ಅಳಿದುಳಿದ ತೊಗರಿಗೆ ನೆಟೆರೋಗ

ತೇವಾಂಶದಿಂದ ಒಣಗುತ್ತಿದೆ ಬೆಳೆ,ಮತ್ತೆ ಸಂಕಷ್ಟದಲ್ಲಿ ನೇಗಿಲಯೋಗಿ

Team Udayavani, Dec 7, 2020, 5:26 PM IST

ಅಳಿದುಳಿದ ತೊಗರಿಗೆ ನೆಟೆರೋಗ

ಕಲಬುರಗಿ: ಶತಮಾನದ ಅತಿ ಹೆಚ್ಚಿನ ಮಳೆಯಿಂದ ಅಳಿದುಳಿದ ತೊಗರಿ ಬೆಳೆ ನೆಟೆರೋಗಕ್ಕೆ ತುತ್ತಾಗುತ್ತಿದೆ. ಇನ್ನೇನು ಕೈಗೆ ಸೇರುತ್ತಿದೆ ಎನ್ನುವ ಹೊತ್ತಿಗೆ ತೇವಾಂಶ ಹೆಚ್ಚಾಗಿ ಬೇರುಗಳೆಲ್ಲ ಕೊಳೆತು ಹೋಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಅಕ್ಟೋಬರ್‌ ತಿಂಗಳಲ್ಲಿ ಅತಿವೃಷ್ಟಿಯಿಂದ ಜಿಲ್ಲೆಯಾದ್ಯಂತ 4.41ಲಕ್ಷ ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಇದರಲ್ಲಿ ಮೂರು ಲಕ್ಷ ಹೆಕ್ಟೇರ್‌ ತೊಗರಿ ಬೆಳೆ ಸೇರಿದೆ. ಈಗ ನೆಟೆರೋಗದಿಂದ ಜಿಲ್ಲೆಯಾದ್ಯಂತ ಒಂದು ಲಕ್ಷ ಎಕರೆಗೂ ಅಧಿಕ ಬೆಳೆ ಒಣಗಿ ಹೋಗಿದೆ. ಮುಖ್ಯವಾಗಿ ಅತಿವೃಷ್ಟಿ ನಂತರ ಸಮೃದ್ಧವಾಗಿದ್ದ ಬೆಳೆಗೆ ಎರಡ್ಮೂರು ಸಲ ಕೀಟನಾಶಕ ಸಿಂಪಡಿಸಿದ ನಂತರ ಒಣಗುತ್ತಿದೆ.

15ದಿನಗಳು ಕಳೆದಿದ್ದರೆ ತೊಗರಿ ಕೈ ಸೇರುತ್ತಿತ್ತು. ಅತಿವೃಷ್ಟಿ ಸಂದರ್ಭದಲ್ಲೇ ಬೆಳೆ ಹಾನಿಯಾಗಿದ್ದರೆ ಕೀಟಬಾಧೆ ತಪ್ಪಿಸುವ ನಿಟ್ಟಿನಲ್ಲಿ ಕೀಟನಾಶಕಗಳ ಸಿಂಪರಣೆಗೆ ಸಾವಿರಾರು ರೂ. ಖರ್ಚು ಮಾಡುವುದು ತಪ್ಪಿರುತ್ತಿತ್ತು. ಆದರೆ ಎರಡ್ಮೂರು ಸಲ ಕೀಟನಾಶಕ ಸಿಂಪರಿಸಿದ ನಂತರ ತೊಗರಿ ನೆಟೆರೋಗಕ್ಕೆ ಒಳಗಾಗಿದ್ದಲ್ಲದೇ ಸಾಲ ತೆಗೆದುಕೊಳ್ಳುವುದು ತಪ್ಪಲಿಲ್ಲ ಎನ್ನುವಂತಾಗಿದೆ.

