ಪಶ್ಚಿಮಬಂಗಾಳದ ಸಿಲಿಗುರಿಯಲ್ಲಿ ಘರ್ಷಣೆ; ಬಿಜೆಪಿ ಕಾರ್ಯಕರ್ತ ಸಾವು, 12 ಗಂಟೆ ಬಂದ್ ಗೆ ಕರೆ
ಉತ್ತರ ಬಂಗಾಳದ ಸಿಲಿಗುರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು.
Team Udayavani, Dec 7, 2020, 6:42 PM IST
ಕೋಲ್ಕತಾ: ಪ್ರತಿಭಟನಾ ನಿರತ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಮೇಲೆ ಪಶ್ಚಿಮಬಂಗಾಳದ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆಯಲ್ಲಿ ಪಕ್ಷದ ಕಾರ್ಯಕರ್ತ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಿಲಿಗುರಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಪೊಲೀಸರ ಲಾಠಿಚಾರ್ಜ್ ನಿಂದ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಯನ್ನು ಖಂಡಿಸಿ ರಾಜ್ಯ ಬಿಜೆಪಿ ಉತ್ತರ ಪಶ್ಚಿಮಬಂಗಾಳದಲ್ಲಿ 12ಗಂಟೆ ಬಂದ್ ಗೆ ಕರೆ ನೀಡಿತ್ತು ಎಂದು ವರದಿ ತಿಳಿಸಿದೆ. ಲಾಠಿಚಾರ್ಜ್ ನಲ್ಲಿ ಬಿಜೆಪಿಯ 40 ಕಾರ್ಯಕರ್ತರು ಗಾಯಗೊಂಡಿರುವುದಾಗಿ ತಿಳಿಸಿದೆ.
ಉತ್ತರ ಬಂಗಾಳದ ಸಿಲಿಗುರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಆಡಳಿತಾರೂಢ ಟಿಎಂಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಉತ್ತರ್ ಕನ್ಯಾ ಸೆಕ್ರಟರಿಯೇಟ್ ನತ್ತ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:ಹೊಂಡ, ಗುಂಡಿ ರಸ್ತೆಯಿಂದ ಮಾನಸಿಕ, ದೈಹಿಕ ಕಿರುಕುಳ ಆಗ್ತಿದೆ: ಪೊಲೀಸರಿಗೆ ಮಹಿಳೆ ದೂರು!
ಘಟನೆಯಲ್ಲಿ ಉಲೇನ್ ರಾಯ್ ಎಂಬಾತ ಸಾವನ್ನಪ್ಪಿರುವುದಾಗಿ ಪಶ್ಚಿಮಬಂಗಾಳ ಬಿಜೆಪಿ ಆರೋಪಿಸಿದೆ. ಆತನ ಸಾವಿಗೆ ಏನು ಕಾರಣ ಎಂಬುದು ಮರಣೋತ್ತರ ಪರೀಕ್ಷೆ ನಂತರ ತಿಳಿಯಲಿದೆ ಎಂದು ಪಶ್ಚಿಮಬಂಗಾಳ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