ನಮ್ಮ ಪ್ರತಿಭಟನೆಯಲ್ಲಿ ಯಾವುದೇ ದೇಶವಿರೋಧಿ ಶಕ್ತಿಗಳು ಸೇರಿಕೊಂಡಿಲ್ಲ: ಕಿಸಾನ್ ಯೂನಿಯನ್
ದಿಲ್ಲಿ-ಗಾಜಿಪುರ್ ಗಡಿಯಲ್ಲಿ ಪ್ರತಿಭಟನಾನಿರತ ರೈತರು ದೆಹಲಿಯತ್ತ ಕಾಲ್ನಡಿಗೆಯಲ್ಲಿ ತೆರಳಲು ಆರಂಭಿಸಿದೆ.
Team Udayavani, Dec 12, 2020, 6:48 PM IST
ನವದೆಹಲಿ:ಕೇಂದ್ರದ ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆ ಯಾವುದೇ ಸಮಾಜಘಾತುಕ ಶಕ್ತಿಗಳು ಸೇರಿಕೊಂಡಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯ್ಟ್ ಶನಿವಾರ(ಡಿ.12, 2020) ತಿಳಿಸಿದ್ದಾರೆ. ಒಂದು ವೇಳೆ ಕೇಂದ್ರ ಗುಪ್ತಚರ ದಳಕ್ಕೆ ಅಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅವರನ್ನು ಬಂಧಿಸಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಒಂದು ವೇಳೆ ರೈತರ ಪ್ರತಿಭಟನೆಯಲ್ಲಿ ದೇಶ ವಿರೋಧಿ ಶಕ್ತಿಗಳು ಶಾಮೀಲಾಗಿದ್ದು, ಕಂಡುಬಂದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಅವರನ್ನು ಸೆರೆ ಹಿಡಿಯಬೇಕು. ನಿಷೇಧಿತ ಸಂಘಟನೆಯ ಜನರು ರೈತರ ಜತೆ ಇದ್ದಿರುವ ಮಾಹಿತಿ ಇದ್ದರೆ ಕೂಡಲೇ ಕ್ರಮ ಕೈಗೊಳ್ಳಿ. ನಮಗೆ ಅಂತಹ ಯಾವುದೇ ವ್ಯಕ್ತಿಗಳು ಕಂಡು ಬಂದಿಲ್ಲ ಎಂದು ರಾಕೇಶ್ ತಿಳಿಸಿದ್ದಾರೆ.
ದಿಲ್ಲಿ-ಗಾಜಿಪುರ್ ಗಡಿಯಲ್ಲಿ ಪ್ರತಿಭಟನಾನಿರತ ರೈತರು ದೆಹಲಿಯತ್ತ ಕಾಲ್ನಡಿಗೆಯಲ್ಲಿ ತೆರಳಲು ಆರಂಭಿಸಿದೆ. ನಮ್ಮ ಅಹವಾಲನ್ನು ಆಲಿಸಿ ಎಂಬ ಸಂದೇಶವನ್ನು ನಾವು ಸರ್ಕಾರಕ್ಕೆ ಕಳುಹಿಸಬೇಕಾಗಿದೆ ಎಂದು ತಿಳಿಸಿದರು.
ಕೇಂದ್ರದ ಮೂರು ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಪಂಜಾಬ್, ಹರ್ಯಾಣ ರೈತರು ದೆಹಲಿಯ ವಿವಿಧ ಗಡಿಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆ ಶನಿವಾರ(ಡಿ.12, 2020) 17ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಮತ್ತು ರೈತರ ನಡುವಿನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