ಬಾವಿಗಳ ನಿರ್ವಹಣೆ ಕೊರತೆ ಪೊದೆಗಳಿಂದ ಮುಚ್ಚಿದ ಬಾವಿಗಳು, ಎಚ್ಚರ ತಪ್ಪಿದರೆ ಆಪತ್ತು


Team Udayavani, Dec 9, 2020, 8:30 AM IST

Karkala

ಪುರಸಭೆ ವ್ಯಾಪ್ತಿಯ ಸಿಗಡಿಕೆರೆ ಬಳಿ ನಿರ್ವಹಣೆ ಇಲ್ಲದೆ ಅಪಾಯಕಾರಿ ಸ್ಥಿತಿಯಲ್ಲಿರುವ ಬಾವಿ.

ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿ ಯಲ್ಲಿರುವ ಸಾರ್ವಜನಿಕ ಬಾವಿಗಳು ನಿರ್ವಹಣೆ ಇಲ್ಲದೆ ಪೊದೆಗಳಿಂದ ಮುಚ್ಚಿಹೋಗಿದ್ದು, ನಿತ್ಯ ಸಂಚಾರಿ, ಜಾನುವಾರುಗಳಿಗೆ ಅಪಾಯಕಾರಿಯಾಗಿವೆ.

ಕಾರ್ಕಳ ಪುರಸಭೆಗೆ ಸಂಬಂಧಿಸಿದಂತೆ 12 ಬಾವಿ ಗಳಿವೆ. ಇವುಗಳ ನೀರು ಬಳಕೆಯಾಗುತ್ತಿದೆ. ಆದರೆ ಸುತ್ತಮುತ್ತ ಬೆಳೆದ ಪೊದೆಗಳನ್ನು ತೆಗೆದಿಲ್ಲ. 7-8 ಕಡೆಯ ಬಾವಿಗಳು ತೀವ್ರ ನಿರ್ವಹಣೆ ಕೊರತೆ ಎದುರಿಸುತ್ತಿವೆ. ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್‌ಗಳಿವೆ. ವಾರ್ಡ್‌ಗಳಿಗೆ ಪುರಸಭೆ ಸಾರ್ವಜನಿಕ ಬಾವಿಗಳಿಂದ ನೀರು ಹರಿಸುತ್ತಿದೆ.

ಮಾರುಕಟ್ಟೆ ರಸ್ತೆ, ಬಿಚ್ಚಂಗಿ ನಗರ, ಸಾಯಿರಾಂ ಮಂದಿರ ರಸ್ತೆ, ಫಿಶರೀಸ್‌ ರಸ್ತೆ ಕಾಲನಿ, ಜೋಗುಲ್‌ ಬೆಟ್ಟ ಬಳಿ, ಆನೆಕೆರೆ, ಹಿರಿಯಂಗಡಿ ಹೈವೇ ಸಹಿತ ಇನ್ನೂ ಅನೇಕ ಕಡೆಗಳಲ್ಲಿ ಸಾರ್ವಜನಿಕ ಬಾವಿಗಳಿದ್ದು ಸುರಕ್ಷತೆಯ ವಿಚಾರದಲ್ಲಿ ಹಿಂದುಳಿದಿವೆ. ಪುರಸಭೆ ವ್ಯಾಪ್ತಿಯ ಸಿಗಡಿಕೆರೆ ಬಾವಿಯಂತೂ ತೀರ ಅಪಾಯಕಾರಿ ಸ್ಥಿತಿಯಲ್ಲಿದೆ. ಬಾವಿ ಪಕ್ಕವೇ ಜನರು ನಡೆದಾಡು ತ್ತಾರೆ. ತುಸು ಎಚ್ಚರ ತಪ್ಪಿದರೆ ಬೀಳುವ ಅಪಾಯವಿದೆ.

ಬಾವಿ ನೀರು ಬಳಸುವವರೇ ಹೆಚ್ಚು
ಪುರಸಭೆಯ ಈ ಬಾವಿಗಳು ಸರ್ವ ಋತುವಿನಲ್ಲಿ ನೀರು ಒದಗಿಸಿ ಜನರ ದಾಹ ತೀರಿಸುತ್ತಿವೆ. ಬಾವಿಗಳ ಜಾಗಕ್ಕೆ ಈಗ ಕೊಳವೆ ಬಾವಿಗಳು ಬಂದಿದ್ದರೂ ಇಂದಿಗೂ ಬಾವಿ ನೀರು ಬಳಸುವವರೂ ಹೆಚ್ಚಿದ್ದಾರೆ.

ನೀರ ಸೆಲೆಯಿದ್ದರೂ ನಿರ್ವಹಣೆಯಿಲ್ಲ
ಕೆಲವು ಸಾರ್ವಜನಿಕ ಬಾವಿಗಳಲ್ಲಿ ನೀರ ಸೆಲೆ ಇದ್ದರೂ ಪಾಳುಬಿದ್ದಂತಿವೆ. ಕೆಲವು ಬಾವಿಗಳಲ್ಲಿ ಕಸ ತುಂಬಿವೆ. ಪೊದೆಗಳಿವೆ. ಇವುಗಳ ನಿರ್ವಹಣೆ ಮಾಡಿದಲ್ಲಿ ಕಡು ಬೇಸಗೆಯ ನೀರಿನ ತಾಪತ್ರಯಗಳ ಭಾರ ದೂರವಾಗುತ್ತವೆ. ನೀರಿನ ಸಮಸ್ಯೆಗೂ ಪರಿಹಾರ ಸಿಗಲಿದೆ. ಎಲ್ಲ ಬಾವಿಗಳು ಶುದ್ದಗೊಂಡರೆ ನೀರಿನ ಕೊರತೆ ನೀಗಲಿದೆ.

ಬಾವಿಗಳ ಶೀಘ್ರ ದುರಸ್ತಿ
ಸಾರ್ವಜನಿಕ ಬಾವಿಗಳನ್ನು ಕಳೆದ ಬೇಸಗೆಯಲ್ಲಿ ದುರಸ್ತಿಪಡಿಸಲಾಗಿತ್ತು. ಈ ಬಾರಿ ಇವುಗಳ ದುರಸ್ತಿ ಇನ್ನು ನಡೆಯಬೇಕಿದೆ. ಶೀಘ್ರ ಇದಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಪಾಯಕಾರಿ ಬಾವಿಗಳ ಬಗ್ಗೆಯೂ ಗಮನಹರಿಸುತ್ತೇವೆ.
-ರೇಖಾ ಜೆ. ಶೆಟ್ಟಿ , ಮುಖ್ಯಾಧಿಕಾರಿ, ಪುರಸಭೆ, ಕಾರ್ಕಳ

ಟಾಪ್ ನ್ಯೂಸ್

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.