ಪ್ರವಾಸಿಗರು ದಿನಪೂರ್ತಿ ವಸ್ತು ಪ್ರದರ್ಶನ ವೀಕ್ಷಿಸುವಂತೆ ಯೋಜನೆ

ವಸ್ತು ಪ್ರದರ್ಶನವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವುದು ನನ್ನ ಗುರಿ

Team Udayavani, Dec 12, 2020, 3:53 PM IST

ಪ್ರವಾಸಿಗರು ದಿನಪೂರ್ತಿ ವಸ್ತು ಪ್ರದರ್ಶನ ವೀಕ್ಷಿಸುವಂತೆ ಯೋಜನೆ

ಮೈಸೂರು: 140 ವರ್ಷಗಳ ಸುದೀರ್ಘ‌ ಇತಿಹಾಸವಿರುವ ಹಾಗೂ ಚಾಮರಾಜ ಒಡೆಯರ್‌ ಕನಸಿನ ಕೂಸಾದ ಮೈಸೂರು ವಸ್ತು ಪ್ರದರ್ಶನವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡುಯ್ಯುವುದು ನನ್ನ ಹೆಬ್ಬಯಕೆ ಹಾಗೂ ಗುರಿಯಾಗಿದೆ.

ಇದು ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕವಾಗಿರುವ ಎ.ಹೇಮಂತ್‌ಕುಮಾರ್‌ ಗೌಡ ಅವರ ನುಡಿಗಳು. ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯ ಯೋಜನೆಗಳ ಬಗ್ಗೆ ಉದಯವಾಣಿಗೆ ಸಂದರ್ಶನ ನೀಡಿದ ಅವರು, ಪ್ರಾಧಿಕಾರಕ್ಕೆ ಹೊಸ ಆಯಾಮ ನೀಡುವ ಮೂಲಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.

ಕರ್ನಾಟಕ ವಸ್ತು ಪ್ರದರ್ಶನದ ಪ್ರಾಧಿಕಾರ ನಿಮ್ಮ ಯೋಜನೆಗಳೇನು? :

ನಗರದ ದೊಡ್ಡಕೆರೆ ಮೈದಾನದ ಬಳಿ 80 ಎಕರೆ ವಿಶಾಲ ಪ್ರದೇಶದಲ್ಲಿ ಇರುವ ಮೈಸೂರು ವಸ್ತು ಪ್ರದರ್ಶನಹಲವಾರು ಕಟ್ಟಡಗಳು, ಸೌಲಭ್ಯಗಳು ನಿರುಪಯುಕ ವಾಗಿವೆ. ಮಳೆಗಾಲದಲ್ಲಿ ರಾಜಕಾಲುವೆ ತುಂಬಿ ಹರಿಯುವುದರಿಂದ ವಸ್ತುಪ್ರದರ್ಶನ ಆವರಣಕೆರೆಯಂತಾಗುತ್ತದೆ. ಇದಕ್ಕೆಲ್ಲ ಶಾಸ್ವತ ಪರಿಹಾರ ಕ್ರಮ ಕೈಗೊಳ್ಳುವುದು, ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಮಾಡುವುದುಸೇರಿದಂತೆ ಅನೇಕ ಕೆಲಸ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆದು ನೆರವು ನೀಡುವಂತೆ ಮನವಿ ಮಾಡಲಾಗುವುದು. ವಸ್ತು ಪ್ರದರ್ಶನ ಚಾಮರಾಜ ಒಡೆಯರ್‌ ಕನಸಿನ ಕೂಸಾಗಿದ್ದು, ಇಂದುಈ ಮಟ್ಟಕ್ಕೆಬೆಳೆದು ನಿಂತಿದೆ. ಇದನ್ನು ವಿಶ್ವವಿಖ್ಯಾತಗೊಳಿಸುವುದು ನಮ್ಮ ಗುರಿ.

ವಸ್ತು ಪ್ರದರ್ಶನ ಅಭಿವೃದ್ಧಿಗೆ ಪ್ರೇರಣೆಯಾವುದು?  :

ನಾನು ಪ್ರವಾಸಿ ಪ್ರಿಯ, ಅದರಂತೆ ಅಭಿರುಚಿಗೆ ತಕ್ಕಂತೆ ಈ ಅಧಿಕಾರ ಸಿಕ್ಕಿದೆ. ಈಗಾಗಲೇ20ಕ್ಕೂ ಹೆಚ್ಚು ದೇಶಗಳಿಗೆ ಪ್ರವಾಸಮಾಡಿ,ಆದೇಶಗಳಲ್ಲಿರುವವಸ್ತುಪ್ರದರ್ಶನವನ್ನು ಗಮನಿಸಿದ್ದೇನೆ. ಅಲ್ಲಿಯಂತೆಯೇ ಮೈಸೂರಿನಲ್ಲೂ ವಸ್ತುಪ್ರದರ್ಶನವನ್ನು ಮೇಲ್ದರ್ಜೆಗೇರಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದು ನನ್ನ ಗುರಿ. ಹಾಂಕಾಂಗ್‌ ನಲ್ಲಿರುವಂತೆ ಇಲ್ಲಿಯೂ ಬೆಳಗ್ಗೆ ವಸ್ತು ಪ್ರದರ್ಶನಕ್ಕೆಕಾಲಿಟ್ಟವರು ಸಂಜೆವರೆಗೂಸುತ್ತಾಡುವಂತೆಮಾಡುವುದು ನನ್ನ ಕನಸು.ಇದಕ್ಕೆಸ್ಥಳೀಯ ಶಾಸಕರು,ಜನಪ್ರತಿನಿಧಿಗಳು, ಅಧಿಕಾರಿಗಳು ಬೆಂಬಲ ನೀಡುತ್ತದೆ ಎಂಬ ವಿಶ್ವಾಸವಿದೆ.

