“ಹರಿ ನೀರಾವರಿ’ಗೆ ಬೆಂಗಳೂರಲ್ಲಿ ತುರ್ತು ಸಭೆ

ಸಾಧಕ-ಬಾಧಕ ಚರ್ಚೆಗೆ ತಜ್ಞರ ಜತೆ ಸಮಾಲೋಚನೆ ,ಎರಡು ದಿನದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ

Team Udayavani, Dec 9, 2020, 1:31 PM IST

“ಹರಿ ನೀರಾವರಿ’ಗೆ ಬೆಂಗಳೂರಲ್ಲಿ ತುರ್ತು ಸಭೆ

ಮಸ್ಕಿ: ಮತಕ್ಷೇತ್ರದಲ್ಲಿ ಹನಿ ನೀರಾವರಿಗಿಂತ ಹರಿ ನೀರಾವರಿ ಬೇಡಿಕೆ ಹೆಚ್ಚು ಮುನ್ನೆಲೆಗೆ ಬಂದಿದ್ದು, ಇದಕ್ಕಾಗಿ ಚುನಾವಣೆ ಬಹಿಷ್ಕಾರದಘೋಷಣೆಯೂ ಮೊಳಗಿವೆ. ಹೀಗಾಗಿತಡವಾಗಿಯಾದರೂ ಎಚ್ಚೆತ್ತ ಸರ್ಕಾರ ತರ್ತು ಸಭೆ ಆಯೋಜನೆ ಮಾಡಿದೆ. ತಜ್ಞರ ಜತೆಸಮಾಲೋಚನೆಯೊಂದಿಗೆ ಸಮಸ್ಯೆ ಇತ್ಯರ್ಥಕ್ಕೆ ಶತ ಪ್ರಯತ್ನ ನಡೆಸಿದೆ.

ನಾರಾಯಣಪುರ ಬಲದಂಡೆ ಕಾಲುವೆಯ ಶಾಖಾ ಕಾಲುವೆ 5ಎ ಅನುಷ್ಠಾನಕ್ಕೆಒತ್ತಾಯಿಸಿ ಕಳೆದ 18 ದಿನಗಳಿಂದ ರೈತರಹೋರಾಟ ಚುರುಕಾಗಿದೆ. ದಿನಗಳುಉರುಳಿದಂತೆ ಚಳವಳಿಯ ಕಾವು ತೀವ್ರ ಸ್ವರೂಪ ಪಡೆಯುತ್ತಿದೆ. ಈ ಯೋಜನೆ ಲಾಭ ಪಡೆಯುವ 30ಕ್ಕೂ ಹೆಚ್ಚು ಹಳ್ಳಿಗರುಈಗಾಗಲೇ ಗ್ರಾಪಂ ಚುನಾವಣೆ ಬಹಿಷ್ಕಾರಕ್ಕೂನಿರ್ಧಾರ ಕೈಗೊಂಡಿದ್ದಾರೆ. ಇದಕ್ಕಾಗಿ ರಾಯಚೂರು-ಕೊಪ್ಪಳ ಹಾಗೂ ಮಸ್ಕಿಯ ಹಾಲಿ-ಮಾಜಿ ಚುನಾಯಿತ ಪ್ರತಿನಿಧಿ  ಗಳು ಬೆಂಗಳೂರಿಗೆ ನಿಯೋಗ ತೆರಳಿದ್ದಾರೆ. ಕಳೆದೆರಡು ದಿನಗಳಿಂದ ರಾಜಧಾನಿಯಲ್ಲಿ ಠಿಕಾಣಿ ಹೂಡಿ ಇಲ್ಲಿನ ರೈತರ ಬೇಡಿಕೆಯನ್ನು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದಾರೆ.

