ಶುಲ್ಕ ವಸೂಲಿ: ಖಾಸಗಿ ಶಾಲೆಗಳ ವಿರುದ್ಧ ಹೆತ್ತವರಿಂದ ಪ್ರತಿಭಟನೆ


Team Udayavani, Dec 13, 2020, 8:06 PM IST

ಶುಲ್ಕ ವಸೂಲಿ: ಖಾಸಗಿ ಶಾಲೆಗಳ ವಿರುದ್ಧ ಹೆತ್ತವರಿಂದ ಪ್ರತಿಭಟನೆ

ಪುಣೆ, ಡಿ. 12: ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪುಣೆಯಲ್ಲಿ ಹೆತ್ತವರ ಸಂಘವು ಕೇಂದ್ರ ಶಿಕ್ಷಣ ಇಲಾಖೆಯ ಕಟ್ಟಡದ ಮುಂಭಾಗದಲ್ಲಿ  ಪ್ರತಿಭಟನೆ ನಡೆಸಿತು.

ಇಂಡಿಯಾ ವೈಡ್‌ ಪಾಲಕರ ಸಂಘದ ಅಧ್ಯಕ್ಷ, ನ್ಯಾಯವಾದಿ ಅನುಭಾ ಸಹೈ ಮಾತನಾಡಿ, ಶಾಲೆಗಳು ಶಿಕ್ಷಣದ ಹಕ್ಕುಗಳ (ಆರ್‌ಟಿಇ) ನಿಯಮಗಳನ್ನು ಉಲ್ಲಂಘಿಸಿದ್ದು, ಹೆತ್ತವರು ಎದುರಿಸುತ್ತಿರುವ ಸಮಸ್ಯೆಗಳನ್ನು ಶಿಕ್ಷಣ ಇಲಾಖೆ ಗಮನಿಸಬೇಕು. ನಮ್ಮ ಸಮಸ್ಯೆಗಳಿಗೆ ಪರಿಹಾರಗಳನ್ನು ಬಯಸುತ್ತೇವೆ. ಅನೇಕ ಹೆತ್ತವರು ವೇತನ ಕಡಿತ ಮತ್ತು ಉದ್ಯೋಗ ಕಳೆದುಕೊಂಡು ಸಮಸ್ಯೆ ಎದುರಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗದಿಂದಾಗಿ ಹೆಚ್ಚಿನ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಂದ ಪಡೆಯುತ್ತಿಲ್ಲ. ಈ ಸಂದರ್ಭದಲ್ಲಿ ನಾವು ದೊಡ್ಡ ಪ್ರಮಾಣದ ಶುಲ್ಕವನ್ನು ಪಾವತಿಸಬಹುದೆಂದು ಶಿಕ್ಷಣ ಸಂಸ್ಥೆಗಳು ಹೇಗೆ ನಿರೀಕ್ಷಿಸಲು ಸಾಧ್ಯ. ಬೋಧನ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯುವಂತೆ ಆಗ್ರಹಿಸಿದರು.

ಬೋಧನಾ ಶುಲ್ಕ ಮಾತ್ರ ಪಡೆಯಲಿ :

ಹೆತ್ತವರು ಎದುರಿಸುತ್ತಿರುವ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಪುಣೆಯ ಪೋಷಕರ ಸಂಘದ ಕಾಳಿದಾಸ್‌ ಜಾಧವ್‌ ಹೇಳಿದರು. ಶಾಲೆಗಳು ಇಡೀ ವರ್ಷದ ಶುಲ್ಕವನ್ನು ಪಾವತಿಸಲು

ಹೆತ್ತವರನ್ನು ಆಗ್ರಹಿಸುತ್ತಿವೆ. ವಿದ್ಯಾರ್ಥಿ ಗಳು ಬಳಸುತ್ತಿರುವ ಸೇವೆಗಳಿಗೆ ಮಾತ್ರ ಶುಲ್ಕ ಪಾವತಿ ಸಬೇಕು. ಅದು ಬೋಧನಾ ಶುಲ್ಕವಾಗಿದೆ. ಯಾವುದೇ ವಿದ್ಯಾರ್ಥಿಯು ಶೈಕ್ಷಣಿಕ ಪಠ್ಯಕ್ರಮವನ್ನು ಕಳೆದುಕೊಳ್ಳದಂತೆ ಈ  ವರ್ಷವನ್ನು ಶೂನ್ಯ ವರ್ಷವೆಂದು ಘೋಷಿಸಬೇಕು ಎಂದು  ಆಗ್ರಹಿಸುತ್ತಿದ್ದೇವೆ ಎಂದು ಅವರು ಹೇಳಿದರು

