ಧರ್ಮಸ್ಥಳ: ರಾಜ್ಯಾದ್ಯಂತ ಮುಷ್ಕರ, ಬಾಣಸಿಗರಾದ ಸಾರಿಗೆ ನೌಕರರು
Team Udayavani, Dec 12, 2020, 12:21 PM IST
ಬೆಳ್ತಂಗಡಿ: ಸಾರಿಗೆ ನೌಕರರನ್ನು ಸರಕಾರಿ ನೌಕರರಾಗಿ ಪರಿಗಣಿಸಬೇಕು ಎಂಬ ನೆಲೆಯಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡ ಮುಷ್ಕರದ ಹಿನ್ನೆಲೆ ಧರ್ಮಸ್ಥಳ ಡಿಪ್ಪೋದಿಂದ ಯಾವುದೇ ಬಸ್ ಓಡಾಟ ನಡೆಸದೆ ಮುಷ್ಕರವನ್ನು ಬೆಂಬಲಿಸಿದೆ.
ಪರಿಣಾಮ ಶನಿವಾರ ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ನಾನಾ ಕಡೆಯಿಂದ ಬಂದ ಭಕ್ತರು ಹಿಂದೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡಿದರು.
ಬಸ್ ನಿಲ್ದಾಣದಲ್ಲೇ ಉಪಹಾರ ವ್ಯವಸ್ಥೆ
ಶನಿವಾರ ಮುಷ್ಕರದಿಂದಾಗಿ ನೂರಾರು ಸಾರಿಗೆ ಸಿಬಂದಿ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಉಪಹಾರ ವ್ಯವಸ್ಥೆ ಮಾಡಿಕೊಂಡರು. ಚಾಲಕರ ನಿರ್ವಾಹಕರು ಸೌಟು ಹಿಡಿದು ಅಡುಗೆ ಸಿದ್ಧಪಡಿಸಿದ್ದಾರೆ. ನಿಲ್ದಾಣದಲ್ಲೇ ಪ್ರಯಾಣಿಕರಿಗು ಉಪಹಾರ ವ್ಯವಸ್ಥೆ ಮಾಡಿದರು.
ಎರಡನೇ ಶನಿವಾರವಾದ್ದರಿಂದ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಅಡಚಣೆಯಾಗಿದೆ. ವಿಶೇಷ ಬಸ್ ಗಳ ವ್ಯವಸ್ಥೆಯೂ ಸ್ಥಗಿತವಾಗಿದೆ.
ಶುಕ್ರವಾರ ಸಹಜ ಸ್ಥಿತಿಯಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಓಡಾಟವು ಶನಿವಾರ ನೌಕರರ ಮುಷ್ಕರ ಪರಿಣಾಮ ಸ್ಥಗಿತಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು