ಲೋಕಲ್‌ ಫೈಟ್‌ಗೆ ಹೆಚ್ಚಿದ ಉಮೇದುವಾರಿಕೆ

ಗ್ರಾಮ ಪಂಚಾಯಿತಿ ಚುನಾವಣೆಗೆ ತೀವ್ರ ಪೈಪೋಟಿ

Team Udayavani, Dec 11, 2020, 5:37 PM IST

YG-TDY-1

ಯಾದಗಿರಿ: ಸದ್ಯ ಎದುರಾಗಿರುವ ಗ್ರಾಪಂ ಚುನಾವಣೆಗೆ ಗ್ರಾಮೀಣ ಭಾಗದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿರುವ ಯುವ ಸಮೂಹ ಭಾರಿ ಉತ್ಸಾಹದಿಂದ ನಾಮಪತ್ರ ಸಲ್ಲಿಸುತ್ತಿರುವುದು ಕಂಡು ಬರುತ್ತಿದೆ.

ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಮೂರು ತಾಲೂಕುಗಳಲ್ಲಿ ಚುನಾವಣೆ ಜರುಗಲಿದ್ದು, ಶಹಾಪುರ ತಾಲೂಕಿನ 24 ಗ್ರಾಪಂಗಳ 495 ಸದಸ್ಯ ಸ್ಥಾನ, ಸುರಪುರ ತಾಲೂಕಿನ 21 ಗ್ರಾಪಂಗಳ 383 ಸ್ಥಾನ ಹಾಗೂ ಹುಣಸಗಿ ತಾಲೂಕಿನ 18 ಗ್ರಾಪಂಗಳ 369ಸ್ಥಾನ ಸೇರಿ 1247 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಪಂಚಾಯಿತಿಗಳಲ್ಲಿ ಈಗಾಗಲೇ ನಾಮಪತ್ರ ಸಲ್ಲಿಕೆನಡೆಯುತ್ತಿದ್ದು, ಶಹಾಪುರ ತಾಲೂಕಿನ ಚಟ್ನಳ್ಳಿಗ್ರಾಪಂ ಕಾರ್ಯಾಲಯ ಎದುರು ಆಕಾಂಕ್ಷಿಗಳು ಮತ್ತು ಬೆಂಬಲಿಗರು ಜಾತ್ರೆಯಂತೆ ನೆರೆದಿದ್ದು ಕಂಡು ಬಂತು.

ಈ ಬಾರಿ ವಿಶೇಷವಾಗಿ ಯುವ ಸಮೂಹವೇ ಚುನಾವಣೆ ಅಖಾಡಕ್ಕೆ ಹೆಚ್ಚಾಗಿ ಧುಮುಕಿರುವುದುಕಾಣಸಿಗುತ್ತಿದ್ದು, ಪಂಚಾಯಿತಿ ಫೈಟ್‌ ದಿನದಿಂದದಿನಕ್ಕೆ ಕಾವೇರುತ್ತಿದೆ. ಒಂದು ಸ್ಥಾನಕ್ಕೆ ಮೂವರಿಂದನಾಲ್ವರು ನಾಮಪತ್ರ ಸಲ್ಲಿಸುತ್ತಿದ್ದು ಬಹುತೇಕಹೊಸ ಮುಖಗಳು ಎಂಟ್ರಿ ಕೊಡುತ್ತಿರುವುದು ಇನ್ನುಮುಂದಾದರೂ ಗ್ರಾಮದ ಏಳ್ಗೆಯಾಗಲಿ ಎನ್ನುವ ಮಾತುಗಳು ಕೇಳಿಬರುತ್ತಿದೆ.

ನಾಮಪತ್ರ ಸಲ್ಲಿಸುತ್ತಿರುವ ಅಭ್ಯರ್ಥಿಗಳು ತನ್ನ ಸ್ವಂತ ವರ್ಚಸ್ಸಿನ ಮೇಲೆಯೇ ನಾಮಪತ್ರ ಸಲ್ಲಿಸುತ್ತಿದ್ದು, ಎಲ್ಲ ಜಾತಿ ಮತ ಪಡೆಯಲು ಜನರನ್ನುಓಲೈಸುವ ತಂತ್ರಗಾರಿಕೆ ಶುರು ಮಾಡಿದ್ದಾರೆ. ಈಗಲೇ ಬಹಿರಂಗವಾಗಿ ಜಾತಿ ಹೆಸರು ಬಳಸಿ ಇತರರ ಅಸಮಾಧಾನಕ್ಕೆ ಗುರಿಯಾಗದೇ ಒಳಗೊಳಗೆ ತಮ್ಮಜಾತಿಯ ಮತಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳು ಏನೆಲ್ಲ ಕಸರತ್ತು ನಡೆಸಿದರೂ ಅಂತಿಮವಾಗಿ ಮತದಾರರು ಯಾರಿಗೆಜೈ ಎನ್ನುವರೋ ಎನ್ನುವ ಉತ್ತರ ಸಿಗಲು ಮತದಾನದವರೆಗೆ ಕಾಯಲೆಬೇಕಿದೆ.