ಮನವೊಲಿಕೆ ಕಸರತ್ತು: ಡಿಸಿ ಎಂ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ,ರಾಯಚೂರು, ಕೊಪ್ಪಳ ಸಂಸದರು, ರಾಯಚೂರು ಹಾಲಿ ಶಾಸಕ ತಿಪ್ಪರಾಜ ಹವಾಲ್ದಾರ್‌, ಸುರುಪುರ ಶಾಸಕ ರಾಜುಗೌಡ,ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಬೆಂಗಳೂರಲ್ಲಿ ಬಿಡಾರ ಹೂಡಿದ್ದಾರೆ. ನೀರಾವರಿ ಮಂತ್ರಿ ರಮೇಶ ಜಾರಕಿಹೊಳಿ ಅವರನ್ನು ಕಳೆದೆರಡು ದಿನಗಳಲ್ಲಿ ಪ್ರತ್ಯೇಕವಾಗಿ ಎರಡ್ಮೂರು ಬಾರಿ ಭೇಟಿ ಮಾಡಿ ಇಲ್ಲಿನ ಪರಿಸ್ಥಿತಿ ವಿವರಿಸಿದ್ದಾರೆ. ರೈತರ ನೀರಾವರಿ ಬೇಡಿಕೆ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವು ಪ್ರಕಟಿಸಲೇಬೇಕಾಗಿದೆ. ಇಲ್ಲವಾದರೆ ಕೇವಲಗ್ರಾಪಂ ಚುನಾವಣೆಗೆ ಮಾತ್ರವಲ್ಲ; ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೂ ಪೆಟ್ಟು ಬೀಳಲಿದೆ ಎನ್ನುವ ಸಂದೇಶ ಸಾರಿದ್ದಾರೆ.

ತುರ್ತು ಸಭೆ: ರಾಯಚೂರು-ಕೊಪ್ಪಳದ ಹಾಲಿ-ಮಾಜಿ ಚುನಾಯಿತರ ನಿಯೋಗದ ಜತೆ ಚರ್ಚೆ ನಡೆಸಿದ ನೀರಾವರಿ ಸಚಿವ ರಮೇಶ ಜಾರಕಿಹೊಳಿ ಡಿ.9ರಂದುಬೆಂಗಳೂರಿನ ವಿಧಾನ ಸೌಧದಲ್ಲಿ ತುರ್ತು ಸಭೆ ಆಯೋಜನೆ ಮಾಡಿದ್ದಾರೆ. ಕೃಷ್ಣಾ ಭಾಗ್ಯ ಜಲ ನಿಗಮದ ನುರಿತ ಎಂಜಿನಿಯರ್‌ಗಳು, ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. 5ಎ ಕಾಲವೆ ಅನುಷ್ಠಾನದ ಸಾಧಕ-ಬಾಧಕಗಳು, ನೀರಿನ ಲಭ್ಯತೆ, ತಾಂತ್ರಿಕ ಅಡಚಣೆ, ಆರ್ಥಿಕ ಪರಿಸ್ಥಿತಿ ಸೇರಿ ಎಲ್ಲವೂ ಈ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ. ಒಂದು ವೇಳೆ 5ಎ ಕಾಲುವೆ ಅನುಷ್ಠಾನಕ್ಕೆ ಸದ್ಯತೊಡಕು ಉಂಟಾದರೆ ಪರ್ಯಾಯ ಕ್ಷೇತ್ರಕ್ಕೆ ಕಲ್ಪಿಸಬೇಕಾದ ನೀರಾವರಿ ವ್ಯವಸ್ಥೆಗೆ ಇರುವ ಮಾರ್ಗಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಎರಡು ದಿನದಲ್ಲಿ ನಿರ್ಧಾರ:

ಚುನಾವಣೆ ಬಹಿಷ್ಕಾರದ ಅಸ್ತ್ರ ಕೇವಲ ಇಲ್ಲಿನ ಚುನಾಯಿತರು, ಜಿಲ್ಲಾಡಳಿತಕ್ಕೆ ಮಾತ್ರವಲ್ಲದೇ ಸರ್ಕಾರಕ್ಕೂ ಸವಾಲಾಗಿದೆ. 5ಎ ಕಾಲುವೆ ಇಲ್ಲವೇ ಪರ್ಯಾಯ ಮಾರ್ಗದ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ಪ್ರಯತ್ನ ನಡೆದಿದೆ. ಈ ಭಾಗದಲ್ಲಿ ಡಿ.11ರಿಂದ ಗ್ರಾಪಂ ಚುನಾವಣೆಗೆನಾಮಪತ್ರ ಸಲ್ಲಿಕೆ ಆರಂಭವಾಗುವುದರಿಂದ ಎರಡು ದಿನದಲ್ಲೇ ಈ ನಿರ್ಧಾರ ಬೀಳುವ ಸಾಧ್ಯತೆ ಇದೆ.

1200 ಕೋಟಿ ಹಸ್ತಾಂತರಕ್ಕೆ‌ ಮನವಿ :

ಮಸ್ಕಿ ಹಾಗೂ ಲಿಂಗಸುಗೂರು ಕ್ಷೇತ್ರಕ್ಕೆ ಈಗಾಗಲೇ ನಂದವಾಡಗಿ ಏತ ನೀರಾವರಿ ಮೂಲಕ ಸೂಕ್ಷ್ಮ ಹನಿ (ಡ್ರಿಪ್‌ ಇರಿಗೇಶನ್‌) ನೀರಾವರಿಗೆ ಪ್ರತ್ಯೇಕ 3 ಸಾವಿರ ಕೋಟಿ ರೂ. ನೀಡಿದೆ. 1800ಕೋಟಿ ರೂ. ಮೊತ್ತದ ಕಾಮಗಾರಿಗೆಈಗಾಗಲೇ ಚಾಲನೆ ನೀಡಲಾಗಿದೆ (ಬಹುಭಾಗ ಲಿಂಗಸುಗೂರು, ಭಾಗಶಃ ಮಸ್ಕಿ). ಆದರೆ ಎರಡನೇ ಹಂತ 1200 ಕೋಟಿ ರೂ. ಮೊತ್ತದ ಕಾಮಗಾರಿಗೆ ಟೆಂಡರ್‌ಪ್ರಕ್ರಿಯೆ ನಡೆಯಬೇಕಿದೆ. ಈ ಯೋಜನೆಯಲ್ಲಿ ಮಸ್ಕಿಯ ಬಹುಭಾಗಹಳ್ಳಿಗಳು ನೀರಾವರಿಗೆ ಒಳಪಡಲಿವೆ. ಆದರೆ ಇಲ್ಲಿನ ರೈತರು ಹನಿ ನೀರಾವರಿ ವ್ಯವಸ್ಥೆಯನ್ನೇ ವಿರೋಧಿ ಸುತ್ತಿದ್ದಾರೆ.ಹನಿ ನೀರಾವರಿ ಬದಲು ಹರಿ ನೀರಾವರಿ(ಕಾಲುವೆ ಮೂಲಕ) ವ್ಯವಸ್ಥೆ ಕಲ್ಪಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇಲ್ಲಿನ ರೈತರ ಬೇಡಿಕೆಯನ್ನು ಮನವಿಸರ್ಕಾರದ ಮುಂದಿಟ್ಟಿದ್ದೇವೆ. ಕಳೆದ ಒಂದು ವಾರದಿಂದ ಇದೇ ಪ್ರಯತ್ನದಲ್ಲಿದ್ದೇವೆ. ರೈತರ ನೀರಾವರಿ ಬೇಡಿಕೆ ಈಡೇರಿಸಲು ಸರ್ಕಾರವೂಬದ್ಧವಾಗಿದೆ. ಎರಡು ದಿನದಲ್ಲಿ ನಿರ್ಧಾರ ಪ್ರಕಟವಾಗಲಿದೆ. –ಪ್ರತಾಪಗೌಡ ಪಾಟೀಲ್‌, ಮಾಜಿ ಶಾಸಕ, ಮಸ್ಕಿ

 

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.