ಜಿಲ್ಲೆಯಲ್ಲಿ ಬಿರುಸುಗೊಂಡ ಚುನಾವಣೆ ಕಾವು


Team Udayavani, Dec 12, 2020, 4:16 PM IST

ಜಿಲ್ಲೆಯಲ್ಲಿ ಬಿರುಸುಗೊಂಡ ಚುನಾವಣೆ ಕಾವು

ಸಾಂದರ್ಭಿಕ ಚಿತ್ರ

ಮಂಡ್ಯ: ಜಿಲ್ಲೆಯಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಜೋರಾಗಿದ್ದು, ಮೊದಲ ಹಂತದ ನಾಮಪತ್ರ ಸಲ್ಲಿಕೆ ಶುಕ್ರವಾರ ಮುಕ್ತಾಯಗೊಂಡಿದ್ದು, ಅದರಂತೆ 2ನೇ ಹಂತದ ಉಮೇದುವಾರಿಕೆ ಸಲ್ಲಿಕೆ ಪ್ರಾರಂಭಗೊಂಡಿದೆ.

ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳ 126 ಗ್ರಾಪಂಗಳ2011 ಸದಸ್ಯ ಸ್ಥಾನಗಳಿಗೆ ಮೊದಲ ಹಂತದ ಚುನಾ ವಣೆ ನಡೆಯುತ್ತಿದ್ದು, ಉಮೇದುವಾರಿಕೆ ಸಲ್ಲಿಕೆ ಮುಕ್ತಾಯಗೊಂಡಿದೆ.ಇದುವರೆಗೂಒಟ್ಟಾರೆ2067ಮಂದಿಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

2ನೇ ಹಂತಕ್ಕೆ ಅಧಿಸೂಚನೆ ಪ್ರಕಟ: ಎರಡನೇ ಹಂತದಲ್ಲಿ ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ ಹಾಗೂ ಕೆ.ಆರ್‌.ಪೇಟೆ ತಾಲೂಕುಗಳ 104 ಗ್ರಾಪಂಗಳ 1786 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅವರು ಚುನಾವಣಾಅಧಿಸೂಚನೆ ಹೊರಡಿಸಿದ್ದು, ಶುಕ್ರವಾರದಿಂದ ಉಮೇದುವಾರಿಕೆ ಸಲ್ಲಿಕೆ ಆರಂಭಗೊಂಡಿದೆ. ಶುಕ್ರವಾರ 100 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಅವಿರೋಧ ಆಯ್ಕೆಗೆ ಕಸರತ್ತು: ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಗಿದಿರುವುದರಿಂದ ಅವಿರೋಧ ಆಯ್ಕೆ ಹಾಗೂ ನಾಮಪತ್ರ ವಾಪಸ್‌ ಪಡೆಯುವ ಕುರಿತು ಚರ್ಚೆ, ಕಸರತ್ತುಗಳು ಆರಂಭಗೊಂಡಿವೆ. ಡಿ.14ರಂದು ನಾಮಪತ್ರ ವಾಪಸ್‌ ಪಡೆಯಲುಕೊನೆ ದಿನವಾಗಿದೆ. ಆದ್ದರಿಂದ ಪ್ರತಿ ಸ್ಪರ್ಧಿಯಿಂದನಾಮಪತ್ರ ವಾಪಸ್‌ ಪಡೆಯುವಂತೆ ಆಮಿಷ ಗಳು ಜೋರಾಗಿಯೇ ನಡೆಯುತ್ತಿದೆ. ಅಲ್ಲದೆ, ಅವಿರೋಧ ಆಯ್ಕೆಗೆ ಇನ್ನಿಲ್ಲದ ಸರ್ಕಸ್‌ಗಳು ನಡೆಸಲಾಗುತ್ತಿದೆ. ಬಹುತೇಕ ಮಂದಿಗೆ ಚುನಾವಣೆ ನಡೆಯುವುದು ಇಷ್ಟವಿಲ್ಲ. ಹಣ ನೀಡಿ ಅವಿರೋಧ ಆಯ್ಕೆ, ನಾಮಪತ್ರ ವಾಪಸ್‌ ತೆಗೆಸಲು ಮುಂದಾಗಿದ್ದಾರೆ.

