ಕುವೈತ್, ಕತಾರ್ಗೆ ವಿದೇಶಾಂಗ ಸಚಿವರ ಪ್ರವಾಸ: ಕೊಲ್ಲಿ ರಾಷ್ಟ್ರಗಳ ಸ್ನೇಹಕ್ಕೆ ಇನ್ನಷ್ಟು ಬಲ
Team Udayavani, Dec 6, 2020, 10:26 PM IST
ನವದೆಹಲಿ: ಒಂದುಕಡೆ ವಿಶ್ವಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿ ಮಾಡುತ್ತಲೇ ಸಾಗಿರುವ ಭಾರತ, ಇನ್ನೊಂದು ಕಡೆ ಕೊಲ್ಲಿ ರಾಷ್ಟ್ರಗಳೊಂದಿಗಿನ ಸ್ನೇಹವನ್ನು ಇನ್ನಷ್ಟು ಬಲಗೊಳಿಸುವ ದಿಕ್ಕಿನಲ್ಲಿ ಮುನ್ನುಗ್ಗಿದೆ. ಇದೇ ನಿಟ್ಟಿನಲ್ಲಿ ಈ ಮಾಸಾಂತ್ಯದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕುವೈತ್ ಮತ್ತು ಕತಾರ್ಗೆ ತೆರಳಲಿದ್ದಾರೆ. ಸಹಾಯಕ ವಿದೇಶಾಂಗ ಸಚಿವರಾದ ವಿ.ಮುರಳೀಧರನ್ ಒಮಾನ್ಗೆ ಹೋಗಲಿದ್ದಾರೆ. ಇದೇ ವೇಳೆ ಭೂಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಯುಎಇ ಮತ್ತು ಸೌದಿ ಅರೇಬಿಯ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಭೇಟಿಯ ನಿಖರ ಉದ್ದೇಶ ಇನ್ನೂ ಬಹಿರಂಗವಾಗಿಲ್ಲ. ಆದರೆ ಕೊಲ್ಲಿ ರಾಷ್ಟ್ರಗಳಲ್ಲಿ ಕೊರೊನಾಪೂರ್ವ ಕೆಲಸ ಮಾಡುತ್ತಿದ್ದ ಭಾರತೀಯರ ಹಿತ ಕಾಪಾಡುವ ಉದ್ದೇಶವಿದೆ ಎನ್ನಲಾಗಿದೆ. ಕೊರೊನಾ ಶುರುವಾದ ನಂತರ ದೊಡ್ಡ ಪ್ರಮಾಣದಲ್ಲಿ ಭಾರತೀಯರು ದೇಶಕ್ಕೆ ಮರಳಿದ್ದರು. ಅವರನ್ನೆಲ್ಲ ಮರಳಿ ಕರೆಸಿಕೊಳ್ಳಿ ಎಂದು ಜೈಶಂಕರ್ ಒತ್ತಾಯಿಸುವ ಸಾಧ್ಯತೆಯಿದೆ. ವಿದೇಶದಲ್ಲಿ ವಾಸ ಮಾಡುತ್ತಿರುವ ಒಟ್ಟು ಭಾರತೀಯರ ಪೈಕಿ ಶೇ.70ರಷ್ಟು ಮಂದಿ, ಆರು ಪಶ್ಚಿಮ ಏಷ್ಯಾರಾಷ್ಟ್ರಗಳಾದ ಯುಎಇ, ಸೌದಿ ಅರೇಬಿಯ, ಕುವೈಟ್, ಒಮಾನ್, ಕತಾರ್, ಬಹ್ರೈನ್ನಲ್ಲಿಯೇ ಇದ್ದಾರೆನ್ನುವುದು ಗಮನಾರ್ಹ.
ಇದನ್ನೂ ಓದಿ:ಚಿಕ್ಕಬಳ್ಳಾಪುರ ಜಿಲ್ಲೆಯ 5ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿಸುವುದೇ ಗುರಿ: ಡಾ.ಕೆ.ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