ಬೆಳಗಾವಿ: ಪೊಲೀಸ್ ಭದ್ರತೆಯಲ್ಲಿ ಬಸ್ ಪುನರಾರಂಭ: ಹಿರಿಯ ಅಧಿಕಾರಿಗಳಿಂದ ಪರಿಶೀಲನೆ
Team Udayavani, Dec 14, 2020, 9:41 AM IST
ಬೆಳಗಾವಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗಳ ಕಾರ್ಯಾಚರಣೆ ಸೋಮವಾರ (ಡಿ.14) ಬೆಳಗ್ಗೆ ಪೊಲೀಸ್ ಭದ್ರತೆ ಮಧ್ಯೆ ಪುನರಾರಂಭಿಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಸರ್ಕಾರದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ. ಕೆ. ತ್ಯಾಗರಾಜನ್, ಎಸ್ ಪಿ ಲಕ್ಷ್ಮಣ ನಿಂಬರಗಿ ಸೋಮವಾರ ಬೆಳಗ್ಗೆ ಬಸ್ ನಿಲ್ದಾಣಕ್ಕೆ ಬಂದು ಕೆಲವು ನೌಕರರು ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.
ಈ ವೇಳೆ ನಿಲ್ದಾಣದಿಂದ ಹೊರಡುತ್ತಿರುವ ಬಸ್ ಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಹಿರಿಯ ಅಧಿಕಾರಿಗಳು ಬಸ್ ನಿಲ್ದಾಣದಲ್ಲಿ ಖುದ್ದಾಗಿ ನಿಂತು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿಯಿಂದ ಬೇರೆ ಬೇರೆ ಜಿಲ್ಲೆಗಳು ಹಾಗೂ ಅಂತರರಾಜ್ಯ ಬಸ್ ಸೇವೆ ಆರಂಭಗೊಂಡಿದ್ದು, ಪ್ರಯಾಣಿಕರು ಎಂದಿನಂತೆ ಕೇಂದ್ರ ಬಸ್ ನಿಲ್ದಾಣದಲ್ಲಿ ಕಂಡುಬರುತ್ತಿದ್ದಾರೆ.
ಇದನ್ನೂ ಓದಿ: ಪುಷ್ಪಗಿರಿ ತಪ್ಪಲಿನಲ್ಲೂ ಭಾರೀ ಶಬ್ಧ-ಕಂಪನ ವಿಸ್ತರಣೆ: ಮುಂದುವರೆದ ಕುತೂಹಲ !
ಪ್ರಯಾಣಿಕರು ಆತಂಕವಿಲ್ಲದೆ ಬಸ್ ಗಳಲ್ಲಿ ಪ್ರಯಾಣಿಸಬಹುದು. ಪೊಲೀಸ್ ಎಸ್ಕಾರ್ಟ್ ನಲ್ಲಿ ಬಸ್ ಗಳು ಹೊರಡುತ್ತಿವೆ. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಭದ್ರತೆ ನೀಡಲಿದ್ದಾರೆ ಎಂದು ಈ ವೇಳೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: 4ನೇ ದಿನಕ್ಕೆ ಕಾಲಿಟ್ಟ ಮುಷ್ಕರ: ಕೆಲವೆಡೆ ಬಸ್ ಸಂಚಾರ ಆರಂಭ, ಮುಂದುವರೆದ ಪ್ರಯಾಣಿಕರ ಪರದಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