ಎಬಿವಿಪಿಯಿಂದ ಆರೋಗ್ಯ ತಪಾಸಣೆ-ಚಿಕಿತ್ಸಾ ಶಿಬಿರ


Team Udayavani, Dec 7, 2020, 7:25 PM IST

ಎಬಿವಿಪಿಯಿಂದ ಆರೋಗ್ಯ ತಪಾಸಣೆ-ಚಿಕಿತ್ಸಾ ಶಿಬಿರ

ಚಿತ್ರದುರ್ಗ: ಮನುಷ್ಯನ ಬದುಕು ಸಾಮರಸ್ಯದಿಂದ ಕೂಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಪ್ರಮುಖ್‌ ಈ. ಗಂಗಾಧರ ಹೇಳಿದರು.

ಡಾ| ಬಿ.ಆರ್‌. ಅಂಬೇಡ್ಕರ್‌ ಪರಿನಿರ್ವಾಣ ದಿನದ ಅಂಗವಾಗಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ನಗರದ ತಮಟಗಲ್‌ ರಸ್ತೆಯಲ್ಲಿ ನೆಲೆಸಿರುವ ನಿರಾಶ್ರಿತರು ಹಾಗೂ ಅಲೆಮಾರಿ ಜನಾಂಗದ ಪ್ರದೇಶದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ| ಬಿ.ಆರ್‌. ಅಂಬೇಡ್ಕರ್‌ ನಮ್ಮ ದೇಶಕ್ಕೆ ಸಂವಿಧಾನ ನೀಡಿದ್ದಾರೆ. ಆ ಮೂಲಕ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇಂಥವರ ಪರಿನಿರ್ವಾಣ ದಿನದಂದು ಬಡ ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವುದು ಉತ್ತಮ ಬೆಳೆವಣಿಗೆ. ಸಾರ್ವಜನಿಕರು ಇದರ ಪ್ರಯೋಜನಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಎಬಿವಿಪಿ ನಗರಾಧ್ಯಕ್ಷ ಅನಿಲ್‌ಕುಮಾರ್‌ಮಾತನಾಡಿ, ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಕಳೆದ ಹಲವು ದಿನಗಳಿಂದ ಅನೇಕ ಶಿಬಿರಗಳನ್ನು ನಡೆಸಿಕೊಂಡು ಬರಲಾಗಿದೆ. ಆದರೆ ಅಂಬೇಡ್ಕರ್‌ ಅವರ ನಿರ್ವಾಣದ ದಿನವಾದ ಇಂದು ನಡೆಯುತ್ತಿರುವ ಶಿಬಿರ ವಿಶೇಷವಾಗಿದೆ. ನಮ್ಮ ದೇಶದಲ್ಲಿಅನೇಕ ಬಡವರು ಉತ್ತಮ ವೈದ್ಯಕೀಯ ಸೇವೆ ದೊರೆಯದೆ ವಂಚಿತರಾಗಿದ್ದಾರೆ. ಅಂತಹ ಜನರನ್ನು ಗುರುತಿಸಿ ಇಂದು ಉಚಿತವಾಗಿ ಆರೋಗ್ಯ ಸೇವೆ ನೀಡುತ್ತಿರುವುದು ಪುಣ್ಯದ ಕೆಲಸ. ಹಾಗಾಗಿ ಬಡವರಿಗೆ ಉತ್ತಮ ವೈದ್ಯಕೀಯ ಸೇವೆ ನೀಡುವ ಮೂಲಕ ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡಲಾಗುತ್ತದೆ. ನಮ್ಮ ಈ ಕೆಲಸಗಳಿಗೆ ಅಂಬೇಡ್ಕರ್‌ ಸ್ಫೂರ್ತಿಯಾಗಿದ್ದಾರೆ ಎಂದರು.

ಎಬಿವಿಪಿ ನಗರ ಉಪಾಧ್ಯಕ್ಷ ವಿಕಾಸ್‌, ಜಿಲ್ಲಾ ಸಂಚಾಲಕ ಸುರೇಶ್‌, ನಗರ ಸಂಘಟನಾ ಕಾರ್ಯದರ್ಶಿ ಮಂಜುನಾಥ್‌, ನಗರ ಕಾರ್ಯದರ್ಶಿ ಅವಿನಾಶ್‌, ಅಜಯ್‌, ಮನೋಜ್‌, ದೀಪಕ್‌, ಜಯಂತ್‌, ವಿದ್ಯಾರ್ಥಿನಿಪ್ರಮುಖ್‌ ಕೃತಿಕಾ, ಛಾಯಾ, ವಂದಿತಾ, ಚಂದ್ರಶೇಖರ್‌, ಪ್ರಮೋದ್‌ ಮತ್ತಿತರರು ಉಪಸ್ಥಿತರಿದ್ದರು. ಜಿಜ್ಞಾಸ ಘಟಕದ ಜಿಲ್ಲಾ ಸಂಚಾಲಕ ರುಚಿತ್‌ ನೇತೃತ್ವದ ತಂಡ ಆರೋಗ್ಯ ಶಿಬಿರ ನಡೆಸಿಕೊಟ್ಟಿತು. ಸುಮಾರು 300ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಅಗತ್ಯ ಇರುವವರಿಗೆ ಉಚಿತ ಚಿಕಿತ್ಸೆ ನೀಡಿ ಔಷಧ ವಿತರಿಸಲಾಯಿತು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.