ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ: ಡಿಡಿಪಿಐ


Team Udayavani, Dec 10, 2020, 3:34 AM IST

ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ: ಡಿಡಿಪಿಐ

ಸಾಂದರ್ಭಿಕ ಚಿತ್ರ

ಉಡುಪಿ: ಖಾಸಗಿ ಶಾಲೆಯಿಂದ ಸರಕಾರಿ ಶಾಲೆಗೆ ದಾಖಲಾಗುವವರಿಗೆ ಟಿಸಿ ಕೊಡದೆ ಸತಾಯಿಸುವಂತಿಲ್ಲ ಹಾಗೂ ಒತ್ತಾಯ ಪೂರ್ವಕವಾಗಿ ಶುಲ್ಕ ವಸೂಲು ಮಾಡುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರಕಾರಕ್ಕೆ ಬರೆಯಲಾಗುವುದು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್‌.ಎಚ್‌.ನಾಗೂರ ತಿಳಿಸಿದರು.

ಬುಧವಾರ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ವರ್ಷ ಒಟ್ಟು 1,832 ಮಕ್ಕಳು ಖಾಸಗಿ ಶಾಲೆಯಿಂದ ಸರಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ. ಕಾರ್ಕಳ, ಬ್ರಹ್ಮಾವರ ವಲಯ ವ್ಯಾಪ್ತಿಯಲ್ಲಿ ಇಂತಹ ಮಕ್ಕಳ ಸಂಖ್ಯೆ ಹೆಚ್ಚಿದೆ. ಕೇವಲ ಒಂದನೆ ತರಗತಿ ಮಾತ್ರವಲ್ಲ, ಇತರ ತರಗತಿಗಳಿಗೂ ಮಕ್ಕಳು ಸೇರ್ಪಡೆಯಾಗಿದ್ದಾರೆ. ಇದಕ್ಕೆ ದುಬಾರಿ ಶುಲ್ಕ ಮತ್ತು ಕೊರೊನಾದಿಂದ ಉಂಟಾಗಿರುವ ಆರ್ಥಿಕ ಸಮಸ್ಯೆಯೇ ಮುಖ್ಯ ಕಾರಣ ಎಂದರು.

ಶಿಕ್ಷಕರ ವಿಶೇಷ ಸಭೆ
ವಿದ್ಯಾಗಮ ಕಾರ್ಯಕ್ರಮದಲ್ಲಿ ಎಲ್ಲ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಕರು ನಿರಂತರ ಮಾರ್ಗದರ್ಶನ ನೀಡುತ್ತಿದ್ದಾರೆ. ಶೇ.60ಕ್ಕಿಂತ ಕಡಿಮೆ ಫ‌ಲಿತಾಂಶ ಪಡೆದಿರುವ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯನ್ನು ಪ್ರತ್ಯೇಕವಾಗಿ ಕರೆದು ಅವರಿಗೆ ಅಗತ್ಯ ಮಾರ್ಗದರ್ಶನ ಮಾಡಲು ಯೋಜನೆ ರೂಪಿಸಲಾಗಿದೆ. ಜನವರಿ ತಿಂಗಳಿನಿಂದ ಪ್ರತಿ ವಾರವೂ ಎಸೆಸೆಲ್ಸಿಯ ಒಂದು ವಿಷಯಕ್ಕೆ ಸಂಬಂಧಿಸಿ ಮಕ್ಕಳಿಗೆ ಫೋನ್‌ ಇನ್‌ ಕಾರ್ಯಕ್ರಮ ನಡೆಸ ಲಾಗುತ್ತದೆ. ಪಾಲಕರ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಕೂಡ ಹಾಕಿಕೊಳ್ಳಲಾಗುವುದು ಎಂದರು.

ಜನವರಿಯಿಂದ ಶಿಬಿರ
ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಹ ಶಿಕ್ಷಕರಿಗೆ ಶಿಕ್ಷಣ ಸಂಯೋಜಕರ ವಲಯದಡಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬೋಧನಾ ಪ್ರಾವೀಣ್ಯತೆ ಮತ್ತು ಮನೋಬಲ ಬದಲಾವಣೆಗೆ ಜನವರಿ ಯಿಂದ ವಾರಕ್ಕೆ ಒಂದು ಶನಿವಾರ, ರವಿವಾರ ಶಿಬಿರಗಳನ್ನು ಆರಂಭಿಸಲಾಗು ವುದು ಎಂದು ಅವರು ತಿಳಿಸಿದರು.

ಶೈಕ್ಷಣಿಕ ಚಿಂತನ ಮಂಥನ ಸಭೆ
ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಒಂದು ದಿನದ ಶೈಕ್ಷಣಿಕ ಚಿಂತನ ಮಂಥನ ಸಭೆ ನಡೆಸಿ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ತಿಳಿಸಲಾಗಿದೆ. ತಾಲೂಕುಗಳ ಸಿಆರ್‌ಪಿ ಅವರಿಂದ ಡಿಡಿಪಿಐವರೆಗೆ ಸಭೆ ನಡೆಸಿ ಶೈಕ್ಷಣಿಕ ಕಾರ್ಯಕ್ರಮಗಳ ಅನುಷ್ಠಾನ, ಮೇಲ್ವಿಚಾರಣೆಯ ಮಾರ್ಗದರ್ಶನ ನೀಡುವ ಕ್ರಮಗಳ ಕುರಿತು ತಿಳಿಸಲಾಗಿದೆ ಎಂದರು.

ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಬ್ರಹ್ಮಾವರ ಶಿಕ್ಷಣ ಸಂಯೋಜಕ ಪ್ರಕಾಶ್‌ ಬಿ.ಬಿ., ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್‌.ಪ್ರಕಾಶ್‌, ಮುದ್ರಾಡಿ ನೆಲ್ಲಿಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ರವೀಂದ್ರ ಹೆಗ್ಡೆ ಉಪಸ್ಥಿತರಿದ್ದರು.

11,000 ಎಸೆಸೆಲ್ಸಿ ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 11,000 ಎಸೆಸೆಲ್ಸಿ ವಿದ್ಯಾರ್ಥಿಗಳಿದ್ದಾರೆ. ಅವರ ಪರೀಕ್ಷೆ ಹಾಗೂ ಫ‌ಲಿತಾಂಶದ ಬಲವರ್ಧನೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಲಿಕಾ ನಿರಂತರತೆ ಕಾಪಾಡಿಕೊಳ್ಳಲು ಶಾಲೆ ಯಲ್ಲಿ ಮಕ್ಕಳ ವಾಟ್ಸ್‌ಆ್ಯಪ್‌ ಗುಂಪು ಗಳನ್ನು ರಚಿಸಿಕೊಂಡು ವಿಷಯ ವಾರು ಶಿಕ್ಷಕರು ನಿರಂತರ ವಾಗಿ ಮಕ್ಕಳೊಂದಿಗೆ ಸಂಪರ್ಕ ನಡೆಸುತ್ತಿ ದ್ದಾರೆ. ಶಿಕ್ಷಕರು ಶಾಲೆಯಲ್ಲಿ ಲಭ್ಯ ವಿರುವುದರಿಂದ ಕೆಲವು ಮಕ್ಕಳು ಸಾಮಾಜಿಕ ಅಂತರ ಕಾಪಾಡಿ ಶಾಲೆಗೆ ಬಂದು ಮನೆ ಪಾಠಗಳನ್ನು ತಿದ್ದಿಸಿ ಕೊಂಡು ಹೋಗುತ್ತಿದ್ದಾರೆ ಡಿಡಿಪಿಐ ಹೇಳಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.