ಪಂಜಾಬ್ ನಲ್ಲಿ ಮತ್ತೆ ಉಗ್ರ ಚಟುವಟಿಕೆಗೆ ಸಂಚು: ಐಎಸ್ ಐಗೆ ಭಿಂದ್ರನ್ ವಾಲೆ ಸೋದರಳಿಯನ ಸಾಥ್!

ಖಾಲಿಸ್ತಾನ್ ಪರವಾಗಿರುವ ಹಲವಾರು ಮುಖಂಡರ ಸಂಘಟನೆಗಳು ಪಾಕಿಸ್ತಾನ ಮತ್ತು ವಿದೇಶಗಳಲ್ಲಿ ಸಕ್ರಿಯ

Team Udayavani, Dec 8, 2020, 4:59 PM IST

ಪಂಜಾಬ್ ನಲ್ಲಿ ಮತ್ತೆ ಉಗ್ರ ಚಟುವಟಿಕೆಗೆ ಸಂಚು: ಐಎಸ್ ಐಗೆ ಭಿಂದ್ರನ್ ವಾಲೆ ಸೋದರಳಿಯನ ಸಾಥ್

ನವದೆಹಲಿ:ಪಂಜಾಬ್ ನಲ್ಲಿ ಮತ್ತೆ ಖಾಲಿಸ್ತಾನ್ ಚಳವಳಿಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ನಟೋರಿಯಸ್ ಗುಪ್ತಚರ ಇಲಾಖೆ ಐಎಸ್ ಐ(ಇಂಟರ್ ಸರ್ವಿಸ್ ಇಂಟೆಲಿಜೆನ್ಸ್) ಖಲಿಸ್ತಾನ ಭಯೋತ್ಪಾದಕ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ ಸೋದರಳಿಯ ಲಖ್ಬೀರ್ ಸಿಂಗ್ ನನ್ನು ದಾಳವಾಗಿ ಉಪಯೋಗಿಸಿಕೊಳ್ಳುತ್ತಿದೆ ಎಂಬ ಮಹತ್ತರ ಮಾಹಿತಿಯನ್ನು ಭಾರತೀಯ ಗುಪ್ತಚರ ಏಜೆನ್ಸಿ ಕಲೆ ಹಾಕಿದೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಲಖ್ಬೀರ್ ಸಿಂಗ್ ರೋಡೆ ಹತ್ಯಗೀಡಾದ ಖಾಲಿಸ್ತಾನ್ ಉಗ್ರ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ ಸೋದರಳಿಯ ಮತ್ತು ಅಕಲ್ ತಖ್ತ್ ಜಾತೇದಾರ್ ಮಾಜಿ ಮುಖಂಡ ಜಸ್ಬೀರ್ ಸಿಂಗ್ ರೋಡೆಯ ಸಹೋದರ ಎಂದು ವರದಿ ತಿಳಿಸಿದೆ.

ಖಾಲಿಸ್ತಾನ್ ಪರವಾಗಿರುವ ಹಲವಾರು ಮುಖಂಡರ ಸಂಘಟನೆಗಳು ಪಾಕಿಸ್ತಾನ ಮತ್ತು ವಿದೇಶಗಳಲ್ಲಿ ಸಕ್ರಿಯವಾಗಿವೆ. ಆದರೆ ಖಾಲಿಸ್ತಾನ್ ಸಂಘಟನೆ ಹಾಗೂ ಮುಖಂಡರ ಚಟುವಟಿಕೆ ಮೇಎ ಭಾರತೀಯ ಭದ್ರತಾ ಏಜೆನ್ಸಿ ಸೂಕ್ಷ್ಮವಾಗಿ ಮಾಹಿತಿಯನ್ನು ಕಲೆಹಾಕಿವೆ.

ಖಾಲಿಸ್ತಾನ್ ಪರ ಸಂಘಟನೆಯನ್ನು ಪಾಕಿಸ್ತಾನ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಭಾರತ ಈ ಮೊದಲು ಎಚ್ಚರಿಸಿದ್ದು, ಪಾಕ್ ಈ ಸಂಘಟನೆ ಮೂಲಕ ಪಂಜಾಬ್ ನಲ್ಲಿ ಉಗ್ರ ಚಟುವಟಿಕೆ ಪುನರುಜ್ಜೀವನಗೊಳಿಸಲು ಸಂಚು ರೂಪಿಸಿರುವುದಾಗಿ ವಿವರಿಸಿದೆ.

