ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಬಾಕಿ: ಪರಿಷತ್ ಕಲಾಪ ಕರೆಯಲು ಸರ್ಕಾರದ ಸೂಚನೆ
Team Udayavani, Dec 11, 2020, 4:26 PM IST
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ, ಗೋ ಹತ್ಯೆ ನಿಷೇಧ ಕಾಯ್ದೆ ಮಂಡನೆ ಬಾಕಿ ಇರುವ ಕಾರಣ ವಿಧಾನ ಪರಿಷತ್ ಕಲಾಪವನ್ನು ಮುಂದುವರಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಈ ಬಗ್ಗೆ ವಿಧಾನ ಪರಿಷತ್ ಕಾರ್ಯದರ್ಶಿಗೆ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಯಿಂದ ಪತ್ರ ಬರೆಯಲಾಗಿದೆ. ಡಿ. 15ರಂದು ಬೆಳಗ್ಗೆ 11ಕ್ಕೆ ವಿಧಾನಪರಿಷತ್ ಕಲಾಪ ಕರೆಯಬೇಕು ಎಂದು ಪತ್ರದಲ್ಲಿ ಸೂಚಿಸಲಾಗಿದೆ.
ಡಿ.15ರವರೆಗೆ ನಡೆಯಬೇಕಾಗಿದ್ದ ವಿಧಾನಮಂಡಲ ಕಲಾಪವನ್ನು ಗ್ರಾಮ ಪಂಚಾಯತಿ ಚುನಾವಣೆ ಕಾರಣದಿಂದ ಡಿ.10ಕ್ಕೆ ಮೊಟಕುಗೊಳಿಸಲಾಗಿತ್ತು. ಹೀಗಾಗಿ ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿಂತೆ ನೋಟಿಸ್ ನೀಡಿ 14 ದಿನಗಳು ಪೂರ್ಣವಾಗದ ಹಿನ್ನಲೆ ನಿರ್ಣಯ ಮಂಡಿಸಲು ಸಾಧ್ಯವಾಗಿರಲಿಲ್ಲ.
ಇದನ್ನೂ ಓದಿ:ಅಧ್ಯಾದೇಶ ಮಾರ್ಗ?; ವಿಧಾನ ಪರಿಷತ್ನಲ್ಲಿ ಮಂಡನೆಯಾಗದ ಗೋಹತ್ಯೆ ನಿಷೇಧ ಮಸೂದೆ
ಹೀಗಾಗಿ ಡಿ.15ರಂದು ಕಲಾಪ ಕರೆಯುವಂತೆ ವಿಧಾನ ಪರಿಷತ್ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. ಈ ವೇಳೆ ಬಿಜೆಪಿ ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದು ಬಹುತೇಕ ಖಚಿತವಾಗಿದೆ.
ಈಗಾಗಲೇ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಮಸೂದೆ (ಗೋಹತ್ಯೆ ನಿಷೇಧ) ಪರಿಷತ್ ನಲ್ಲಿ ಮಂಡನೆಯಾಗಲು ಬಾಕಿಯಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮಸೂದೆಗೆ ಗುರುವಾರ ಪರಿಷತ್ ನಲ್ಲಿ ಹಿನ್ನಡೆಯಾದ ಕಾರಣ ಸೋಮವಾರದ ಕಲಾಪದಲ್ಲಿ ಮಸೂದೆಗೆ ಅಂಗೀಕಾರ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