ಚುನಾವಣಾ ಸ್ಪರ್ಧೆಗೇನೂ ಕೊರತೆ ಇಲ್ಲ; ಸಮಸ್ಯೆಗಳ್ಯಾವುವೂ ಬಗೆಹರಿದಿಲ್ಲ !


Team Udayavani, Dec 12, 2020, 3:59 AM IST

ಚುನಾವಣಾ ಸ್ಪರ್ಧೆಗೇನೂ ಕೊರತೆ ಇಲ್ಲ; ಸಮಸ್ಯೆಗಳ್ಯಾವುವೂ ಬಗೆಹರಿದಿಲ್ಲ !

ಮರವಂತೆ ಗ್ರಾ.ಪಂ.ನಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ.

ಕುಂದಾಪುರ: ಗ್ರಾಮ ಪಂಚಾಯತ್‌ ಚುನಾವಣೆ ಎನ್ನುವುದಷ್ಟೇ. ರಣತಂತ್ರಕ್ಕೇನೂ ಕೊರತೆಯಿಲ್ಲ. ಜಿದ್ದಾಜಿದ್ದಿಯೂ ಅಷ್ಟೇ. ಬೈಂದೂರು ತಾಲೂಕಿನ 15 ಗ್ರಾ.ಪಂ.ಗಳಿಗೆ ಡಿ. 22ರಂದು ಮತದಾನ ನಡೆಯಬೇಕು. ಈ ಹಿನ್ನೆಲೆಯಲ್ಲಿ ಉದಯವಾಣಿ ತಂಡ ಕೆರ್ಗಾಲು, ಕಿರಿಮಂಜೇಶ್ವರ, ಕಂಬದಕೋಣೆ, ನಾವುಂದ, ಮರವಂತೆ, ನಾಡ, ಹೇರೂರು, ಕಾಲೊ¤àಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂಚರಿಸಿದಾಗ ರಣಕಣ ಹೇಗಿದೆ ಎಂಬುದು ಅರಿವಿಗೆ ಬಂದಿತು. ಎರಡೇ ಸಾಲಿನಲ್ಲಿ ಹೇಳುವುದು ಹಳೆಯ ರೀತಿ ಎನ್ನಿಸಬಹುದು. ಕೆಲವೆಡೆ ದ್ವಿಪಕ್ಷೀಯ, ಮತ್ತೆ ಕೆಲವೆಡೆ ತ್ರಿಕೋನ, ಇನ್ನು ಕೆಲವೆಡೆ ಒಂದೇ ಪಕ್ಷದ ಬೆಂಬಲಿಗರದ್ದೇ ಪ್ರಾಬಲ್ಯ ಎನ್ನುವಂತಿದೆ. ಇದು ಈಗಿನ ಚಿತ್ರಣ. ಮತದಾನ ದಿನದಂದು ಲೆಕ್ಕಾಚಾರ ಹೇಗೂ ಆಗಬಹುದು.

ನಾಡ: ತ್ರಿಕೋನ ಸ್ಪರ್ಧೆ
ನಾಡಗುಡ್ಡೆಯಂಗಡಿಯಿಂದ ಸೇನಾಪುರ ಗ್ರಾಮ ಬೇರ್ಪಟ್ಟಿದ್ದು, ಇದರಿಂದ 25 ಸದಸ್ಯ ಬಲದ ಪಂ.ನಲ್ಲಿ ಈಗ 19 ಸದಸ್ಯ ಸ್ಥಾನಗಳಷ್ಟೇ ಉಳಿದಿವೆ. 4 ವಾರ್ಡ್‌ಗಳಿವೆ. ಕಳೆದ ಬಾರಿ 13ರಲ್ಲಿ ಕಾಂಗ್ರೆಸ್‌, 8 ರಲ್ಲಿ ಬಿಜೆಪಿ ಹಾಗೂ 4ರಲ್ಲಿ ಕಮ್ಯೂನಿಸ್ಟ್‌ ಬೆಂಬಲಿತರು ಗೆದ್ದಿದ್ದರು. ಈ ಬಾರಿಯೂ ಹೆಚ್ಚಿನ ಕಡೆಗಳಲ್ಲಿ ಕಮ್ಯೂನಿಸ್ಟ್‌ ಪಕ್ಷದ ಬೆಂಬಲಿತರಿದ್ದಾರೆ. ಹಾಗಾಗಿ ತ್ರಿಕೋನ ಸ್ಪರ್ಧೆಯೂ ಆಗಬಹುದು. ಬಿಜೆಪಿಗೆ ಬಂಡಾಯದ ಬಿಸಿ ತಟ್ಟುವಂತಿದೆ. ಕೆಲವರು ಕಾಂಗ್ರೆಸ್‌ನತ್ತ ಮುಖ ಹಾಕಿ ಕುಳಿತಿ ದ್ದಾರೆ. ಪ್ರಮುಖ ರಸ್ತೆಗಳು ಹದಗೆಟ್ಟು ದುರಸ್ತಿಯಾಗದಿರುವ ಕಾರಣ ಗ್ರಾಮಸ್ಥರಲ್ಲಿ ಅಸಮಾಧಾನ ಕಂಡು ಬರುತ್ತಿದೆ.

