“ಕೋವಿಡ್ ಮಾರ್ಗಸೂಚಿಗಳನ್ನು ಕಡಾಯವಾಗಿ ಪಾಲಿಸಿ’


Team Udayavani, Dec 11, 2020, 8:13 PM IST

“ಕೋವಿಡ್ ಮಾರ್ಗಸೂಚಿಗಳನ್ನು ಕಡಾಯವಾಗಿ ಪಾಲಿಸಿ’

ಮುಂಬಯಿ, ಡಿ. 10: ಮೀರಾರೋಡ್‌ ಭಾರತಿ ಪಾರ್ಕ್‌ ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಇದರ 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿಯ ಪಡಿಪೂಜೆಯು ಡಿ. 5ರಂದು ಸಂಜೆ ಮೀರಾರೋಡ್‌ ಪೂರ್ವದ ಭಾರತಿ ಪಾರ್ಕಿನ ಶ್ರೀ ಲಕ್ಷ್ಮೀನಾರಾಯಣ ಭಜನ ಸಮಿತಿಯ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಇದೇ ಸಂದರ್ಭದಲ್ಲಿ ಗುರುಸ್ವಾಮಿ ಜಯಶೀಲ ತಿಂಗಳಾಯ ಅವರ ಪೌರೋಹಿತ್ಯದಲ್ಲಿ ಭಜನೆ, ಶ್ರೀ ಅಯ್ಯಪ್ಪ ಸ್ವಾಮಿಗೆ ಪಡಿಪೂಜೆ, ಕರ್ಪೂರಾರತಿ, ಶ್ರೀ ಲಕ್ಷ್ಮೀನಾರಾಯಣ ಹಾಗೂ ಮಂದಿರದ ಪರಿವಾರ ದೇವರಿಗೆ ಮಹಾಮಂಗಳಾರತಿ ನಡೆಯಿತು.

ಸೇವಾರ್ಥಿಗಳನ್ನು ಗೌರವಿಸಿ ಭಕ್ತರಿಗೆ ಪ್ರಸಾದ ವಿತರಿಸಿ ಮಾತನಾಡಿದ ಗುರುಸ್ವಾಮಿ ಜಯಶೀಲ ತಿಂಗಳಾಯ ಅವರು, ಸರಕಾರದ ಷರತ್ತುಬದ್ಧ ಸೂಚನೆಯಿಂದ ಶಬರಿಮಲೆ ಶ್ರೀ ಸನ್ನಿಧಿಗೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಅನಾನುಕೂಲವಾಗಿದ್ದಲ್ಲಿ ಅಂಥವರು ಮೀರಾರೋಡ್‌ ಪೂರ್ವದ, ಅಯ್ಯಪ್ಪ ಮಾರ್ಗ, ಶಾಂತಿ ನಗರ ಸೆಕ್ಟರ್‌- 2ರ ಎದುರುಗಡೆ ಇರುವ ಅಯ್ಯಪ್ಪ ಮಂದಿರದಲ್ಲಿ 18 ಮೆಟ್ಟಲುಗಳನ್ನು ಹತ್ತಿ ತುಪ್ಪದ ಅಭಿಷೇಕ, ಅರವಣ ಪಾಯಸ, ಅಪ್ಪ ಪ್ರಸಾದ ಮೊದಲಾದ ಹರಕೆ ಸಲ್ಲಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬಹುದು. ಆಡಳಿತ ಮಂಡಳಿಯ ನಿರ್ದೇಶನದಂತೆ ಭಕ್ತರು ಮುಂಚಿತವಾಗಿ ಹೆಸರನ್ನು ನೊಂದಾಯಿಸಬೇಕು. ಬೆಳಗ್ಗೆ 7 ರಿಂದ 11ರ ತನಕ ಸಮಯ ನಿಗದಿಯಾಗಿದ್ದು, ಭಕ್ತರ ಸಂಖ್ಯೆ 50ಕ್ಕೆ ಮೀರಿರಬಾರದು. ಲಘು ಉಪಹಾರವನ್ನು ಮಂದಿರದ ವತಿಯಿಂದ ಕಲ್ಪಿಸಲಾಗಿದೆ ಎಂದು ಹೇಳಿದ ಅವರು ಪ್ರತಿ ಸಂದರ್ಭದಲ್ಲಿ ಸ್ವಚ್ಛತೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಇನ್ನಿತರ ಮಾರ್ಗಸೂಚಿಗಳನ್ನು ಅನುಸರಿಸಿಕೊಳ್ಳಬೇಕು ಎಂದು ತಿಳಿಸಿ ಶುಭ ಹಾರೈಸಿದರು.