ಇದನ್ನೂ ಓದಿ:ಮಹಾದೇವ ಭೈರಗೊಂಡ ಹತ್ಯಾಯತ್ನ ಪ್ರಕರಣದ ಪ್ರಮುಖ ಆರೋಪಿ ಸೆರೆ: ಬಂಧಿತರ ಸಂಖ್ಯೆ 28ಕ್ಕೆ ಏರಿಕೆ

ಭಾರತೀಯ ಗುಪ್ತಚರ ಇಲಾಖೆ ಏಜೆನ್ಸಿ ವರದಿ ಪ್ರಕಾರ, ಖಾಲಿಸ್ತಾನ್ ಪರ ಮುಖಂಡರಾದ ಗೋಪಾಲ್ ಸಿಂಗ್ ಚಾವ್ಲಾ, ಭಿಂದ್ರನ್ ವಾಲೆ ಸೋದರಳಿಯ ಲಖ್ಬೀರ್ ಸಿಂಗ್ ರೋಡೆ, ಗುರುರ್ಜಿತ್ ಸಿಂಗ್ ಚೀಮಾ ಖಾಲಿಸ್ತಾನ್ ಉಗ್ರ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದಾರೆ. ಇದರಲ್ಲಿ ಹಲವು ಸದಸ್ಯರು ಮತ್ತೆ ಖಾಲಿಸ್ತಾನ್ ಚಳವಳಿಯನ್ನು ಭಾರತದಲ್ಲಿ ಮತ್ತೆ ಪುನರುಜ್ಜೀವನಗೊಳಿಸುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ವರದಿ ತಿಳಿಸಿದೆ.

ಪಂಜಾಬ್ ನಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ನಡೆಸಲು ಸಂಚು ರೂಪಿಸಿರುವ ಪಾಕಿಸ್ತಾನದ ಐಎಸ್ ಐ, ತನ್ನ ಯೋಜನೆಯಂತೆ ಪಂಜಾಬ್ ನ ವಿವಿಧೆಡೆ ಹಿಂದೂ ಮುಖಂಡರನ್ನು ಹತ್ಯೆಗೈಯುವ ಗುರಿ ಹೊಂದಿದೆ ಎಂದು ವರದಿ ವಿವರಿಸಿದೆ. ಪಂಜಾಬ್ ನಲ್ಲಿ ಖಾಲಿಸ್ತಾನ್ ಚಳವಳಿ ಮತ್ತೆ ಆರಂಭಗೊಳ್ಳಲು ಐಎಸ್ ಐ ರೋಡೆ ಮತ್ತು ದುಬೈ ಮೂಲದ ಗ್ಯಾಂಗ್ ಸ್ಟರ್ ಸುಖ್ ಬಿಖ್ರಿವಾಲ್ ನ ನೆರವು ಪಡೆದಿದ್ದು, ಬಿಖ್ರಿವಾಲ್ ಐಎಸ್ ಐ ಮತ್ತು ಖಾಲಿಸ್ತಾನ್ ಪರ ಉಗ್ರರ ನಡುವಿನ ಮಾಹಿತಿ ಸಂಪರ್ಕದ ಮುಖ್ಯ ವ್ಯಕ್ತಿಯಾಗಿದ್ದಾನೆ ಎಂದು ವರದಿ ತಿಳಿಸಿದೆ.

ಯಾರೀತ ಭಿಂದ್ರನ್ ವಾಲೆ:

1984ರ ಜೂನ್‌ 1ರಿಂದ 8ರ ತನಕದ ಅವಧಿಯಲ್ಲಿ, ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಆದೇಶದ ಮೇರೆಗೆ, ಪಂಜಾಬಿನ ವಿಶ್ವವಿಖ್ಯಾತ ಅಮೃತಸರದ ಸ್ವರ್ಣ ಮಂದಿರದ ಮೇಲೆ ನಡೆದಿದ್ದ ಆಪರೇಶನ್‌ ಬ್ಲೂ ಸ್ಟಾರ್‌ ನಲ್ಲಿ  ಖಾಲಿಸ್ಥಾನ್‌ ಪ್ರತಿಪಾದಕ ಉಗ್ರ ನಾಯಕ ಭಿಂದ್ರನ್‌ವಾಲೆ ಹತನಾಗಿದ್ದ.

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.