ಕಲಬುರಗಿ ತೊಗರಿ ಕಣಜ. ಪ್ರತಿವರ್ಷ ಅಂದಾಜು 40 ಲಕ್ಷ ಕ್ವಿಂಟಲ್‌ ಇಳುವರಿ ಬರುತ್ತದೆ. ಅಂದಾಜು ಎರಡೂವರೆಯಿಂದ ಮೂರು ಸಾವಿರ ಕೋಟಿ ರೂ. ಆರ್ಥಿಕವ್ಯವಹಾರ ನಡೆಯುತ್ತದೆ. ತೊಗರಿಯೊಂದೇ ಇಲ್ಲಿನ ಪ್ರಮುಖ ಬೆಳೆ ಹಾಗೂ ಮಾರುಕಟ್ಟೆ. ಅತಿವೃಷ್ಟಿಯಿಂದ ಅಂದಾಜು ಶೇ. 60 ಅಂದರೆ ಅಂದಾಜು 1800 ಕೋಟಿ ರೂ. ಮೊತ್ತದ ತೊಗರಿ ಬೆಳೆ ಹಾನಿಯಾಗಿದೆ. ಮತ್ತೂಂದೆಡೆ ಈಗ ನೆಟೆರೋಗಕ್ಕೆ ಒಳಗಾಗಿದೆ. ನೆಟೆರೋಗದಿಂದ ಅಂದಾಜು 500 ಕೋಟಿ ರೂ.ಗೂ ಅಧಿಕ ತೊಗರಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಬಾರದ ಪರಿಹಾರ: ಅತಿವೃಷ್ಟಿ ಹಾನಿಗೆ ಪರಿಹಾರ ಬರುತ್ತದೆ ಎಂದು ರೈತ ಕಾಯುತ್ತಿದ್ದಾನೆ. ಮೂಗಿಗೆ ತುಪ್ಪ ಸವರಿದಂತೆ ಕೇವಲ 27ಸಾವಿರ ರೂ. ಮಾತ್ರ ಬೆಳೆ ಹಾನಿ ಪರಿಹಾರ ವಿತರಿಸಲಾಗಿದೆ. ಸರ್ಕಾರ ವಾರಕ್ಕೊಮ್ಮೆ ರೈತರ ಖಾತೆಗಳಿಗೆ ಪರಿಹಾರ ಜಮೆ ಮಾಡುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ 2.65 ಲಕ್ಷ ರೈತರ ಬೆಳೆ ಹಾನಿಯಾಗಿದೆ ಎಂಬುದಾಗಿ ಎನ್‌ ಡಿಆರ್‌ಎಫ್‌ ನಿಯಮದಡಿ 300 ಕೋಟಿ ರೂ. ಪರಿಹಾರ ಕೇಳಲಾಗಿದೆ. ಈಗಿನ ನೆಟೆರೋಗದಿಂದ ಹಾಳಾಗುತ್ತಿರುವ ತೊಗರಿಗೆ ಪರಿಹಾರವೇ ಇಲ್ಲ ಎನ್ನುವಂತಿದೆ.

ಅತಿವೃಷ್ಟಿ ಸಂದರ್ಭದಲ್ಲೇ ತೊಗರಿ ನೆಟೆರೋಗಕ್ಕೆ ಒಳಗಾಗಿದ್ದರೆ ಕೀಟನಾಶಕಕ್ಕಾಗಿ ಹಣ ಖರ್ಚು ಮಾಡುವುದು ತಪ್ಪುತ್ತಿತ್ತು. ಜತೆಗೆ ಆವಾಗಲೇ ಹೊಲ ಸ್ವತ್ಛ ಮಾಡಿಹಿಂಗಾರಿ ಹಂಗಾಮಿನ ಬಿಳಿಜೋಳ ಇಲ್ಲವೇ ಕಡಲೆ ಬಿತ್ತನೆ ಮಾಡಿ ಕೈಗೆ ಸ್ವಲ್ಪ ನಿಟ್ಟಿನಲ್ಲಾದರೂ ಬೆಳೆ ಪಡೆಯಬಹುದಿತ್ತು. ಈಗ ನೆಟೆರೋಗ ಎಲ್ಲವನ್ನೂ ಹಾಳು ಮಾಡಿದೆ. ಲಕ್ಷ್ಮೀಪುತ್ರ ಜವಳಿ, ರೈತ.

ಸತತ ಮಳೆಯಿಂದ ಹಲವು ದಿನಗಳ ಕಾಲ ತೊಗರಿ ನೀರಲ್ಲೇನಿಂತಿರುವುದರಿಂದ ನೆಟೆರೋಗಕ್ಕೆ ಒಳಗಾಗುವುದು ಸಹಜ. ಅತಿವೃಷ್ಟಿ ಹಾನಿ ವರದಿ ರೂಪಿಸುವಾಗಲೇ ತೊಗರಿ ನೆಟೆರೋಗಕ್ಕೆ ಒಳಗಾಗುವುದನ್ನು ಅಂದಾಜಿಸಿ ವರದಿಯಲ್ಲಿ ಸೇರಿಸಲಾಗಿದೆ. ನೆಟೆರೋಗ ತಳಿ ಇದ್ದರೂ ಈ ವರ್ಷದ ಮಳೆ ಹಾಗೂ ಅಪಾಯದಿಂದ ತಪ್ಪಿಸಿಕೊಳ್ಳದಂತಾಗಿದೆ. –ರತೀಂದ್ರನಾಥ ಸುಗೂರ, ಜಂಟಿ ಕೃಷಿ ನಿರ್ದೇಶಕ

 

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.