ಗುರು-ಶಿಷ್ಯರ ಭೇಟಿ: ಬಹಳ ದಿನಗಳ ನಂತರ ವಿಧಾನಸೌಧದಲ್ಲಿ ಸಿದ್ದರಾಮಯ್ಯ- ಮುನಿರತ್ನ ಪಟ್ಟಾಂಗ!
Team Udayavani, Dec 7, 2020, 1:58 PM IST
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು ಆರಂಭವಾಗಿದೆ. ಬೆಳಿಗ್ಗೆ ಆರಂಭವಾದ ಕಲಾಪ ಮಧ್ಯಾಹ್ನ 2.30 ಕ್ಕೆ ಮುಂದೂಡುತ್ತಲೇ ವಿಧಾನಸೌಧದಲ್ಲಿ ಸ್ವಾರಸ್ಯಕರ ಸನ್ನಿವೇಶವೊಂದು ನಡೆದಿದೆ. ಅದುವೆ ಗುರು- ಶಿಷ್ಯರ ಭೇಟಿ, ಅಂದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ನೂತನ ಶಾಸಕ ಮುನಿರತ್ನ ಭೇಟಿ.
ಸಿದ್ದರಾಮಯ್ಯ ಶಿಷ್ಯನಾಗಿದ್ದ ಮುನಿರತ್ನ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿ, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಈಗ ಇತಿಹಾಸ. ಬಿಎಸ್ ವೈ ಸರ್ಕಾರದಲ್ಲಿ ಮೊದಲ ಬಾರಿಗೆ ಇಂದು ಕಲಾಪಕ್ಕೆ ಕಾಲಿಟ್ಟ ಮುನಿರತ್ನ, ತಮ್ಮ ಹಳೆ ಗುರುವಿನ ಬಳಿ ಗಹನ ಚರ್ಚೆ ನಡೆಸಿದರು.
ಇದನ್ನೂ ಓದಿ:ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಅಗತ್ಯವಿಲ್ಲ: ಡಿ ಕೆ ಶಿವಕುಮಾರ್
ಮುನಿರತ್ನ ಬಿಜೆಪಿಗೆ ಸೇರ್ಪಡೆಯಾದ ಬಳಿಕ ಸಿದ್ದರಾಮಯ್ಯ ಟೀಕಿಸಿದ್ದರು. ಉಪಚುನಾವಣೆ ಸಂದರ್ಭದಲ್ಲಿ ಶಿಷ್ಯನ ವಿರುದ್ದ ಭಾರಿ ವಾಗ್ದಾಳಿಯನ್ನೇ ನಡೆಸಿದ್ದರು ಸಿದ್ದರಾಮಯ್ಯ. ಮುನಿರತ್ನ ತಾಯಿಗೆ ದ್ರೋಹ ಬಗೆದು ಹೋಗಿದ್ದಾರೆ ಎಂಬಿತ್ಯಾದಿಯಾಗಿ ಸಿದ್ದರಾಮಯ್ಯ ಟೀಕೆ ಮಾಡಿದ್ದರು.
ಆದರೆ ಕಲಾಪದಲ್ಲಿ ಗುರು-ಶಿಷ್ಯರ ಮುಖಾಮುಖಿಯಾಗಿದ್ದು, ಬಿಜೆಪಿ ಬೆಳವಣಿಗೆಗಳು, ಉಪಚುನಾವಣೆ ಗೆಲುವು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತಾನಾಡುತ್ತಾ ಕುಳಿತರು. ಬಿಜೆಪಿಗೆ ಹೋದ ಬಳಿಕದ ಅನುಭವಗಳನ್ನು ಮುನಿರತ್ನ ಗುರು ಸಿದ್ದರಾಮಯ್ಯ ಬಳಿ ಹಂಚಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