ಕಾಲ್ತೊಡು ಕಥೆ ಕೇಳ್ಳೋಣ
ಕಾಲ್ತೊಡು ಗ್ರಾ.ಪಂ. ವ್ಯಾಪ್ತಿ ಯಲ್ಲಿ 5 ವಾರ್ಡ್‌ಗಳಿದ್ದು, 13 ಸದಸ್ಯ ಸ್ಥಾನಗಳಿವೆ. ಕಳೆದ ಬಾರಿ ಇಲ್ಲಿ 11 ರಲ್ಲಿ ಕಾಂಗ್ರೆಸ್‌ ಹಾಗೂ ಇಬ್ಬರು ಬಿಜೆಪಿ ಬೆಂಬಲಿತರು ಚುನಾಯಿತರಾಗಿದ್ದರು. ಈ ಬಾರಿ ಕಾಂಗ್ರೆಸ್‌ ಅಧಿಕಾರವನ್ನು ಉಳಿಸಲು ಕಾರ್ಯತಂತ್ರ ರೂಪಿಸಿದೆ. ಬಿಜೆಪಿ ಅದರ ವಿರುದ್ಧ ರಣತಂತ್ರ ಹೆಣೆಯುತ್ತಿದೆ. ತಾಲೂಕು ಕೇಂದ್ರವಾದ ಬೈಂದೂರಿನಿಂದ ಕಾಲೊ¤àಡಿಗೆ ನೇರ ಬಸ್‌ ಸಂಪರ್ಕವಿಲ್ಲ. ಗ್ರಾಮೀಣ ರಸ್ತೆಗಳು ಹಾಳಾಗಿವೆ. ಡೀಮ್ಡ್ ಫಾರೆಸ್ಟ್‌ನಿಂದ ಹಕ್ಕುಪತ್ರ ಸಿಗುತ್ತಿಲ್ಲ.

ಹೇರೂರು: ಸಮಸ್ಯೆ- ಸಂಕಷ್ಟ
ಹೇರೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 5 ವಾರ್ಡ್‌ಗಳಿದ್ದು, 13 ಸದಸ್ಯ ಸ್ಥಾನಗಳಿವೆ. ಕಳೆದ ಬಾರಿ 9 ರಲ್ಲಿ ಕಾಂಗ್ರೆಸ್‌ ಹಾಗೂ 4 ರಲ್ಲಿ ಬಿಜೆಪಿ ಬೆಂಬಲಿತರು ಗೆದ್ದಿದ್ದರು. ಈ ಬಾರಿಯೂ ಈ ಎರಡು ಪಕ್ಷಗಳ ಬೆಂಬಲಿತರ ಮಧ್ಯೆಯೇ ಪೈಪೋಟಿ ಇದ್ದಂತಿದೆ. ಹೇರೂರು ಗ್ರಾಮದ ಯರುಕೋಣೆಯಲ್ಲಿನ ಅಂಗನವಾಡಿ ಕಟ್ಟಡ ಬಿದ್ದು, 15 ವರ್ಷಗಳಾಗಿವೆ. ಮನವಿ ಸಲ್ಲಿಸಿದರೂ ಪುನರ್‌ ನಿರ್ಮಾಣಗೊಂಡಿಲ್ಲ. ಈ ಅಂಗನವಾಡಿ ಕೇಂದ್ರವನ್ನು ಪೇಟೆಯಿಂದ ಸುಮಾರು 4 ಕಿ.ಮೀ. ದೂರದ ಆಲಗದ್ದೆ ಕೇರಿಗೆ ಸ್ಥಳಾಂತರಿಸಲಾಗಿದೆ. ಈ ಸಮಸ್ಯೆ ಬಗೆಹರಿಯಬೇಕು. ಉಳಿದಂತೆ ರಸ್ತೆ ಸಮಸ್ಯೆ ಇದ್ದದ್ದೆ.

