ಸ್ಥಳೀಯ ಮುಖಂಡರಿಂದ ಅಭ್ಯರ್ಥಿಗಳ ಆಯ್ಕೆ


Team Udayavani, Dec 11, 2020, 4:40 PM IST

ಸ್ಥಳೀಯ ಮುಖಂಡರಿಂದ ಅಭ್ಯರ್ಥಿಗಳ ಆಯ್ಕೆ

ಮಾಸ್ತಿ: ಬಿಜೆಪಿಯಿಂದ ಕಾಂಗ್ರೆಸ್‌ ಮುಕ್ತ ಮಾಡುವುದು ಕೇವಲ ಭ್ರಮೆಯಾಗಿದ್ದು, ದೇಶದಲ್ಲಿ ಬಿಜೆಪಿ ಮುಕ್ತ ಮಾಡಲು ಜನತೆ ಸಜ್ಜಾಗಿದ್ದಾರೆ ಎಂದು ಶಾಸಕ ಕೆ. ವೈ.ನಂಜೇಗೌಡ ಹೇಳಿದರು.

ಮಾಸ್ತಿ ಹಾಗೂ ಹೋಬಳಿಯ ಹಸಾಂಡಹಳ್ಳಿ, ತುರುಣಿಸಿ, ದಿನ್ನಹಳ್ಳಿ ಗ್ರಾಮಗಳಲ್ಲಿ ಬ್ಲಾಕ್‌ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಗ್ರಾಪಂ ಚುನಾವಣೆಯ ಪ್ರವಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಸ್ತಿ ಗ್ರಾಮವು ಹೋಬಳಿಯ ಕೇಂದ್ರ ಸ್ಥಾನವಾಗಿದ್ದು,ಈಭಾಗ ಹಿಂದಿ ನಿಂದಲೂಕಾಂಗ್ರೆಸ್‌ಭದ್ರಕೋಟೆಯಾಗಿದೆ. ಮಾಸ್ತಿ ಗ್ರಾಪಂನಲ್ಲಿ 24 ಸದಸ್ಯರು ಹಾಗೂ ಹೋಬಳಿಯ ಪ್ರತಿ ಗ್ರಾಪಂನಲ್ಲೂ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಬೇಕಿದೆ. ತಾಲೂಕಿನ ಎಲ್ಲಾ 28 ಗ್ರಾಪಂಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಅಭ್ಯರ್ಥಿಗಳ ಆಯ್ಕೆಯನ್ನು ಆಯಾ ಗ್ರಾಮದ ಮುಖಂಡರಿಗೆ ನೀಡುತ್ತೇನೆ ಎಂದರು.

ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ತಾಲೂಕಿನ ಗ್ರಾಮಗಳಿಗೆ ತಂದಿರುವ ವಿಶೇಷ ಅನುದಾನ ಬಳಸಿಕೊಂಡುಸಾಕಾಷ್ಟು ಅಭಿವೃದ್ಧಿ ಕಾರ್ಯಗಳನ್ನುಮಾಡಿರುವ ತೃಪ್ತಿ ನನಗಿದೆ. ಎರಡೂವರೆವರ್ಷದಲ್ಲಿ ನಡೆಸಿದ ಅಭಿವೃದ್ಧಿಕಾರ್ಯಗಳನ್ನು ಮುಂದಿಟ್ಟುಕೊಂಡು ಗ್ರಾಪಂ ಚುನಾವಣೆ ಮತಯಾಚನೆಮಾಡಲಾಗುವುದು ಎಂದರು.

ಮಾಸ್ತಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಟಿ.ಮುನಿಯಪ್ಪ, ಡಿಸಿಸಿ ಬ್ಯಾಂಕ್‌ ನಿರ್ದೇ ಶಕ ಚನ್ನರಾಯಪ್ಪ, ಎಪಿಎಂಸಿ ಸದಸ್ಯ ರಾದ ಸಬ್ದರ್‌ ಬೇಗ್‌, ಕೃಷ್ಣಕುಮಾರ್‌, ಕೆಡಿಪಿ ಮಾಜಿ ಸದಸ್ಯ ವಿಜಯನರಸಿಂಹ,ಗ್ರಾಪಂ ಮಾಜಿ ಉಪಾಧ್ಯಕ್ಷ ಎಚ್‌.ವಿ. ಸತೀಶ್‌, ಎ.ಅಶ್ವತ್ಥ್ರೆಡ್ಡಿ, ಮುನಿಶಾಮಿಗೌಡ, ಜೆಸಿಬಿ ನಾಗರಾಜ್‌, ಶೌಕತ್‌ ಉಲ್ಲಾಬೇಗ್‌, ಟೆಂಟ್‌ ವೆಂಕಟೇಶ್‌ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

