ಜೋಳಕ್ಕೆ ಸೈನಿಕನ ಕಾಟ; ಮತ್ತೆ ರೈತರಲ್ಲಿ ಆತಂಕ


Team Udayavani, Dec 11, 2020, 6:50 PM IST

rc-tdy-2

ದೇವದುರ್ಗ: ಹಿಂಗಾರು ಹಂಗಾಮಿನಲ್ಲಿನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಿರುವ ಜೋಳಕ್ಕೆ ಸೈನಿಕ ಹುಳು ಬಾಧೆ ಕಂಡುಬಂದಿದ್ದು, ರೈತರಲ್ಲಿ ಮತ್ತೆ ಆತಂಕ ಮನೆ ಮಾಡಿದೆ.

ಜೋಳ ಬಿತ್ತನೆ ಮಾಡಿ 25ರಿಂದ 30 ದಿನಗಳು ಕಳೆಯುತ್ತಿದೆ. ನಾಲ್ಕು ಹೋಬಳಿವ್ಯಾಪ್ತಿಯಲ್ಲಿ 22,766 ಹೆಕ್ಟೇರ್‌ ಪ್ರದೇಶದಲ್ಲಿ ಜೋಳ ಬಿತ್ತನೆ ಮಾಡಲಾಗಿದೆ.

ಎಲ್ಲೆಲ್ಲಿ ಎಷ್ಟು ಬಿತ್ತನೆ: ಪಟ್ಟಣ ಸೇರಿ ತಾಲೂಕಿನ್ಯಾದಂತ ಹಿಂಗಾರು ಹಂಗಾಮಿನಲ್ಲಿ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಜೋಳ ಬಿತ್ತನೆ ಮಾಡಲಾಗಿದೆ. ದೇವದುರ್ಗ ನೀರಾವರಿ-785 ಹೆಕ್ಟೇರ್‌, ಗಬ್ಬೂರು-1142ಹೆಕ್ಟೇರ್‌, ಜಾಲಹಳ್ಳಿ-525 ಹೆಕ್ಟೇರ್‌,ಅರಕೇರಾ- 675 ಹೆಕ್ಟೇರ್‌ ನೀರಾವರಿ3,127 ಹೆಕ್ಟೇರ್‌ ಪ್ರದೇಶದಲ್ಲಿ ಜೋಳಬಿತ್ತನೆ ಮಾಡಲಾಗಿದೆ. ಖುಷ್ಕಿ ಪ್ರದೇಶದಲ್ಲಿದೇವದುರ್ಗ-5,785 ಹೆಕ್ಟೇರ್‌, ಗಬ್ಬೂರು-6,169 ಹೆಕ್ಟೇರ್‌, ಜಾಲಹಳ್ಳಿ- 2,975 ಹೆಕ್ಟೇರ್‌, ಅರಕೇರಾ- 4,710 ಹೆಕ್ಟೇರ್‌ ಖುಷ್ಕಿ 19,639 ಹೆಕ್ಟೇರ್‌ ಪ್ರದೇಶದಲ್ಲಿ ಜೋಳಬಿತ್ತನೆ ಮಾಡಿದ್ದು, ಹಿಂಗಾರು ಹಂಗಾಮಿನಲ್ಲಿ22,766 ಹೆಕ್ಟೇರ್‌ ಪ್ರದೇಶದಲ್ಲಿ ಜೋಳ ಬಿತ್ತನೆ ಮಾಡಿದ್ದಾರೆ.

ಆಂತಕದಲ್ಲಿ ರೈತರು: ಕಳೆದೆರಡು ತಿಂಗಳಹಿಂದೆ ನಿರಂತರ ಸುರಿದ ಮಳೆಯಿಂದಾಗಿ ಮೆಣಿಸಿನಕಾಯಿ, ಹತ್ತಿ, ತೊಗರಿ ಸೇರಿ ಇತರೆಬೆಳೆಗಳ ನಷ್ಟ ಅನುಭವಿಸಿದ್ದಾರೆ. ಹೆಚ್ಚುಮಳೆ ಸುರಿದಿದ್ದರಿಂದ ಬೆಳೆಗಳಿಗೆ ತೇವಾಂಶಹೆಚ್ಚಾಗಿ ಲಕ್ಷಾಂತರ ರೂ. ನಷ್ಟ ಅನುಭವಿಸಿದರೈತರೀಗ ಸೈನಿಕ ಹುಳು ಬಾಧೆಗೆ ಆತಂಕ ಪಡುವಂತಾಗಿದೆ.