ಕೆರ್ಗಾಲು: ಮುಂದುವರಿಯುವುದೇ ಪ್ರಾಬಲ್ಯ?
ಕೆರ್ಗಾಲು ಹಾಗೂ ನಂದನವನ ಗ್ರಾಮಗಳನ್ನೊಳಗೊಂಡ ಗ್ರಾ.ಪಂಚಾಯತೇ ಕೆರ್ಗಾಲು. ಇಲ್ಲಿ 4 ವಾರ್ಡ್‌ಗಳಿದ್ದು, 12 ಸದಸ್ಯ ಸ್ಥಾನಗಳಿವೆ. 2015ರ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್‌ ಬೆಂಬಲಿತರು ಎಲ್ಲವನ್ನೂ ಗೆದ್ದಿದ್ದರು. ಈ ಬಾರಿಯೂ ಅದೇ ಹುಮ್ಮಸ್ಸು ಕಾಂಗ್ರೆಸ್‌ಗೆ. ಆದರೆ ಬಿಜೆಪಿಯೂ ಚೆಕ್‌ವೆುàಟ್‌ ಕೊಡಲು ಸಿದ್ಧವಾಗುತ್ತಿದೆ. ಕಳೆದ ಬಾರಿ ಪಕ್ಷೇತರರಾಗಿ ಗೆದ್ದು, ಬಳಿಕ ಕಾಂಗ್ರೆಸ್‌ ಬೆಂಬಲಿಸಿದವರೊಬ್ಬರು ಈಗ ಬಿಜೆಪಿ ಪಾಳಯದಲ್ಲಿದ್ದಾರೆ. ಪಡಿತರಕ್ಕಾಗಿ ಕಿ.ಮೀ. ಗಟ್ಟಲೇ ಅಲೆಯಬೇಕಾದ ಸ್ಥಿತಿ ಗ್ರಾಮಸ್ಥರದ್ದು.

ಕಿರಿಮಂಜೇಶ್ವರ: ಒಂದೆಡೆ ಪಕ್ಷೇತರರ ಕಾರುಬಾರು
ಕಿರಿಮಂಜೇಶ್ವರದಲ್ಲಿ 5 ವಾರ್ಡ್‌ಗಳಿದ್ದು, 19 ಸದಸ್ಯ ಸ್ಥಾನಗಳಿವೆ. ಕಳೆದ ಬಾರಿ 17 ಕಡೆ ಬಿಜೆಪಿ ಹಾಗೂ ಎರಡರಲ್ಲಿ ಕಾಂಗ್ರೆಸ್‌ ಬೆಂಬಲಿತರು ಗೆದ್ದಿದ್ದರು. ಈ ಬಾರಿ ಎಲ್ಲೆಡೆ ಎರಡು ಪಕ್ಷಗಳ ಮಧ್ಯೆ ಸ್ಪರ್ಧೆಯ ಲಕ್ಷಣವಿದ್ದು, ಒಂದು ವಾರ್ಡ್‌ನಲ್ಲಿ ಮಾತ್ರ 3-4 ಪಕ್ಷೇತರರು ಸ್ಪರ್ಧಿಸಿ ಕುತೂಹಲ ಮೂಡಿಸಿದ್ದಾರೆ. ಇಲ್ಲಿ ಕೊಡೇರಿ ಮೀನುಗಾರಿಕಾ ಬಂದರು ಸಮಸ್ಯೆ, ಮೀನು ಮಾರಾಟದ ಸಮಸ್ಯೆ ಪ್ರಮುಖವಾಗಿದೆ.

ಮರವಂತೆ: ತ್ರಿಕೋನ ಹಣಾಹಣಿ
ಮರವಂತೆಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ – ಬಿಜೆಪಿ- ಸ್ವಾಭಿಮಾನಿ ಪಕ್ಷೇತರ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಡುವಂತಿದೆ. 5 ವಾರ್ಡ್‌ಗಳಿದ್ದು, 14 ಸದಸ್ಯ ಸ್ಥಾನಗಳಿವೆ. ಕಳೆದ ಬಾರಿ 13ರಲ್ಲಿ ಬಿಜೆಪಿ ಬೆಂಬಲಿತರು ಜಯಗಳಿಸಿದ್ದರೆ, ಒಂದು ಕಡೆ ಕಾಂಗ್ರೆಸ್‌ ಬೆಂಬಲಿತರು ಅವಿರೋಧವಾಗಿ ಆಯ್ಕೆ ಯಾಗಿದ್ದರು. ಈ ಬಾರಿ ಸ್ವಾಭಿಮಾನಿ ಪಕ್ಷೇತರ ಸಹ ಅಖಾಡಕ್ಕಿಳಿದಿದ್ದು, ಎಲ್ಲ ಕಡೆಗಳಲ್ಲಿ ತನ್ನ ಬೆಂಬಲಿತರನ್ನು ಕಣಕ್ಕಿಳಿಸಿದೆ. ಮೀನುಗಾರಿಕಾ ರಸ್ತೆ ಅವ್ಯವಸ್ಥೆ, ಬಂದರು ಸಮಸ್ಯೆ ಪ್ರಮುಖ.

ಕಂಬದಕೋಣೆ: ನೇರ ಹಣಾಹಣಿ
ಕಂಬದಕೋಣೆಯಲ್ಲಿ ಈ ಬಾರಿ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ಸಾಧ್ಯತೆ ಹೆಚ್ಚಿದೆ. ಇಲ್ಲಿ 5 ವಾರ್ಡ್‌ಗಳಿದ್ದು, 13 ಸದಸ್ಯ ಸ್ಥಾನಗಳಿವೆ. ಕಳೆದ ಬಾರಿ 12ರಲ್ಲಿ ಗೆದ್ದ ಕಾಂಗ್ರೆಸ್‌ ಬೆಂಬಲಿತರು ಗದ್ದುಗೆಗೆ ಏರಿದ್ದರು. 1 ಬಿಜೆಪಿ ಬೆಂಬಲಿತರ ಪಾಲಾಗಿತ್ತು. ಈ ಬಾರಿ ಬಿಜೆಪಿ ಹಲವೆಡೆ ಪೈಪೋಟಿ ಕೊಡಲು ಸಿದ್ಧತೆ ನಡೆಸಿದೆ. ನೀರಿನ ಸಮಸ್ಯೆ ಒಂದಾದರೆ, ಇಲ್ಲಿರುವ ದಲಿತ ಸಮುದಾಯದವರಿಗೆ ಹಕ್ಕುಪತ್ರ, ಮೂಲ ಸೌಕರ್ಯ ಒದಗಿಸಿಲ್ಲ ಎಂಬ ಕೂಗು ಕೇಳಿಬರುತ್ತಿದೆ.

ನಾವುಂದ: ದ್ವಿಪಕ್ಷೀಯ ಸ್ಪರ್ಧೆ
ನಾವುಂದದಲ್ಲಿ 5 ವಾರ್ಡ್‌ಗಳಿದ್ದು, 15 ಸದಸ್ಯ ಸ್ಥಾನ ಗಳಿವೆ. ಕಳೆದ ಬಾರಿ 9 ರಲ್ಲಿ ಬಿಜೆಪಿ ಹಾಗೂ 6 ರಲ್ಲಿ ಕಾಂಗ್ರೆಸ್‌ ಬೆಂಬಲಿತರು ಜಯಗಳಿಸಿದ್ದರು. ಇಲ್ಲಿ ಈ ಬಾರಿಯೂ ದ್ವಿಪಕ್ಷೀಯ ಸ್ಪರ್ಧೆ ಏರ್ಪಟ್ಟಿದೆ. ಪ್ರಮುಖ ವಾಗಿ ಮಳೆಗಾಲದಲ್ಲಿ ಸಾಲುºಡಾ ಮತ್ತಿತರ ಪ್ರದೇಶ ಗಳು ನೆರೆಗೆ ತುತ್ತಾಗುತ್ತಿದ್ದು, ಇದಕ್ಕೊಂದು ಶಾಶ್ವತ ಪರಿಹಾರ ಬೇಕಿದೆ ಎನ್ನುವುದು ಗ್ರಾಮಸ್ಥರ ಬೇಡಿಕೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.