ಬಹಿರಂಗ ಪ್ರಚಾರಕ್ಕೆ ಕೋವಿಡ್ ಅಡ್ಡಿ: ಮೊದಲ ಹಂತದ ಮಂಡ್ಯ, ಮದ್ದೂರು, ಮಳವಳ್ಳಿ ತಾಲೂಕುಗಳ ಗ್ರಾಪಂಗಳಿಗೆನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡಿದ್ದರಿಂದ ಬಹಿರಂಗಪ್ರಚಾರ ಇಂದಿನಿಂದ ಪ್ರಾರಂಭವಾಗಲಿದೆ. ಆದರೆ,ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಪ್ರಚಾರದಲ್ಲಿ ಕೇವಲ 5 ಮಂದಿಗೆ ಮಾತ್ರ ಅವಕಾಶನೀಡಿದೆ. ಪ್ರಚಾರದಲ್ಲಿ ಹೆಚ್ಚು ಜನರನ್ನುಸೇರಿಸುವಂತಿಲ್ಲ ಎಂದು ಹೇಳಿದೆ.

ಹೋಟೆಲ್‌, ಮದ್ಯದಂಗಡಿಗಳಲ್ಲಿ ಖಾತೆ ಓಪನ್‌: ಪ್ರಚಾರ ಕ್ಕಾಗಿ ಈಗಾಗಲೇ ಅಭ್ಯರ್ಥಿಗಳು ತಯಾರಿ ನಡೆಸಿದ್ದು, ತಮ್ಮ ಗ್ರಾಮಗಳಲ್ಲಿರುವ ಹೋಟೆಲ್‌ ಹಾಗೂ ಮದ್ಯದಂಗಡಿ ಗಳಲ್ಲಿ ಸಾಲದ ಖಾತೆ ಅಥವಾ ಮುಂಗಡ ಹಣ ನೀಡಿ ಊಟ, ತಿಂಡಿ ಹಾಗೂ ಮದ್ಯ ನೀಡುವಂತೆ ಅಭ್ಯರ್ಥಿಗಳು ಬುಕ್ಕಿಂಗ್‌ ಮಾಡಿ ದ್ದಾರೆ. ಕಾರ್ಯಕರ್ತರು, ಪ್ರಚಾರಕ್ಕೆ ಬರುವವರು ಹಾಗೂ ಮತದಾರರಿಗೆ ಕೇಳಿದ ಸಂದರ್ಭದಲ್ಲಿ ಊಟ, ತಿಂಡಿ ಹಾಗೂ ಮದ್ಯ ನೀಡುವಂತೆ ಮಾತುಕತೆಗಳು ನಡೆಯುತ್ತಿವೆ.

ಕಾಂಚಾಣ: ಸ್ಪರ್ಧೆಗೆ ಮಾಜಿ ಸದಸ್ಯರಹಿಂದೇಟು : ಪ್ರಸ್ತುತ ನಡೆಯುತ್ತಿರುವ ಗ್ರಾಪಂ ಚುನಾವಣೆ ಸದಸ್ಯ ಸ್ಥಾನಗಳಿಗೆ ಬೇಡಿಕೆ ಹೆಚ್ಚಿದ್ದು, ಲಕ್ಷ ಲಕ್ಷ ಹಣದ ವಹಿವಾಟುಗಳು ನಡೆಯುತ್ತಿರುವುದರಿಂದ ಕಳೆದ ಬಾರಿ ಗೆದ್ದಿದ್ದ ಬಹುತೇಕ ಮಾಜಿ ಸದಸ್ಯರು ಈ ಬಾರಿಯ ಚುನಾವಣೆ ಸ್ಪರ್ಧೆಯಿಂದ ಹಿಂದುಳಿದಿದ್ದಾರೆ. ಇನ್ನೂ ಕೆಲವರು ನಾವು ಹಣ ಖರ್ಚು ಮಾಡದಿದ್ದರೂ ಮತ ನೀಡಲಿದ್ದಾರೆ ಎಂಬ ಭರವಸೆ ಮೇಲೆ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಈ ಬಾರಿಯ ಚುನಾವಣೆಗೆ ಗೆಲ್ಲಬೇಕಾದರೆ ಲಕ್ಷಾಂತರ ರೂ. ಹಣ ಖರ್ಚು ಮಾಡಬೇಕು. ಹಣ ಇರುವವರು ಚುನಾವಣೆ ಮಾಡುತ್ತಾರೆ. ನಮಲ್ಲಿ ಅಷ್ಟೊಂದು ಹಣವಿಲ್ಲ. ಚುನಾವಣೆ ಬೇಡವೇ ಬೇಡ ಎಂದು ಗ್ರಾಪಂ ಮಾಜಿ ಸದಸ್ಯರೊಬ್ಬರು ಹೇಳಿದರು.

 

ಎಚ್‌.ಶಿವರಾಜು

ಟಾಪ್ ನ್ಯೂಸ್

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.