ಮುಂದುವರಿದ ಮುಷ್ಕರ: ಖಾಸಗಿ ಚಾಲಕರಿಂದ ಬಸ್ ಸಂಚಾರಕ್ಕೆ ಸರಕಾರ ನಿರ್ಧಾರ
Team Udayavani, Dec 12, 2020, 10:06 AM IST
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಶನಿವಾರವೂ ಮುಂದುವರಿದಿದ್ದು, ಬಸ್ಗಳ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆಯೂ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿಯ ಕೆಲ ಬಸ್ಗಳು ರಸ್ತೆಗೆ ಇಳಿದಿವೆ.
ಕೆಎಸ್ಆರ್ಟಿಸಿಯ 93 ಮತ್ತು ಬಿಎಂಟಿಸಿಯ 55 ಬಸ್ಗಳು ಕಾರ್ಯಾಚರಣೆ ಆರಂಭಿಸಿವೆ. ಮಂಗಳೂರು ವಿಭಾಗದಲ್ಲಿ 87, ಶಿವಮೊಗ್ಗದಲ್ಲಿ 3, ದಾವಣಗೆರೆ 2 ಮತ್ತು ಚಿತ್ರದುರ್ಗ ವಿಭಾಗದಿಂದ 1 ಬಸ್ ಕಾರ್ಯಾಚರಣೆ ಮಾಡಿದೆ. ಬೆಳಿಗ್ಗೆ 8ರ ವೇಳೆಗೆ ಉಳಿದ ವಿಭಾಗಗಳಲ್ಲಿ ಯಾವುದೇ ಬಾಸ್ ಕಾರ್ಯಾಚರಣೆ ಆಗಿಲ್ಲ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಮುಷ್ಕರ ವಿರೋಧಿಸುತ್ತಿರುವ ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದಾರೆ. ಅವರ ಜತೆಗೆ ನಿರ್ವಾಹಕ ಮತ್ತು ಚಾಲಕ ಹುದ್ದೆಯಿಂದ ಸಂಚಾರ ನಿಯಂತ್ರಕ(ಟಿ.ಸಿ) ಹುದ್ದೆಗೆ ಬಡ್ತಿ ಹೊಂದಿದವರನ್ನು ಕಾರ್ಯಾಚರಣೆಗೆ ಇಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘ಸಂಸ್ಥೆಯ ಸಿಬ್ಬಂದಿ ಅಲ್ಲದ ಖಾಸಗಿ ಚಾಲಕರನ್ನು ಕರೆತಂದು ಬಸ್ ಕಾರ್ಯಾಚರಣೆಯನ್ನು ಅಧಿಕಾರಿಗಳು ಆರಂಭಿಸಿದ್ದಾರೆ. ನೌಕರರ ಜತೆ ಮಾತುಕತೆ ನಡೆಸಿ ಅಥವಾ ಬೇಡಿಕೆ ಈಡೇರಿಸಿ ವಿಶ್ವಾಸ ಗಳಿಸುವ ಬದಲು ಸರ್ಕಾರ ವಾಮಮಾರ್ಗ ಹಿಡಿದಿದೆ. ಖಾಸಗಿ ಚಾಲಕರಿಂದ ಅಪಘಾತ ಸಂಭವಿಸಿ ಸಾವು–ನೋವುಗಳು ಉಂಟಾದರೆ ಅದಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ’ ಎಂದು ಪ್ರತಿಭಟನಾನಿರತ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್