ಕೋಡಿಹಳ್ಳಿ ಅವರ ಹೋರಾಟದಲ್ಲಿ ರಾಜಕೀಯ ವಾಸನೆ ಇದೆ : ಸಂಸದೆ ಶೋಭಾ ಕರಂದ್ಲಾಜೆ ಕಿಡಿ
Team Udayavani, Dec 14, 2020, 5:05 PM IST
ಚಿಕ್ಕಮಗಳೂರು : ಕೋಡಿಹಳ್ಳಿ ಚಂದ್ರಶೇಖರ್ ಗೂ ಸಾರಿಗೆ ಸಂಸ್ಥೆ ಗೂ ಏನು ಸಂಬಂಧವಿದೆ.ಅವರು ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿರುವ ಕುರಿತು ಸಾರಿಗೆ ನೌಕರರು ಯೋಚನೆ ಮಾಡಬೇಕು. ಸಾರಿಗೆ ನೌಕರರ ಹೋರಾಟದಲ್ಲಿ ಖಾಸಗಿ ವ್ಯಕ್ತಿ ಬೇಡಿಕೆಯಿಡುವುದು ಸಂಶಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸಾರಿಗೆ ನೌಕರರ ಹೋರಾಟಕ್ಕೆ ನೇತೃತ್ವವಹಿಸಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಿಡಿಕಾಡಿದರು.ಕೋಡಿಹಳ್ಳಿ ಅವರ ಹೋರಾಟದಲ್ಲಿ ರಾಜಕೀಯ ವಾಸನೆ ಇದೆ. ಇದರ ಹಿಂದೆ ಕಾಂಗ್ರೆಸ್ ಇರುವ ಭೀತಿ ಹಾಗೂ ಸಂಶಯವಿದೆ.ಕೋಡಿಹಳ್ಳಿ ಚಂದ್ರಶೇಖರ್ ರೈತರ ಬಿಲ್ ಹಿಡಿದುಕೊಂಡು ಹೋರಾಟಕ್ಕೆ ಬಂದವರು,ಸಾರಿಗೆ ನೌಕರರ ಹೋರಾಟಕ್ಕೆ ಬೆಂಬಲ ನೀಡಿ ನೇತೃತ್ವವಹಿಸಿಕೊಂಡದ್ದರ ಹಿಂದೆ ಯಾವುದೋ ರಾಜಕೀಯ ಪಕ್ಷದ ಕೈವಾಡ ಇರಬಹುದೆಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಯಳಂದೂರಿನಲ್ಲೂ ‘ಪಂಚಲಿಂಗ ದರ್ಶನ’: ಐತಿಹ್ಯ ಸಾರುವ 450 ವರ್ಷಗಳ ‘ಬಳೇಮಂಟಪ’
ಕೋಡಿಹಳ್ಳಿ ರೈತರ ಬಗ್ಗೆ ಹೋರಾಟ ಮಾಡಿದರೆ ಗೌರವ ಇದೆ.ಆದರೆ ಇವತ್ತು ಸಾರಿಗೆ ನೌಕರರ ಹೋರಾಟಕ್ಕೆ ಬೆನ್ನುಲುಬಾಗಿ ನಿಂತಿರುವ ಹಿಂದೆ ಏನೋ ಒಂದು ಕಾರಣವಿರಬಹುದೆಂದರು. ಸಾರಿಗೆ ನೌಕಕರು ದಾರಿ ತಪ್ಪಬಾರದು. ನಿಮಗೂ ಒಂದು ಬದುಕಿದೆ. ನೌಕಕರೇ ನಿಮ್ಮನ್ನು ನಂಬಿಕೊಂಡು ನಿಮ್ಮ ಕುಟುಂಬ ಇದೆ. ಸರ್ಕಾರ ನಿಮ್ಮ ಜೊತೆ ಇದೆ ನೀವು ನೇರವಾಗಿ ಸಿಎಂ ಹಾಗೂ ಸಚಿವರ ಜೊತೆ ಮಾತಾನಾಡಿ ಸಮಸ್ಯೆ ಪರಿಹಾರಿಸಿಕೊಳ್ಳಬಹುದು. ಸಾರಿಗೆ ನಿಗಮ ನಷ್ಟ ವಾದರೆ ನಿಮಗೆ ತೊಂದರೆಯಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು