ವಿಜಯಪುರ ಜಿಲ್ಲೆಯಲ್ಲಿ ಮುಂದುವರೆದ ಸಾರಿಗೆ ನೌಕರರ ಮುಷ್ಕರ: ಬಾಡಿಗೆ ವಾಹನಗಳಿಗೆ ಭಾರಿ ಬೇಡಿಕೆ
Team Udayavani, Dec 12, 2020, 9:04 AM IST
ವಿಜಯಪುರ: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಅಹೋರಾತ್ರಿ ಮುಷ್ಕರ ಮುಂದು ವರೆಸಿದ್ದಾರೆ. ಎರಡನೇ ದಿನವಾದ ಶನಿವಾರ ನಿಲ್ದಾಣದಲ್ಲೇ ಉಪಹಾರ – ಊಟ ತಯಾರಿಸಿ ಹೋರಾಟ ಇನ್ನೂ ಬಲಿಷ್ಠವಾಗಿಸಲು ಮುಂದಾಗಿದ್ದಾರೆ. ಖಾಸಗಿ ವಾಹನಗಳು ವಸೂಲಿಗೆ ಇಳಿದಿದ್ದರೆ, ಬಾಡಿಗೆ ಕಾರಿಗಳಿಗೆ ಭಾರಿ ಬೇಡಿಕೆ ಬಂದಿದೆ.
ಸಾರಿಗೆ ಸಂಸ್ಥೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ನಗರ ಸಾರಿಗೆ ಸೇವೆಯೂ ಬಂದ್ ಆಗಿದ್ದು, ಬಸ್ ಗಳು ರಸ್ತೆಗೆ ಇಳಿದಿಲ್ಲ. ಪರಿಣಾಮ ಆಟೋ ಚಾಲಕರು ಜನರಿಂದ ಮನಬಂದಂತೆ ಹಣ ವಸೂಲಿಗೆ ಮುಂದಾಗಿದ್ದಾರೆ. ದೂರದ ಊರುಗಳಿಗೆ ತುರ್ತು ಪ್ರಯಾಣ ಮಾಡಬೇಕಾದವರು ಸಾರಿಗೆ ಸಂಸ್ಥೆ ಬಸ್ ಸಂಚಾರ ಇಲ್ಲದ ಕಾರಣ ಬಾಡಿಗೆ ಕಾರುಗಳ ಮೂಲಕ ಪ್ರಯಾಣ ಮುಂದುವರೆಸಿದ್ದಾರೆ. ಆರ್ಥಿಕ ಶಕ್ತಿ ಇಲ್ಲದವರು ಪರದಾಡುವಂತಾಗಿದೆ.
ಇದನ್ನೂ ಓದಿ:ಫೇಸ್ಬುಕ್ ಮೇಸೆಂಜರ್ ಬಳಕೆಯಲ್ಲಿ ಶೇ. 50 ಹೆಚ್ಚಳ: ಲೈವ್ ವೀಡಿಯೋ ಶೇ. 60ರಷ್ಟು ಏರಿಕೆ
ಬಸವನಬಾಗೇವಾಡಿ, ಸಿಂದಗಿ,ಇಂಡಿ, ಚಡಚಣ, ಬಬಲೇಶ್ವರ, ಕೊಲ್ಹಾರ, ಮುದ್ದೇಬಿಹಾಳ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಮುಷ್ಕರ ಜೋರಾಗಿದೆ. ಪರಿಣಾಮ ಪ್ರಯಾಣಿಕರಿಲ್ಲದ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ.
ಮುದ್ದೇಬಿಹಾಳ ಸೇರಿದಂತೆ ಇತರೆ ಬಸ್ ನಿಲ್ದಾಣಗಳಲ್ಲಿ ಬಸ್ ಸೇವೆ ಸಂಪೂರ್ಣ ಸ್ಥಗಿತ ಮಾಡಿದ್ದಾರೆ.
ಶನಿವಾರ ಚಾಲಕರು, ನಿರ್ವಾಹಕರು ಮಾತ್ರವಲ್ಲ ತಾಂತ್ರಿಕ ಸಿಬ್ಬಂದಿಯೂ ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಅಲ್ಲದೇ ಮುಷ್ಕರದಲ್ಲಿ ಪಾಲ್ಗೊಳ್ಳುವ ಮೂಲಕ ಹೋರಾಟ ಬಿರುಸುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