ಅಪರಾಧ ತಡೆಗೆ ಗ್ರಾಮ ವಾಸ್ತವ್ಯ


Team Udayavani, Dec 9, 2020, 8:50 PM IST

Untitled-1

ಸಾಂದರ್ಭಿಕ ಚಿತ್ರ

ಶಿರಸಿ: ಅಪರಾಧ ತಡೆಗೆ ಪೊಲೀಸರಿಂದಲೂ ನಿಗದಿತ ಸಮಯದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುತ್ತದೆ ಎಂದು ನೂತನ ಪೊಲೀಸ್‌ ಉಪಾಧೀಕ್ಷಕ ರವಿ ನಾಯ್ಕ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿರಸಿ, ಸಿದ್ದಾಪುರ ಮತ್ತು ಯಲ್ಲಾಪುರ ತಾಲೂಕುಗಳಲ್ಲಿ ಒಂಟಿ ಮನೆಗಳ ರಕ್ಷಣೆಗೆ ಪೊಲೀಸ್‌ ಇಲಾಖೆ ವಿಶೇಷ ಯೋಜನೆ ಹಮ್ಮಿಕೊಳ್ಳಲಿದೆ. ನಮ್ಮ ಸಿಬ್ಬಂದಿ ವಾರದಲ್ಲಿ ಎರಡು ದಿನ ಗ್ರಾಮ ವಾಸ್ತವ್ಯ ಮಾಡುವ ಮೂಲಕ ರಕ್ಷಣೆ ಒದಗಿಸಲಿದ್ದೇವೆ. ಪೋಲೀಸ್‌ ಬೀಟ್‌ ವ್ಯವಸ್ಥೆ ಈಗಾಗಲೇ ಇದ್ದು, ಅದನ್ನು ಇನ್ನಷ್ಟು ಬಲಪಡಿಸಲಾಗುವುದು. ಪ್ರತಿ ಎರಡು ಅಥವಾ ಮೂರು ಹಳ್ಳಿಗಳಿಗೆ ಒಬ್ಬ ಪೊಲೀಸ್‌ ಸಿಬ್ಬಂದಿಗೆ ಜವಾಬ್ದಾರಿ ವಹಿಸಲಿದ್ದೇವೆ. ಆತ ಹಳ್ಳಿಯಲ್ಲಿಯೇ ರಾತ್ರಿಯೂ ಇರುವುದರಿಂದ ಸ್ಥಳೀಯರ ಸಮಸ್ಯೆ ಇನ್ನಷ್ಟು ಹತ್ತಿರದಿಂದ ತಿಳಿಯಲು ಸಾಧ್ಯವಾಗುತ್ತದೆ. ಇದರೊಂದಿಗೆ ಒಂಟಿ ಮನೆಗಳ ರಕ್ಷಣೆ ಸಾಧ್ಯವಾಗುತ್ತದೆ ಎಂದರು.

ಶಿರಸಿಯಲ್ಲಿ ಟ್ರಾಫಿಕ್‌, ಪಾರ್ಕಿಂಗ್‌ ಸಮಸ್ಯೆ ಇದೆ. ಇದನ್ನು ಪರಿಹರಿಸಲು ಮೊದಲೆ ಆದ್ಯತೆ ನೀಡಲಾಗುತ್ತದೆ. ಕೆಲ ಕಡೆಗಳಲ್ಲಿ ಇಕ್ಕಟ್ಟಾದ ರಸ್ತೆಗಳಿವೆ. ವಾಹನ ಅಡ್ಡಾದಿಡ್ಡಿ ನಿಲ್ಲಿಸಿದರೆ ಇತರರಿಗೂ ತೊಂದರೆ ಆಗುತ್ತದೆ. ಯಾವ ರೀತಿಯಲ್ಲಿ ಈ ಸಮಸ್ಯೆ ಬಗೆಹರಿಸಬಹುದು ಎಂದು ಪರಿಶೀಲಿಸುತ್ತೇವೆ. ಪೊಲೀಸ್‌ ಮತ್ತು ಜನರ ನಡುವಿನ ಸಂಬಂಧ ಇನ್ನಷ್ಟು ಬಲಗೊಳ್ಳಬೇಕು. ಅನ್ಯಾಯಕ್ಕೆ ಒಳಗಾದವರು ಮತ್ತು ಬಡವರೇ ಹೆಚ್ಚಿನ ಸಂಖ್ಯೆಯಲ್ಲಿ ಠಾಣೆಗೆ ಆಗಮಿಸುತ್ತಾರೆ. ಅವರಿಗೆ ವಿಶ್ವಾಸ ಮೂಡುವ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದ್ದೇವೆ ಎಂದರು.