ರಾಜ್ಯದ ಇತರೆ ವಸ್ತು ಪ್ರದರ್ಶನಗಳ ಅಭಿವೃದ್ಧಿಗೆ ಕ್ರಮ ವಹಿಸಿದ್ದೀರ?

ಸದ್ಯಕ್ಕೆ ನಮ್ಮ ರಾಜ್ಯದ ಎಂಟು ಜಿಲ್ಲೆಗಳಲ್ಲಿ ವಸ್ತು ಪ್ರದರ್ಶನಗಳಿವೆ. ಅವುಗಳಲ್ಲಿ ಮೈಸೂರು ವಸ್ತು ಪ್ರದರ್ಶನ ಪ್ರಮುಖವಾದದ್ದು. ನಂತರ ಮಂಗಳೂರು, ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿರುವುದು ಸ್ವಲ್ಪ ದೊಡ್ಡದಿವೆ.ಇವುಗಳ ವಿಸ್ತರಣೆಗೆ ಮತ್ತು ಅಭಿವೃದ್ಧಿಗೆ ಸ್ಥಳೀಯ ಸಂಸ್ಥೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಜೊತೆಗೆ ಸಭೆ ನಡೆಸಲು ಚಿಂತನೆ ನಡೆಸಲಾಗಿದೆ.

ಆರ್ಥಿಕ ಸುಧಾರಣೆಗೆಕಾರ್ಯಕ್ರಮಗಳೇನು:

ಪ್ರತಿ ವರ್ಷ ದಸರಾದಲ್ಲಿ 3 ತಿಂಗಳು ವಸ್ತು ಪ್ರದರ್ಶನ ನಡೆಯುತ್ತಿತ್ತು. ಈ ವೇಳೆ12ರಿಂದ 13 ಲಕ್ಷ ಜನರು ಭೇಟಿನೀಡುತ್ತಿದ್ದರು. ವರ್ಷಕ್ಕೆ 8ರಿಂದ10ಕೋಟಿ ಆದಾಯವೂ ಬರುತ್ತಿತ್ತು. ಆದರೆ, ಕೊರೊನಾ ಹಿನ್ನೆಲೆಈಬಾರಿ ವಸ್ತುಪ್ರದರ್ಶನ ಆಯೋಜಿಸಿಲ್ಲ. ಮುಂದಿನ ವರ್ಷ ಮೈಸೂರು ಹಬ್ಬ ನಡೆದರೆ, ವಸ್ತು ಪ್ರದರ್ಶನ ಆರಂಭಿಸುವ ಚಿಂತನೆ ಇದೆ. ಜಿಲ್ಲಾ ಮಂತ್ರಿ, ಸಂಸದರು, ಶಾಸಕರು, ಅಧಿಕಾರಿಗಳ ಜೊತೆ ಸಭೆ ನಡೆಸಿ ಯೋಜನೆ ರೂಪಿಸಲಾಗುವುದು.

ಅರಮನೆ,ಬೆಟ್ಟದ ರೀತಿ ಇಲ್ಲಿಗೂಬರುವಂತೆ ಮಾಡಬೇಕಿದೆ :

ಪ್ರವಾಸಿಗರನ್ನು ಆಕರ್ಷಿಸಲುಕಾರ್ಯಯೋಜನೆ ರೂಪಿಸಿದ್ದೀರಾ?

ಮೈಸೂರಿಗೆ ಬರುವ ಪ್ರವಾಸಿಗರು ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟಕ್ಕೆ ಹೋಗಬೇಕು ಎಂಬ ಭಾವನೆ ಹೇಗೆ ಮೂಡುತ್ತದೆಯೋ ಹಾಗೆ ವಸ್ತು ಪ್ರದರ್ಶನಕ್ಕೂ ಭೇಟಿ ನೀಡಬೇಕು ಎಂದು ಹೇಳುವಂತಾಗಬೇಕು. ಅದಕ್ಕಾಗಿ ವರ್ಷವಿಡೀ ಇಲ್ಲಿ ಕರಕುಶಲ ಮೇಳ, ವಸ್ತು ಪ್ರದರ್ಶನ ಸೇರಿದಂತೆ ಮಕ್ಕಳ ಮನರಂಜನೆ ಸಂಬಂಧಿತ ಕಾರ್ಯಕ್ರಮಗಳು ನಡೆಯುವಂತೆ ಯೋಜನೆ ರೂಪಿಸಲಾಗುವುದು. ವಸ್ತು ಪ್ರದರ್ಶನಕ್ಕೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಮಗ್ರ ನೀಲನಕ್ಷೆ ರೂಪಿಸಿ ಹಂತ ಹಂತವಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸುವುದಲ್ಲದೇ, ಇಲ್ಲಿರುವ ಸಮಸ್ಯೆಗಳಿಗೆ ಶಾಶ್ವತಪರಿಹಾರಕಂಡುಕೊಳ್ಳಲುಮೊದಲ ಆದ್ಯತೆ ನೀಡುತ್ತೇನೆ.ಜೊತೆಗೆ ಸ್ವತ್ಛತೆ, ಹಸರೀಕರಣಕ್ಕೆ ಒತ್ತು ನೀಡಲಾಗುವುದು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎ.ಹೇಮಂತ್‌ಕುಮಾರ್‌ ಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.