ಸರಕಾರಿ ಶಾಲೆಗಳಲ್ಲಿ  ಗುಣಮಟ್ಟದ ಶಿಕ್ಷಣಕ್ಕೆ ಆಗ್ರಹ :

ಸರಕಾರಿ ಶಾಲೆಗಳು ಉತ್ತಮ ವಾಗಿದ್ದರೆ ನಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಅಗತ್ಯವಿಲ್ಲ ಎಂದು ಹೆತ್ತವರಾದ ಲಕ್ಷ್ಮೀ ಸಪRಲ್‌ ಹೇಳಿದರು. ನಾವು ಸರಕಾರಿ ಶಾಲೆಗಳಿಗೆ ಅಗತ್ಯವಾದ ಶುಲ್ಕವನ್ನು ನೀಡಲು ಸಿದ್ಧರಿದ್ದೇವೆ. ಅವರು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಬೇಕು. ಮಕ್ಕಳಿಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಬೇಕು. ಇದರಿಂದಾಗಿ ಮಗುವಿನ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಮಕ್ಕಳಿಗೆ ಕಿರುಕುಳ ಸಲ್ಲದು :

ಶಾಲೆಯು ಗ್ರಂಥಾಲಯಗಳು ಮತ್ತು ಕ್ರೀಡೆಗಳಿಗೆ ಶುಲ್ಕ ವಿಧಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ಹೆತ್ತವರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇಡೀ ವರ್ಷ ಶುಲ್ಕವನ್ನು ಪಾವತಿಸಲು ಆಗ್ರಹಿಸು ತ್ತಿದ್ದಾರೆ. ಇದಕ್ಕೆ ಒಪ್ಪದಿ ದ್ದಾಗ ಆನ್‌ಲೈನ್‌ ತರಗತಿಗಳ ಸಮಯದಲ್ಲಿ ನಮ್ಮ ಮಕ್ಕಳಿಗೆ ಕಿರುಕುಳ ನೀಡಲಾಗುತ್ತದೆ ಎಂದು ಹೆತ್ತವರು ಆರೋಪಿಸಿದರು.

ಕಠಿನ ಕ್ರಮ:ದಿನಕರ್‌ ತೆಮ್ಕರ್‌ :

ಪ್ರಾಥಮಿಕ ಶಿಕ್ಷಣದ ಜಂಟಿ ನಿರ್ದೇಶಕ ದಿನಕರ್‌ ತೆಮ್ಕರ್‌ ಮಾತನಾಡಿ, ಶೀಘ್ರದಲ್ಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೆತ್ತವರಿಗೆ ಭರವಸೆ ನೀಡಲಾಗಿದೆ. ಪೂರ್ಣ ಶುಲ್ಕವನ್ನು ಪಾವತಿಸದ ಆಯ್ದ ವಿದ್ಯಾರ್ಥಿಗಳ ಆನ್‌ಲೈನ್‌ ಶಿಕ್ಷಣವನ್ನು ನಿಲ್ಲಿಸಿದ ಶಾಲೆಗಳು ಆನ್‌ಲೈನ್‌ ತರಗತಿಗಳನ್ನು ಪ್ರಾರಂಭಿಸಬೇಕು. ಸಾಂಕ್ರಾಮಿಕ ಸಮಯದಲ್ಲಿ ಖಾಸಗಿ ಶಾಲೆಗಳಿಂದ ತೆಗೆದುಹಾಕಲ್ಪಟ್ಟ ವಿದ್ಯಾರ್ಥಿಗಳನ್ನು ತತ್‌ಕ್ಷಣ ಶಾಲೆಗಳಿಗೆ ಸೇರಿಸಬೇಕು.  ಶೀಘ್ರದಲ್ಲೇ ನಾವು ಸಾಮಾನ್ಯ ನೋಟಿಸ್‌ಗಳನ್ನು ನೀಡಲಿದ್ದೇವೆ  ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.