ಭೂ ದಾಖಲೆ ಇಲಾಖೆಗೆ ಸಿಬ್ಬಂದಿ ಕೊರತೆ


Team Udayavani, Dec 14, 2020, 6:51 PM IST

ಭೂ ದಾಖಲೆ ಇಲಾಖೆಗೆ ಸಿಬ್ಬಂದಿ ಕೊರತೆ

ರಾಯಚೂರು: ಭೂ ದಾಖಲೆಗಳ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿಉಳಿದಿರುವ ಕಾರಣ ಸಹಸ್ರಾರು ಅರ್ಜಿಗಳು ಬಾಕಿ ಉಳಿದಿದ್ದು, ಸಾರ್ವಜನಿಕರುತಿಂಗಳಾನುಗಟ್ಟಲೇ ಕಾಯುವಂತಾಗಿದೆ. ಕಚೇರಿಗಳಿಗೆ ಅಲೆದರೂ ಕೆಲಸ ಆಗದ ಸ್ಥಿತಿಯಿದ್ದು, ಇರುವ ಸಿಬ್ಬಂದಿಯಿಂದಲೇಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ.

ಜಿಲ್ಲೆಯ ಏಳು ತಾಲೂಕುಗಳಲ್ಲಿ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಭೂಮಿಗೆ ಸಂಬಂಧಿಸಿದ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಆದರೆ, ತಕ್ಷಣಕ್ಕೆ ಕಾರ್ಯೋನ್ಮುಖವಾಗಬೇಕಿದ್ದಇಲಾಖೆಗೆ ಸಿಬ್ಬಂದಿ ಸಮಸ್ಯೆ ತಲೆನೋವಾಗಿ ಪರಿಣಮಿಸಿದೆ.

ಜಿಲ್ಲೆಗೆ ಒಟ್ಟು ಮಂಜೂರಾದ 187 ಹುದ್ದೆಗಳಲ್ಲಿ ಈಗ 56 ಹುದ್ದೆಗಳು ಖಾಲಿ ಇವೆ.ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಕಾರ್ಯನಿರ್ವಾಹಕ) ಹುದ್ದೆಗಳು ಐದರಲ್ಲಿಎರಡು ಖಾಲಿ ಇವೆ. ಅಧೀಕ್ಷಕ ಹುದ್ದೆಗಳಲ್ಲಿ ಐದರಲ್ಲಿ ಒಂದು ಮಾತ್ರ ಭರ್ತಿಯಾಗಿದ್ದು, 4 ಖಾಲಿ ಇವೆ. ಆಡಳಿತ ವಿಭಾಗದಲ್ಲಿ ಒಂದು ಅಧೀಕ್ಷಕ ಹುದ್ದೆ ಮಂಜೂರಾಗಿದ್ದು, ಅದು ಖಾಲಿ ಇದೆ. 19 ತಪಾಸಕರಲ್ಲಿ 8 ಮಾತ್ರಭರ್ತಿಯಾಗಿದ್ದು, 11 ಖಾಲಿ ಇವೆ. 107 ಭೂಮಾಪಕ ಹುದ್ದೆಗಳಲ್ಲಿ 12 ಖಾಲಿ ಇವೆ.ಒಂದು ಪ್ರಥಮ ದರ್ಜೆ ಸಹಾಯಕ ಹುದ್ದೆ,ಒಂದು ದ್ವಿತೀಯ ದರ್ಜೆ ಸಹಾಯಕ, 24 ಬಾಂದು ಜವಾನ ಹುದ್ದೆಗಳು ಖಾಲಿ ಇವೆ.

ಮಸ್ಕಿ, ಸಿರವಾರ ಸಮಸ್ಯೆ: ಜಿಲ್ಲೆಯಲ್ಲಿಏಳು ತಾಲೂಕುಗಳಿದ್ದರೂ ಭೂ ದಾಖಲೆಗಳ ಇಲಾಖೆಗೆ ಮಾತ್ರ ಇನ್ನೂ ಐದೇ ತಾಲೂಕು ಲೆಕ್ಕದಲ್ಲಿವೆ. ಕಳೆದೆರಡು ವರ್ಷಗಳಿಂದ ಅಸ್ತಿತ್ವಕ್ಕೆ ಬಂದ ಮಸ್ಕಿ, ಸಿರವಾರ ತಾಲೂಕಿಗೆ ಸ್ವಂತ ಕಚೇರಿಗಳಿಲ್ಲ. ಎರಡು ತಾಲೂಕಿಗೆ ತಲಾ 15ರಂತೆ 30 ಸಿಬ್ಬಂದಿ ಬೇಕಿದೆ. ಆದರೆ, ಆಡಳಿತಾತ್ಮಕವಾಗಿ ವಿಂಗಡಣೆಗೊಂಡಿರುವ ಕಾರಣ ಅಲ್ಲಿನ ಕೆಲಸ ಕಾರ್ಯಗಳನ್ನು ಲಿಂಗಸುಗೂರು, ಮಾನ್ವಿ, ಸಿಂಧನೂರಿನ ಅಧಿಕಾರಿಗಳಿಗೆ ನಿಯೋಜಿಸಲಾಗಿದೆ. ಸಿರವಾರದ ಬಹುತೇಕ ಅರ್ಜಿ ಮಾನ್ವಿ ಅಧಿಕಾರಿಗಳಿಗೆ ಸುಪರ್ದಿಗೆ ಬಂದರೆ, ಮಸ್ಕಿಯದ್ದು ಮಾತ್ರ ತಲೆನೋವಾಗಿ ಪರಿಣಮಿಸಿದೆ. ಅತ್ತ ಸಿಂಧನೂರು ತಾಲೂಕು, ಲಿಂಗಸುಗೂರು ಮತ್ತು ಮಾನ್ವಿ ಮೂರು ತಾಲೂಕಿನ ವ್ಯಾಪ್ತಿಯ ಹಳ್ಳಿಗಳು ಇದರವ್ಯಾಪ್ತಿಗೆ ಬರುತ್ತಿರುವ ಸಿಬ್ಬಂದಿ ಮೂರು ತಾಲೂಕಿಗೆ ಅಲೆಯುವಂತಾಗಿದೆ.

