ಭೂಮಿಗೆ ಯಾವಾಗಲೂ ಚಿನ್ನದ ಬೆಲೆ ಇರುತ್ತೆ!


Team Udayavani, Dec 14, 2020, 8:18 PM IST

ಭೂಮಿಗೆ ಯಾವಾಗಲೂ ಚಿನ್ನದ ಬೆಲೆ ಇರುತ್ತೆ!

ಸ್ವಲ್ಪ ಹಣವಿದೆ. ಅದನ್ನು ಎಲ್ಲಿ ಹೂಡಿಕೆ ಮಾಡಿದರೆ ಒಳ್ಳೆಯದು?- ಹೀಗೊಂದು ಪ್ರಶ್ನೆಯನ್ನು ಹಲವರು ಕೇಳುವುದುಂಟು. ನಮ್ಮಲ್ಲಿ ಇರುವ ಹಣವನ್ನು ಮತ್ತಷ್ಟು ಹೆಚ್ಚು ಮಾಡಿಕೊಳ್ಳಲು ಇರುವ ದಾರಿ ಯಾವುದು ಎಂಬುದನ್ನು ಪರೋಕ್ಷವಾಗಿ ಕೇಳುವ ರೀತಿ ಇದು.

ರಾಷ್ಟ್ರೀಕೃತ ಬ್ಯಾಂಕ್‌- ಪೋಸ್ಟ್ ಆಫೀಸ್‌ಗಳಲ್ಲಿನ ಉಳಿತಾಯ ಖಾತೆ ಅಥವಾ ಫಿಕ್ಸೆಡ್‌ ಡಿಪಾಸಿಟ್‌ ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡಿದರೆ, ಅದು ದುಪ್ಪಟ್ಟಾಗುವುದಿಲ್ಲ, ಆದರೆ, ಭದ್ರವಾಗಿ ಇರುತ್ತದೆ. ಪ್ರತಿ ವರ್ಷವೂ ಇಂತಿಷ್ಟು ಎಂದು ಬಡ್ಡಿ ಹಣವೂ ಸಿಗುತ್ತದೆ. ಒಂದು ಕಡೆಯಲ್ಲಿ ಇಡುಗಂಟೂ ಉಳಿಯಬೇಕು, ಇನ್ನೊಂದು ಕಡೆಯಲ್ಲಿ ಲಾಭವೂ ಸಿಗಬೇಕು ಅನ್ನುವವರು, ಹಣ ಹೂಡಿಕೆಗೆ ಆರಿಸಿಕೊಳ್ಳಬೇಕಿರುವ ಸರಳ ಮತ್ತು ಸುಲಭ ಮಾರ್ಗ ಇದು.

ಕೆಲವರಿರುತ್ತಾರೆ. ಅವರಿಗೆ, ಹೇಗಾದರೂ ಮಾಡಿ ಹಣವನ್ನು ದುಪ್ಪಟ್ಟು ಮಾಡಿಕೊಳ್ಳುವ ಆಸೆ. ಅಂಥವರು ಬಡ್ಡಿಗೆ ಸಾಲ ಕೊಡುವ ಬಗ್ಗೆ ಯೋಚಿಸುತ್ತಾರೆ. ಇದು ಯಾವ ರೀತಿಯಿಂದ ಯೋಚಿಸಿದರೂ ಒಳ್ಳೆಯ ಮಾರ್ಗ ಅಲ್ಲ. ಏಕೆಂದರೆ, ಬಡ್ಡಿಗೆ ಹಣ ಕೊಡುವವರು ಅತೀ ಹೆಚ್ಚಿನ ಬಡ್ಡಿಗೆ ಹಣ ನೀಡಿರುತ್ತಾರೆ.

ಅನಿವಾರ್ಯವಾಗಿ ಸಾಲ ಪಡೆದವರು ಅಕಸ್ಮಾತ್‌ ಸಾಲ ವಾಪಸ್‌ ಮಾಡದೇ ಹೋದರೆ, ಅಸಲು ಮತ್ತು ಬಡ್ಡಿ ಎರಡಕ್ಕೂ ಪಂಗನಾಮ ಬೀಳುತ್ತದೆ.ಕೆಲವೊಮ್ಮೆ ಸಾಲ ಕೊಟ್ಟವನು ಮತ್ತು ಪಡೆದವನ ಮಧ್ಯೆ ಜಗಳ ಆಗಿ, ಅದರಿಂದ ಸಾಕಷ್ಟು ಫ‌ಜೀತಿಯಾಗುತ್ತದೆ. ಅಥವಾ ಸಾಲ ವಾಪಸ್‌ ಮಾಡಿದವನು “”ನೆಗೆಟಿವ್‌” ಮಾತುಗಳನ್ನು ಹೇಳಿಕೊಂಡು ಬಂದರೆ, ಅದರಿಂದ ಸಾಲಕೊಟ್ಟವನ ಇಮೇಜ್‌ ಹಾಳಾಗುತ್ತದೆ. ಹಾಗಾಗಿ, ಬಡ್ಡಿಗೆ ಹಣ ಕೊಟ್ಟವ ನೆಮ್ಮದಿಯಿಂದ ಇರಲು ಆಗುವುದಿಲ್ಲ.

ಐದಾರು ವರ್ಷಗಳಕಾಲ ದಿನನಿತ್ಯದ ಖರ್ಚು ನಿಭಾಯಿಸುವಂಥ ಉದ್ಯೋಗವಿದೆ. ಅದರ ಜೊತೆಗೆ ಹೆಚ್ಚುವರಿಯಾಗಿ 20 ಲಕ್ಷ ಅಥವಾಅದಕ್ಕಿಂತ ಹೆಚ್ಚಿನ ಹಣ ಇದೆ ಅಂದುಕೊಳ್ಳಿ;ಅಂತಹ ಸಂದರ್ಭದಲ್ಲಿ ಈ ಹಣದಲ್ಲಿ ಸೈಟ್‌ ಖರೀದಿ ಮಾಡುವುದು ಹಣ ಹೂಡಿಕೆಯಿಂದ ಲಾಭ ಮಾಡಲು ಇರುವ ಅತ್ಯುತ್ತಮ ವಿಧಾನ.

ಏಕೆಂದರೆ, ಹೋಟೆಲ್, ಫ್ಯಾಕ್ಟರಿ,ಕೃಷಿಯಂಥ ಯಾವುದೇ ಕ್ಷೇತ್ರದಲ್ಲಿ ಹಣ ಹೂಡಿಕೆಯಿಂದ ಲಾಸ್‌ ಆಗಬಹುದು. ಆದರೆ, ಭೂಮಿ ಖರೀದಿಯಿಂದ ಮಾತ್ರ ಯಾವಕಾರಣಕ್ಕೂ ಲಾಸ್‌ ಆಗಲು ಸಾಧ್ಯವೇ ಇಲ್ಲ. (ಭೂಮಿ ಖರೀದಿಗೆ ಸಂಬಂಧಿಸಿದ ದಾಖಲೆ ಪತ್ರಗಳು ಬಹಳ ಮುಖ್ಯ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ ಅಲ್ಲವೇ?) ಹೌದು; ನಮ್ಮನ್ನು ಹೊತ್ತಿರುವ ಈ ನೆಲಕ್ಕೆ ಯಾವತ್ತೂ ಚಿನ್ನದ ಬೆಲೆ ಇದ್ದೇ ಇದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.