 ಮೊದಲ ಹಂತದಲ್ಲಿ 1,520 ಗ್ರಾಪಂ ಸ್ಥಾನಗಳಿಗೆ ಚುನಾವಣೆ :

ಕೋಲಾರ: ಜಿಲ್ಲೆಯ ಕೋಲಾರ, ಮಾಲೂರು ಹಾಗೂ ಶ್ರೀನಿವಾಸಪುರ ವ್ಯಾಪ್ತಿಯ85 ಪಂಚಾಯ್ತಿಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಡಿ.11 ರಂದುಕೊನೆಗೊಳ್ಳಲಿದ್ದು, 1520 ಪಂಚಾಯ್ತಿ ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆಯುತ್ತಿದೆ.

ನಾಮಪತ್ರಸಲ್ಲಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಡಿ.8 ರಂದುಕೋಲಾರದ32 ಗ್ರಾಪಂಗಳ569 ಸ್ಥಾನಗಳಿಗೆ36, ಮಾಲೂರು ತಾಲೂಕಿನ 28 ಗ್ರಾಪಂಗಳ 505 ಸ್ಥಾನಗಳಿಗೆ 35 ಹಾಗೂ ಶ್ರೀನಿವಾಸಪುರದ 25ಗ್ರಾಪಂಗಳ 446 ಸ್ಥಾನಗಳಿಗೆ 4 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಶುಕ್ರವಾರ ನಾಮಪತ್ರ ಭಾರೀ ಸಂಖ್ಯೆಯಲ್ಲಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.12 ಪರಿಶೀಲನೆ, 14 ನಾಮಪತ್ರ ವಾಪಸ್‌ ಪಡೆಯುವ ಕೊನೆಯ ದಿನವಾಗಿರುತ್ತದೆ. 14 ರ ನಂತರವಷ್ಟೇ ಅವಿರೋಧ ಆಯ್ಕೆಯ ವಿವರಗಳು ಖಚಿತಪಡಲಿದೆ.

ಕೋಲಾರ ಜಿಲ್ಲೆಯಲ್ಲಿ ಜಿದ್ದಾಜಿದ್ದಿನ ರಾಜಕೀಯ ಪೈಪೋಟಿ ಇರುವುದರಿಂದ ಅವಿರೋಧ ಆಯ್ಕೆ ಸಾಧ್ಯತೆ ಕಡಿಮೆ. ಮೀಸಲಾತಿಗೆ ತಕ್ಕಅಭ್ಯರ್ಥಿಗಳು ಇಲ್ಲದಿದ್ದಾಗ ಮಾತ್ರವೇ ಅವಿರೋಧ ಆಯ್ಕೆಯಾಗುವ ಸಾಧ್ಯತೆಗಳಿವೆ. ಆದರೂ, ಕೆಲವೆಡೆ ಗ್ರಾಮದಲ್ಲಿ ಒಗ್ಗಟ್ಟು ಮತ್ತು ಶಾಂತಿ ಕಾಪಾಡುವ ಸಲುವಾಗಿ ಗ್ರಾಪಂ ಸ್ಥಾನಗಳನ್ನು ಹರಾಜು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಕೋಲಾರ ತಾಲೂಕಿನ ಬೆದ್ಲಿ ಗ್ರಾಮದಲ್ಲಿ ಗ್ರಾಪಂ ಸ್ಥಾನವೊಂದನ್ನು ನಾಲ್ವರು ಅಭ್ಯರ್ಥಿ ಆಕಾಂಕ್ಷಿಗಳ ನಡುವೆ ಹರಾಜು ನಡೆಸಿ ಅಂತಿಮವಾಗಿ ಶ್ರೀರಾಮಪ್ಪ ಎಂಬುವರಿಗೆ5 ಲಕ್ಷ ರೂ.ಗೆ ಹರಾಜು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಉಳಿದಂತೆ ಮುಳಬಾಗಿಲು, ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯವು 11 ರಂದು ಆರಂಭವಾಗಲಿದೆ. ಗ್ರಾಪಂ ನಾಮಪತ್ರ ಸಲ್ಲಿಕೆ ಕಾರ್ಯ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಟಾಪ್ ನ್ಯೂಸ್

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.