ಶ್ರೀ ಲಕ್ಷ್ಮೀನಾರಾಯಣ ಭಜನ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಸ್ವಾಮಿಗಳಾದ ಶೈಲೇಶ್‌ ಪಾಟೀಲ್, ಅಖೀಲೇಶ್‌ ಉಪಾಧ್ಯಾಯ, ಮಾಧವ ಸಿ. ಕೋಟ್ಯಾನ್‌, ಪ್ರವೀಣ್‌ ಶೆಟ್ಟಿ, ಸುಧೀರ್‌ ಪುತ್ರನ್‌, ಲೀಲಾಧರ್‌ ಅಂಚನ್‌, ಸಿ. ಎನ್‌. ಪೂಜಾರಿ, ಸಂತೋಷ್‌ ಶೆಟ್ಟಿ, ಗಣೇಶ್‌ ದೇವಾಡಿಗ, ಸತೀಶ್‌ ಸೇರಿಗಾರ್‌, ಸ್ವಪ್ನಿಲ್‌ ಸಿ. ಪೂಜಾರಿ, ಸಂತೋಷ್‌ ಶೆಟ್ಟಿ ವಿರಾರ್‌, ನವೀನ್‌ ಸಾಧುಲ್‌, ರಾಜೇಶ್‌ ಪೂಜಾರಿ, ಜಯಂತ್‌ ಶೆಟ್ಟಿ ಸಹಕರಿಸಿದರು. ಭಕ್ತರು ಸರಕಾರದ ನಿಯಮದಂತೆ ಪ್ರಸಾದ ಸ್ವೀಕರಿಸಿದರು.

ಶಬರಿಮಲೆ ಮಂದಿರದ ತದ್ರೂಪ :

ಮೀರಾರೋಡ್‌ ಪೂರ್ವದ ಶ್ರೀ ಅಯ್ಯಪ್ಪ ಮಾರ್ಗ, ಶಾಂತಿ ನಗರ ಸೆಕ್ಟರ್‌ 2ರ ಎದುರುಗಡೆ ಇರುವ ಅಯ್ಯಪ್ಪ ಮಂದಿರವು ಶಬರಿಮಲೆಯಲ್ಲಿರುವ ಶ್ರೀ ಸನ್ನಿಧಿಯ ಅಯ್ಯಪ್ಪ ಮಂದಿರದ ತದ್ರೂಪವಾಗಿ ವಾಸ್ತುಶಾಸ್ತ್ರದಂತೆ ನಿರ್ಮಾಣಗೊಂಡಿದೆ. ಅಯ್ಯಪ್ಪ ಸ್ವಾಮಿಯ ಮೂರ್ತಿ, ಧ್ವಜಸ್ತಂಭ, ಹದಿನೆಂಟು ಮೆಟ್ಟಲುಗಳು ಶ್ರೀಕ್ಷೇತ್ರದ ಮಣ್ಣಿನೊಂದಿಗೆ ರಚಿತವಾಗಿದೆ. ಸನ್ನಿಧಿಯ ತಂತ್ರಿಯವರೇ ಮೀರಾರೋಡ್‌ಗೆ ಆಗಮಿಸಿ ಮಂದಿರವನ್ನು ಲೋಕಾರ್ಪಣೆ ಮಾಡಿದ್ದಾರೆ. ಕಳೆದ ವರ್ಷ ಸುಮಾರು 200 ಮಂದಿ ಭಕ್ತರು ತುಪ್ಪದ ಅಭಿಷೇಕ ಮಾಡಿಸಿ ವ್ರತವನ್ನು ಪೂರ್ಣಗೊಳಿಸಿದ್ದಾರೆ.

 

-ಚಿತ್ರ – ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.