ಅಡಕೆ ಕಟಾವು ಕಾರ್ಯ ಈ ದಿನಗಳಲ್ಲಿ ನಡೆಯುತ್ತಿದ್ದು, ಈ ಕುರಿತಂತೆ ರೈತರ ನಡುವೆ ವೈಮನಸ್ಸಿನ ಪ್ರಕರಣಗಳೂ ಬರುತ್ತಿವೆ. ಆದರೆ, ಇಂತಹ ಸಿವಿಲ್‌ ಪ್ರಕರಣಗಳಲ್ಲಿ ಪೊಲೀಸ್‌ ಹಸ್ತಕ್ಷೇಪ ಆಗಬಾರದು. ಇಂತಹ ಸಿವಿಲ್‌ ಪ್ರಕರಣದಲ್ಲಿ ಭಾಗಿ ಆಗದಂತೆ ಪೊಲೀಸರಿಗೆ ಸ್ಪಷ್ಟ ತಿಳಿಸಿದ್ದೇನೆ ಎಂದರು. ರೌಡಿಸಂ ಮತ್ತು ಗೂಂಡಾಗಿರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಗಾಂಜಾ ಮಾರಾಟ ಮತ್ತು ಸಾಗಾಟವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಲಿದೆ. ನಮ್ಮ ಜಿಲ್ಲೆಯಲ್ಲಿಯೂ ಕೆಲವೆಡೆ ಗಾಂಜಾ ಬೆಳೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇವೆ. ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೆಲ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಅರಣ್ಯ ಇಲಾಖೆ ಜೊತೆ ಚರ್ಚೆ ನಡೆಸಿ, ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚುತ್ತೇವೆ ಎಂದ ಅವರು, ಹೈವೇ ಗಸ್ತು ತಿರುಗಾಟವನ್ನು ಇನ್ನಷ್ಟು ಹೆಚ್ಚಿಸಲಾಗುತ್ತಿದೆ. ಗ್ರಾಮೀಣ ರಸ್ತೆಗಳಲ್ಲಿ ರಾತ್ರಿ ವೇಳೆ ವಾಹನ ಹಾಳಾಗಿ ನಿಂತರೆ, ಅಥವಾ ರಸ್ತೆಯಲ್ಲಿ ತೊಂದರೆ ಆದರೆ ತಕ್ಷಣವೇ ರೇಡಿಯಂ ಸ್ಟಿಕ್ಕರ್‌ ಅಳವಡಿಸಿ ಅಪಘಾತ ಆಗದಂತೆ ಕಾಳಜಿ ವಹಿಸುತ್ತೇವೆ. ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ವ್ಯವಹರಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಿದ್ದೇವೆ ಎಂದರು.

ಪ್ರತಿ ಮನೆಯಲ್ಲೂ ಮಾಹಿತಿ :  ತುರ್ತು ಸಂದರ್ಭದಲ್ಲಿ ಗ್ರಾಮಸ್ಥರಿಗೆ ತಕ್ಷಣವೇ ಪೊಲೀಸರನ್ನು ಸಂಪರ್ಕಿಸಲು ಅನುವಾಗುವ ಸಲುವಾಗಿ ಪ್ರತಿ ಮನೆಗೂ ಮಾಹಿತಿ, ದೂರವಾಣಿ ಸಂಖ್ಯೆ ಉಳ್ಳ ಸ್ಟಿಕ್ಕರ್‌ ಹಚ್ಚಲಿದ್ದೇವೆ. ಮನೆಯ ಬಾಗಿಲಿನ ಹಿಂದೆ ಈ ಸ್ಟಿಕ್ಕರ್‌ ಅಳವಡಿಸಲಾಗುತ್ತಿದ್ದು, ಇದರಲ್ಲಿ ಬೀಟ್‌ ಪೊಲೀಸರ, ಪೋಲೀಸ್‌ ಠಾಣೆ ಮತ್ತು ಪಿಎಸ್‌ಐ ಅವರ ಮೊಬೈಲ್‌ ನಂಬರ್‌ ಇರಲಿದೆ. ತುರ್ತು ಸಂದರ್ಭದಲ್ಲಿ ಪೊಲೀಸರ ದೂರವಾಣಿ ಸಂಖ್ಯೆ ಸುಲಭವಾಗಿ ಸಿಗುವಂತಿರಬೇಕು ಎಂದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.