ಜಾಗೃತಿ ಅಗತ್ಯ: ತಾಲೂಕಿನಾದ್ಯಂತ ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಜೋಳಕ್ಕೆ ಸೈನಿಕ ಹುಳು ಬಾಧೆ ಆವರಿಸಿದೆ. ಹುಳುವಿನ ಮೊದಲ ಹಂತದ ಮರಿಹುಳು ಎಲೆ ಕೆರೆದು ತಿನ್ನುವುದರಿಂದ, ಎಲೆಯ ಮೇಲೆ ಬಿಳಿಯಪಾರದರ್ಶಕ ಜಾಲರಿಗಳು ಕಂಡುಬರುತ್ತವೆ.ನಂತರ ಮರಿಹುಳು ಎಲೆ ತಿನ್ನುವ ಜತೆಕತ್ತರಿಸಿದಂತೆ ಕಾಣಿಸುತ್ತದೆ. ಸುಳಿ ಕೊರೆದು ತಿನ್ನುವುದರಿಂದ ಗಿಡ ಒಣಗುತ್ತದೆ. ಹಳದಿ ಮಿಶ್ರತ ಕಂದುಬಣ್ಣದ ಹಿಕ್ಕೆ ಕಂಡು ಬರುತ್ತದೆ. ಸೂಕ್ತ ಸಮಯದಲ್ಲಿ ರೈತರಿಗೆ ಕೃಷಿ ಅ ಧಿಕಾರಿಗಳಿಂದ ಜಾಗೃತಿ ನೀಡುವ ಅಗತ್ಯವಿದೆ.

ಬೆಳೆ ಹತೋಟಿಗೆ: ಜೋಳಕ್ಕೆ ಸೈನಿಕ ಹುಳು ಬಾಧೆ ಕಾಣಿಸಿಕೊಂಡಿರುವ ಹಿನ್ನೆಲೆ ಸೂಕ್ತ ಸಮಯದಲ್ಲಿ ವಿಜ್ಞಾನಿಗಳ ಸಲಹೆ ಪಡೆದು ಬೆಳೆಗಳು ಹತೋಟಿಗೆ ತರಬೇಕಾಗಿದೆ. 0.40ಗ್ರಾಂ. ಇಮಾಮೆಕ್ಷೆನ್‌ ಬೆಂಜೋಯಟ್‌, 5 ಎಸ್‌.ಜಿ. ಅಥವಾ 0.3 ಮಿ.ಲೀ.ಕ್ಲೋರಾಂಟ್ರಿನಿಲ್‌ ಪ್ರೊಲ್‌, 18.5 ಎಸ್‌.ಸಿ.ಅಥವಾ 0.5ಮಿ.ಲೀ ಸ್ಪೆನೂಟೊರಂ, 12.5 ಎಸ್‌.ಸಿ ಪ್ರತಿ ಲೀ. ನೀರಿಗೆ ಬೆರೆಸಿ ದ್ರಾವಣವು ಸುಳಿಯೊಳಗೆ ಬೀಳುವಂತೆ ಸಿಂಪಡಿಸಬೇಕುಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ| ಗಿರೀಶ್‌ ಮರಡ್ಡಿ, ವಿಜ್ಞಾನಿ ಡಾ| ಕೃಷ್ಣಾ ಬಿರಾದಾರ ಪಾಟೀಲ್‌ ತಿಳಿಸಿದ್ದಾರೆ.

ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಜೋಳಕ್ಕೆ ಸೈನಿಕ ಹುಳು ಬಾಧೆ ಆವರಿಸಿದೆ. ಯಾವ ಹಂತದಲ್ಲಿ ಔಷಧ ಸಿಂಪಡಣೆ ಮಾಡಬೇಕೆಂಬ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಲಾಗಿದೆ. ಡಾ| ಎಸ್‌. ಪ್ರಿಯಾಂಕ್‌ ಸಹಾಯಕ ಕೃಷಿ ನಿರ್ದೇಶಕಿ

ಕೃಷಿ ಅಧಿಕಾರಿಗಳಿಂದ ರೈತರಿಗೆ ಜಾಗೃತಿ ಕೊರತೆ ಉಂಟಾಗಿದೆ. ಕಳಪೆ ಬೀಜಗಳ ಪೂರೈಕೆಯಿಂದ ಆರಂಭದಲ್ಲೇಬೆಳೆ ನಷ್ಟ ಅನುಭವಿಸಬೇಕಾಗಿದೆ. ಈ ಕುರಿತು ಕೃಷಿ ಇಲಾಖೆ ರೈತರಿಗೆ ಅಗತ್ಯ ಸಲಹೆ-ಸೂಚನೆ ನೀಡಬೇಕು.  –ಶಬ್ಬೀರ ಜಾಲಹಳ್ಳಿ, ರೈತ ಮುಖಂಡ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.