ತಿದ್ದುಪಡಿ ಅರ್ಜಿಗಳೇ ಹೆಚ್ಚು ಬಾಕಿ: ವಿಭಾಗ, ಕ್ರಮ, ಉಡುಗೊರೆ, ಹದ್ದು ಬಸ್ತ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿವೆ. ಅದರಲ್ಲಿ ಪಹಣಿಗಳಲ್ಲಿರುವ ತಿದ್ದುಪಡಿ ಅರ್ಜಿಗಳೇ ಸಾಕಷ್ಟು ಬಾಕಿಉಳಿದಿವೆ. ಜಿಲ್ಲೆಯ ವಿವಿಧ ತಹಶೀಲ್ದಾರ್‌ ಲಾಗಿನ್‌ನಲ್ಲಿ 10,445 ಅರ್ಜಿಗಳು ಬಾಕಿಉಳಿದಿವೆ. ಅವುಗಳನ್ನು ತಹಶೀಲ್ದಾರ್‌ ಪರಿಶೀಲಿಸಿದ ನಂತರ ಮಾಪಕರ ಲಾಗಿನ್‌ಒಳಗೆ ಬರುತ್ತದೆ. ಎಲ್ಲ ಅರ್ಜಿಗಳು ಇತ್ಯರ್ಥಗೊಳ್ಳಬೇಕಾದರೆ ವರ್ಷಗಳೇಬೇಕಾಗಬಹುದು ಎನ್ನಲಾಗುತ್ತಿದೆ. ಇನ್ನೂ 11 ಇ ವಿಭಾಗದಲ್ಲಿ 19638, ಇ ಸ್ವತ್ತುವಿಭಾಗದಲ್ಲಿ 413, ಎಎಲ್‌ಎನ್‌ ವಿಭಾಗದಲ್ಲಿ692, ತಾತ್ಕಾಲ್‌ ವಿಭಾಗದಲ್ಲಿ 5650 ಅರ್ಜಿ,ಹದ್ದು ಬಸ್ತ್ ವಿಭಾಗದಲ್ಲಿ 3280 ಅರ್ಜಿಗಳು ಬಾಕಿ ಉಳಿದಿವೆ.

ಪ್ರಸ್ತಾವನೆ ಸಲ್ಲಿಕೆ : ಮಸ್ಕಿ ಮತ್ತು ಸಿರವಾರ ತಾಲೂಕು ರಚನೆಯಾಗಿ ವರ್ಷಗಳೇ ಕಳೆದರೂ ಅಲ್ಲಿ ಸ್ವಂತ ಕಚೇರಿ ಕೂಡ ಇಲ್ಲ.ಹೀಗಾಗಿ ಸರ್ಕಾರ ಪ್ರತ್ಯೇಕ ಕಚೇರಿ ಹಾಗೂ ಸಿಬ್ಬಂದಿ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಕೂಡಲೇ ಬಾಡಿಗೆ ಕಟ್ಟಡದಲ್ಲಿ ಕಚೇರಿ ಆರಂಭಿಸುವಂತೆ ನಿರ್ದೇಶನ ಬಂದಿದ್ದು, ಅದಕ್ಕೆ ಬೇಕಾದ ಎಲ್ಲ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ. ಸದ್ಯಕ್ಕೆ ಬಾಡಿಗೆ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಚೇರಿ ನಡೆಸಲು ನಿರ್ಧರಿಸಲಾಗಿದೆ. ಇನ್ನೂ ಸಿಬ್ಬಂದಿ ವಿಚಾರದ ಬಗ್ಗೆ ಮಾತ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

‌ಭೂ ದಾಖಲೆಗಳ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಇರುವ ಸಿಬ್ಬಂದಿ ಮೇಲೆ ಒತ್ತಡ ಬಿದ್ದಿದೆ. ಒಂದು ಅರ್ಜಿ ವಿಲೇ ಮಾಡಲು ಸರ್ಕಾರವೇ ಕಾಲಮಿತಿ ನಿಗದಿಗೊಳಿಸಿದೆ. ಹೀಗಾಗಿ ಇರುವಸಿಬ್ಬಂದಿಯೇ ಹೆಚ್ಚಿನ ಹೊರೆ ಹೊರಬೇಕಿದೆ. ಸಾಕಷ್ಟು ಹುದ್ದೆಗಳು ಖಾಲಿಯಿದ್ದು, ಸರ್ಕಾರದ ಗಮನಕ್ಕೆ ತರಲಾಗಿದೆ. ಮಸ್ಕಿ, ಸಿರವಾರತಾಲೂಕುಗಳ ಅರ್ಜಿಗಳನ್ನು ಅಕ್ಕಪಕ್ಕದ ತಾಲೂಕುಗಳ ಸಿಬ್ಬಂದಿಗಳೇ ನಿರ್ವಹಿಸಬೇಕಿದೆ. ಅಲ್ಲಿ ಕಚೇರಿ ಆರಂಭಿಸುವಂತೆಯೂ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.  –ಹನುಮೇಗೌಡ, ಡಿಡಿಎಲ್‌ಆರ್‌ ರಾಯಚೂರು

 

ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.