ವಾಹನ ಚಾಲಕರ ಮೇಲೆ ಕ್ಯಾಮೆರಾ ಕಣ್ಣು

|ಸಂಚಾರಿ ನಿಯಮ ಉಲ್ಲಂಘಿಸಿದರೆ ಮನೆ ಬಾಗಿಲಿಗೇ ನೋಟಿಸ್‌|ನಗರದಲ್ಲಿ 20 ಸಿಸಿ ಕ್ಯಾಮೆರಾ ಅಳವಡಿಕೆ

Team Udayavani, Dec 7, 2020, 6:06 PM IST

ವಾಹನ ಚಾಲಕರ ಮೇಲೆ ಕ್ಯಾಮೆರಾ ಕಣ್ಣು

ಸಿಂಧನೂರು: ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಇಲ್ಲವೆಂದು ಯರ್ರಾಬಿರ್ರಿ ವಾಹನ ಚಲಾಯಿಸಿದರೆ ಮನೆ ಬಾಗಿಲಿಗೇ ನೋಟಿಸ್‌ ಬರಲಿದೆ!

ಹೌದು. ಇಲಾಖೆ ಕಚೇರಿಯಲ್ಲೇ ಕುಳಿತು ನಿಯಮ ಉಲ್ಲಂಘಿಸುವ ಸವಾರರನ್ನು ಪತ್ತೆ ಹಚ್ಚಲು ಪೊಲೀಸರು ಈ ಹೊಸ ವಿಧಾನ ಕಂಡುಕೊಂಡಿದ್ದಾರೆ. ನಗರದ ಪ್ರಮುಖ ವೃತ್ತಗಳು, ಜನನಿಬಿಡ ಸ್ಥಳಗಳಲ್ಲಿ 20 ಸಿಸಿ ಕ್ಯಾಮೆರಾಗಳನ್ನು ಕಳೆದ 4 ದಿನದ ಹಿಂದೆ ಅಳವಡಿಸಲಾಗಿದೆ. ವಾಗ್ವಾದ, ಚರ್ಚೆಗೆ ಅವಕಾಶವಿಲ್ಲದಂತೆ ನೇರವಾಗಿ ವಾಹನ ಮಾಲೀಕರನ್ನು ಪತ್ತೆ ಹಚ್ಚಿ ದಂಡ ವಿ ಧಿಸಲು ಇಲಾಖೆ ನಿರ್ಧರಿಸಿದೆ.

ಏನಿದು ವ್ಯವಸ್ಥೆ?: ನಗರದ ಚನ್ನಮ್ಮ ಸರ್ಕಲ್‌ ನಲ್ಲಿ 3, ಮಹಾತ್ಮ ಗಾಂಧಿ  ಸರ್ಕಲ್‌ನಲ್ಲಿ 4, ಬಸ್‌ ನಿಲ್ದಾಣದಲ್ಲಿ 4 ಕಡೆ, ಬಸವೇಶ್ವರ ಸರ್ಕಲ್‌ನಲ್ಲಿ 3, ಟಿಪ್ಪು ಸುಲ್ತಾನ್‌ಸರ್ಕಲ್‌ನಲ್ಲಿ 2, ಹಳೇ ಬಜಾರ್‌ನಲ್ಲಿ 2, ಪಿಡಬ್ಲ್ಯುಡಿ ಕ್ಯಾಂಪಿನ ಅಂಬೇಡ್ಕರ್‌ ವೃತ್ತದಲ್ಲಿ 2 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈಗಾಗಲೇ 16 ಕ್ಯಾಮೆರಾಗಳಿಗೆ ಕೇಬಲ್‌ ಸಂಪರ್ಕ ಕಲ್ಪಿಸಲಾಗಿದ್ದು, ಪೊಲೀಸ್‌ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯ ದೊಡ್ಡ ಸ್ಕ್ರಿನ್‌ ನಲ್ಲಿ ದೃಶ್ಯಾವಳಿ ವೀಕ್ಷಿಸಲಾಗುತ್ತದೆ. ಇಬ್ಬರು ಸಂಚಾರಿ ಠಾಣೆಯ ಸಿಬ್ಬಂದಿ ಮಾನಿಟರ್‌ಮಾಡಲಿದ್ದು, ನಿಯಮ ಉಲ್ಲಂಘನೆ ಕಂಡುಬರುತ್ತಿದ್ದಂತೆ ವಾಹನದ ನಂಬರ್‌ ಆಧರಿಸಿ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ. ಬೃಹತ್‌ ಮಹಾನಗರಗಳಲ್ಲಿ ಜಾರಿಯಲ್ಲಿರುವ ಈ ವ್ಯವಸ್ಥೆಯನ್ನು ನಗರದಲ್ಲಿ ಅಳವಡಿಸಿದ್ದು, ಎಸ್ಪಿ ನಿಕ್ಕಮ್‌ ಪ್ರಕಾಶ್‌ ಅಮ್ರಿತ್‌ ಅವರಿಂದ ಅಧಿಕೃತವಾಗಿ ಚಾಲನೆ ಕೊಡಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಹಲವರು ಪತ್ತೆ: ಮೂರ್‍ನಾಲ್ಕು ದಿನದಲ್ಲೇ ವಿವಿಧ ರೀತಿಯ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆಯಾಗಿವೆ. ಟ್ರಾμಕ್‌ನಲ್ಲಿ ನಿಂತು ಮೊಬೈಲ್‌ನಲ್ಲಿ ಮಾತನಾಡುವುದು, ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ನಿಲುಗಡೆ, ಸಿಗ್ನಲ್‌ ಜಂಪ್‌ ಸೇರಿ ಇತರೆ ಅಪರಾಧಗಳನ್ನುಗುರುತಿಸಲಾಗಿದೆ. ಡಿ.4ರಂದು-25,  ಡಿ.5ರಂದು-26, ಡಿ.6ರಂದು-25 ಪ್ರಕರಣಗಳು ಪತ್ತೆಯಾಗಿದ್ದು, ಮಾಲೀಕರ ಹೆಸರು ಗುರುತಿಸಲಾಗಿದೆ. ಸಂಚಾರಿ ಪೊಲೀಸರಿಗೆ ತಮಗೆ ಲಭ್ಯವಿರುವ ವಾಹನ ಸಮನ್ವಯ ತಂತ್ರಾಂಶದಲ್ಲಿ ಗಾಡಿ  ನಂಬರ್‌ ನಮೂದಿಸಿ, ಮಾಲೀಕರನ್ನು ಪತ್ತೆ ಹಚ್ಚುತ್ತಿದ್ದಾರೆ. ನಿಯಮ ಉಲ್ಲಂಘಿಸಿದ ದೃಶ್ಯ ಕಣ್ಣಿಗೆ ಬೀಳುತ್ತಿದ್ದಂತೆ ಠಾಣೆಯಲ್ಲೇ ಜೂಮ್‌ ಮಾಡುವ ವಾಹನದ ನಂಬರ್‌, ಮಾಲೀಕನ ಚಿತ್ರ ಬರುವಂತೆ ಸ್ಕ್ರಿನ್‌ ಶಾಟ್‌ತೆಗೆಯಲಾಗುತ್ತದೆ. ಕ್ಯಾಮೆರಾವನ್ನು ಬೇಕಾದ ರೀತಿಯಲ್ಲಿ ಜೂಮ್‌ ಮಾಡುವ ಅವಕಾಶವಿರುವುದರಿಂದ ಸವಾರರು ಸಿಕ್ಕಿ ಬೀಳಲಿದ್ದಾರೆ.