ನಾಮಪತ್ರ ಸಲ್ಲಿಕೆ :  ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಪಂ ಚುನಾವಣೆಗೆ ಅಭ್ಯರ್ಥಿಗಳಿಂದ ಡಿ.9ರವರೆಗೆವಿವಿಧ ಗ್ರಾಪಂಗಳಲ್ಲಿ ಒಟ್ಟು 102 ನಾಮಪತ್ರ ಸಲ್ಲಿಕೆಯಾಗಿತ್ತು. ಶಹಾಪುರ ತಾಲೂಕಿನಗ್ರಾಪಂಗಳಿಗೆ 11, ಸುರಪುರ ತಾಲೂಕಿನ ಗ್ರಾಪಂಗಳಿಗೆ 31 ಹಾಗೂ ಹುಣಸಗಿತಾಲೂಕಿನ ಗ್ರಾಪಂಗಳಿಗೆ 60 ಸೇರಿ ಒಟ್ಟು 102ಸಲ್ಲಿಕೆಯಾಗಿತ್ತು. ಡಿ.11 ನಾಮಪತ್ರ ಸಲ್ಲಿಕೆಗೆಕೊನೆ ದಿನವಾಗಿದ್ದು, ಇಂದೂ ಕೂಡ ಬಹಳಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಮೊದಲ ಬಾರಿಗೆ ಗ್ರಾಪಂ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಗ್ರಾಮದಲ್ಲಿ ಸಮರ್ಪಕ ಅಭಿವೃದ್ಧಿ ಮಾಡುವ ಉದ್ದೇಶವಿದೆ. ಗ್ರಾಮದಲ್ಲಿಯೂ ಸಾಕಷ್ಟು ಪ್ರೋತ್ಸಾಹನೀಡುತ್ತಿದ್ದು ಮತದಾರರು ಆಶೀರ್ವದಿಸಿದರೆ ಸೇವೆಗೆ ಅನಕೂಲವಾಗಲಿದೆ.  –ಸಾಬಣ್ಣ ಭಜಂತ್ರಿ, ಚಟ್ನಳ್ಳಿ ಗ್ರಾಪಂ ಅಭ್ಯರ್ಥಿ

ಗ್ರಾಮಗಳ ಅಭಿವೃದ್ಧಿಗೆ ಹೊಸ ಆಲೋಚನೆಗಳಿರುವ ಯುವಕರನ್ನು ಆರಿಸಿತರಬೇಕಿದೆ. ಯುವ ಸಮೂಹ ಉತ್ಸುಕರಾಗಿಚುನಾವಣೆಗೆ ಸ್ಪರ್ಧಿಸುತ್ತಿದ್ದು ವಿದ್ಯಾವಂತರೂ ಇದ್ದಾರೆ. ಅವರು ಆರಿಸಿ ಬಂದರೆ ಗ್ರಾಮಗಳ ಅಭಿವೃದ್ಧಿಯಾಗುವ ನಿರೀಕ್ಷೆಯಿದೆ. –ಮಾನಪ್ಪ ಗೌಡ ದಳಪತಿ, ಮರಮಕಲ್‌

ಹಿಂದೆ ನಮ್ಮ ಕಾಲದಲ್ಲಿ ಮುಖಂಡರು ಯಾರ ಹೆಸರು ಹೇಳಿದರೆ ಅವರು ಆರಿಸಿ ಬರುತ್ತಿದ್ದೆವು. ಈಗ ಹುಡುಗರು ಎಲೆಕ್ಷನ್‌ಗೆ ನಿಂತಿದ್ದಾರೆ. ಇಂದಿನ ದಿನಮಾನಗಳೇ ಬೇರೆ. ಹಾಗಾಗಿ ಸನ್ನಿವೇಶಕ್ಕೆ ತಕ್ಕಂತೆ ಅವಕಾಶ ದೊರೆಯಬೇಕು. ಜನರಿಗೆ ಉಪಯೋಗವಾಗುವ ಕಾರ್ಯ ಮಾಡುವುದು ಅಗತ್ಯ. –ಸಾಬಣ್ಣ ಪೂಜಾರಿ, ಗ್ರಾಪಂ ಮಾಜಿ ಸದಸ್ಯ, ಚಟ್ನಳ್ಳಿ

 

-ಅನೀಲ ಬಸೂದೆ

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.