಾಜ್ಯ ಸಮಾವೇಶ ಮಾಡುತ್ತಿದೆ. ಇತ್ತ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿವೆ. ಕಳೆದ ಬಾರಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಜೆಡಿಎಸ್‌ 2ನೇ ಸ್ಥಾನದಲ್ಲಿತ್ತು.

ನಾಮಪತ್ರ ಸಲ್ಲಿಕೆಗೆ ಸಿದ್ಧತೆ : ಡಿ.11ರಿಂದ ಮೊದಲ ಹಂತದ ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ತಾಲೂಕು ವ್ಯಾಪ್ತಿಯ ಗ್ರಾಪಂಗಳಿಗೆ ಹಾಗೂ 2ನೇ ಹಂತದಲ್ಲಿ ಪಾಂಡವಪುರ,ಕೆ.ಆರ್‌.ಪೇಟೆ, ನಾಗಮಂಗಲ ಹಾಗೂ ಶ್ರೀರಂಗಪಟ್ಟಣ ತಾಲೂಕುಗಳಲ್ಲಿ ಡಿ.16ರಿಂದ ಉಮೇದುವಾರಿಕೆ ಸಲ್ಲಿಕೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಆಕಾಂಕ್ಷಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳ ಸಂಗ್ರಹಕ್ಕೆ ತಾಲೂಕು, ನಾಡ ಕಚೇರಿಗಳಿಗೆ ಎಡತಾಕುತ್ತಿದ್ದಾರೆ.

ಚಿಹ್ನೆಗಳ ಆಯ್ಕೆಗೆ ಜ್ಯೋತಿಷಿಗಳ ಮೋರೆ :  ಗೆಲುವಿನ ನಿರ್ಧಾರವೂ ಸಹ ಚಿಹ್ನೆಗಳ ಮೇಲೆ ಅವಲಂಬಿತವಾಗುತ್ತದೆ ಎಂಬ ನಂಬಿಕೆ ಅಭ್ಯರ್ಥಿಗಳಲ್ಲಿರುವುದರಿಂದ ಯಾವ ಚಿಹ್ನೆ ಪಡೆದರೆ ಸೂಕ್ತಎಂಬ ನಿರ್ಧಾರಕ್ಕೆ ಜೋತಿಷಿ ಹಾಗೂ ಹಿರಿಯ ಮುಖಂಡರಸಲಹೆಗಳಿಗೆ ಮುಂದಾಗಿದ್ದಾರೆ.ಕಳೆದ ಬಾರಿ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಷ್‌ ಪಡೆದಿದ್ದ ಕಹಳೆ ಊದುವ ಮನುಷ್ಯನ ಚಿಹ್ನೆ ಹೆಚ್ಚು ಪ್ರಚಲಿತಗೊಂಡಿರುವ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಿದೆ. ಆದರೆ, ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಈ ಚಿಹ್ನೆ ಪಡೆಯಲು ಹಿಂದೇಟು ಹಾಕುತ್ತಿದ್ದರೆ,ಯಾವುದೇ ಪಕ್ಷಗಳ ಬೆಂಬಲ ಇಲ್ಲದೆ ನಿಲ್ಲುವ ಪಕ್ಷೇತರ ಅಭ್ಯರ್ಥಿಗಳು ಈ ಚಿಹ್ನೆ ಪಡೆಯಲು ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿಕೇಳಿ ಬರುತ್ತಿದೆ.

 

ಎಚ್‌.ಶಿವರಾಜು

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.