ಸುಲಭ ಮಾರ್ಗ: ಬೆಳಗ್ಗೆ 8ರಿಂದ ರಾತ್ರಿ 8 ರ ತನಕ ಇಬ್ಬರು ಸಿಬ್ಬಂದಿ ಬಿಗ್‌ ಸ್ಕ್ರಿನ್‌ನಲ್ಲಿ 20 ಪ್ರದೇಶಗಳನ್ನು ವೀಕ್ಷಿಸುತ್ತಿದ್ದು, ನಿಯಮ ಉಲ್ಲಂಘಿಸುತ್ತಿದ್ದಂತೆ ಪ್ರಿಂಟ್‌ ಟಿಂಟ್‌ ಜೂಮ್‌ (ಪಿಟಿಝಡ್‌)ತಂತ್ರಜ್ಞಾನ ಬಳಸಿ ಸ್ಕ್ರಿನ್‌ ಶಾಟ್‌ ತೆಗೆದು ಫೋಟೋ ತೆಗೆದಿಡಲಾಗುತ್ತದೆ. ಈ ಹಿಂದೆ 2018ರಲ್ಲಿ 7.50 ಲಕ್ಷ ರೂ. ವ್ಯಯಿಸಿ ವೈರ್‌ಲೆಸ್‌ ಸಿಸಿ ಕ್ಯಾಮೆರಾ ಹಾಕಿದ್ದರೂ ತಾಂತ್ರಿಕ ತೊಂದರೆಯಿಂದ ಹಾಳಾಗಿದ್ದವು. ಇದೀಗ ಹೊಸ ತಂತ್ರಜ್ಞಾನ ಬಳಸಿಕೊಂಡು ಕೇಬಲ್‌ ಸಂಪರ್ಕದಿಂದ ಸಿಪಿಐ ಕಚೇರಿಯಲ್ಲೇ ಕುಳಿತು ನೋಡಲು ವ್ಯವಸ್ಥೆ ಮಾಡಲಾಗಿದೆ. ಕೇಬಲ್‌ ಸಂಪರ್ಕ ಕಡಿತವಾದರೂ ತಕ್ಷಣವೇ ಗುರುತಿಸಿ ಸರಿಪಡಿಸಲಿಕ್ಕೆ ಅವಕಾಶವಿದೆ. ಯಾರು ನೋಡಿಲ್ಲವೆಂದು ಓಡಿ ಹೋದರೂ ಅವರನ್ನು ಬೆನ್ನತ್ತಿ ನೋಟಿಸ್‌ ಬರುವುದರಿಂದ ವಾಹನಸವಾರರು ಸಂಚಾರಿ ನಿಯಮ ಉಲ್ಲಂಘಿ ಸುವ ಮುನ್ನ ಎಚ್ಚರಿಕೆ ವಹಿಸಬೇಕಿದೆ.

ಅನುಮಾನಾಸ್ಪದ ವ್ಯಕ್ತಿಗಳು, ವಾಹನ, ಹಿಟ್‌ ಆ್ಯಂಡ್‌ ರನ್‌, ಸಂಚಾರಿ ನಿಯಮ ಉಲ್ಲಂಘನೆ ಮೇಲೆ ನಿಗಾ ಇಡಲು ಕ್ಯಾಮೆರಾ ಅಳವಡಿಸಿದ್ದು, ಇನ್ನು 4 ಕಡೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಜಿ.ಚಂದ್ರಶೇಖರ್‌, ಸಿಪಿಐ, ಸಿಂಧನೂರು ವೃತ

 

ಯಮನಪ್ಪ ಪವಾರ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.