ಟಿಎಪಿಸಿಎಂಎಸ್‌ ಷೇರುದಾರರಿಗೆ ಡಿವಿಡೆಂಟ್‌ ನೀಡಲು ಸಮ್ಮತಿ


Team Udayavani, Dec 16, 2020, 3:20 PM IST

ಟಿಎಪಿಸಿಎಂಎಸ್‌ ಷೇರುದಾರರಿಗೆ ಡಿವಿಡೆಂಟ್‌ ನೀಡಲು ಸಮ್ಮತಿ

ಮಾಗಡಿ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಒಂದುಕುಟುಂಬ ಇದ್ದಂತೆ, ಅದನ್ನು ಪ್ರಗತಿಯತ್ತ ಕೊಂಡೊಯ್ಯಲು ಪ್ರತಿಯೊಬ್ಬ ಸದಸ್ಯರಪಾತ್ರ ಜವಾಬ್ದಾರಿಯುತವಾದುದು ಎಂದು ಜಿಪಂ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಚ್‌. ಎನ್‌.ಅಶೋಕ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಟಿಎಪಿಸಿಎಂಎಸ್‌ನ 2019-20ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಾಹಸಭೆಯಲ್ಲಿ ಮಾತನಾಡಿ, ಸೊಸೈಟಿಯ ಪ್ರತಿಯೊಬ್ಬ ಸದಸ್ಯರು ತಮ್ಮ ಹಕ್ಕುಗಳನ್ನು ಚಲಾಯಿಸಲು ಹಕ್ಕುವುಳ್ಳವರಾಗಿರುತ್ತಾರೆ. ಜತೆಗೆ ಸೊಸೈಟಿ ಪ್ರಗತಿಗೆ ತಮ್ಮ ಸಲಹೆ ಸೂಚನೆಗಳು ಅತ್ಯಂತ ಅಮೂಲ್ಯವಾದುದು ಎಂದು ಹೇಳಿದರು.

ಡಿವಿಡೆಂಟ್‌ ನೀಡಲು ಸಮ್ಮತಿ: ಸದಸ್ಯ ಚಂದ್ರಯ್ಯ (ಕಿಟ್ಟಿ) ಮಾತನಾಡಿ, ಸೊಸೈಟಿಯ ಲಾಭಾಂಶದಲ್ಲಿ ಎಲ್ಲ ಸದಸ್ಯರಿಗೆ ಡಿವಿಡೆಂಟ್‌ ನೀಡಲು ಕಳೆದ ಸಾಲಿನಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಡಿವಿಡೆಂಟರ್‌ ನೀಡಲು ಒತ್ತಾಯಿಸಿದರು.ಈ ಹಣವನ್ನು ಸದಸ್ಯರಿಗೆ ನೀಡುವುದು ಬೇಡ ಎಂದು ಪ್ರತಿರೋಧ ವ್ಯಕ್ತಪಡಿಸಿದ ಮತ್ತೂಬ್ಬ ಸದಸ್ಯ ಯೋಗಾನಂದ ಅವರು, ಸೊಸೈಟಿ ಅಭಿವೃದ್ಧಿಗೆ ಬಳಸಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು. ಆದರೂ ಡಿವಿಡೆಂಟ್‌ ನೀಡುವುದಾಗಿ ಅಧ್ಯಕ್ಷ ರವೀಂದ್ರ ಸಮ್ಮತಿಸಿದರು.

ಪರಿಹಾರ: ಸೊಸೈಟಿಯಲ್ಲಿ ಶೇರುದಾರರಾಗಿರುವ ರೈತ ಸದಸ್ಯರು ಮೃತಪಟ್ಟರೆ ಅವರಕುಟುಂಬಕ್ಕೆಕನಿಷ್ಠ 5 ಸಾವಿರ ರೂ ಪರಿಹಾರ ನೀಡುವಂತೆ ಸದಸ್ಯ ಮಹಾಲಿಂಗಯ್ಯ ಸಭೆಯಲ್ಲಿ ಒತ್ತಾಯಿಸಿದರು. ಮೂರು ಸಾವಿರ ರೂ. ನೀಡಲಾಗುತ್ತಿದೆ. 4 ಸಾವಿರಕ್ಕೆ ಏರಿಸಲಾಗುವುದು ಎಂದು ತೀರ್ಮಾನಿಸಿದರು. ಈ ಸಂಬಂಧ ಷೇರುದಾರರಿಗೆ ಮಾಹಿತಿ ಕೊರತೆಯಿದ್ದು,ಸೊಸೈಟಿ ನಾಮಫ‌ಲಕದಲ್ಲಿ ಪ್ರಕಟಿಸುವುದು ಹಾಗೂಪತ್ರಿಕೆಯಲ್ಲಿ ಜಾಹಿರಾತು ನೀಡಲು ಎಚ್‌.ಎನ್‌.ಅಶೋಕ್‌ ಅವರು ಸೊಸೈಟಿಯ ಪ್ರಭಾರ ಕಾರ್ಯದರ್ಶಿ ಎಂ.ಜಿ.ನಾರಾಯಣ್‌ಗೆ ಸೂಚಿಸಿದರು.

ಅವ್ಯವಹಾರವಿಲ್ಲ: ಸೊಸೈಟಿ ಆಸ್ತಿಯಲ್ಲಿ 100/100 ಅಳತೆಯ ನಿವೇಶನವನ್ನು ಸೋದರ ಸಂಸ್ಥೆ ಡೇರಿಗೆ ಮಾರಾಟ ಮಾಡಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸದಸ್ಯ ವಾಟರ್‌ ಬೋರ್ಡ್‌ರಾಮಣ್ಣ ಮಾತನಾಡಿ, ಸೊಸೈಟಿ ಆಸ್ತಿ ಬೇರೆ ಸಂಸ್ಥೆಗೆ ಮಾರಾಟ ಮಾಡಬಹುದು ಎಂಬದು ಕಾನೂನಿನಲ್ಲಿ ಅವಕಾಶವಿದೆಯೇ. ಅವರಿಂದ ಲಿಖೀತ ಮನವಿಬಂದಿತ್ತೆ ಎಂದು ಪ್ರಶ್ನಿಸಿದರು. ಮಾರಾಟಕ್ಕೆ ಅವಕಾಶವಿದ್ದು, ಇದರಿಂದ ಬಂದ ಹಣವನ್ನು ಬೇರೆಡೆ ಸೊಸೈಟಿ ಗೋದಾಮಿಗೆ ಖರೀದಿಸಲಾಗುತ್ತಿದೆ. ಇದರಲ್ಲಿ ಯಾವುದೇ ಅವ್ಯವಹಾರವಿಲ್ಲ ಎಂದು ಅಧ್ಯಕ್ಷ ಸಿ.ಬಿ.ರವೀಂದ್ರ ಉತ್ತರಿಸಿದರು.

ಸೊಸೈಟಿ ಉಪಾಧ್ಯಕ್ಷ ಗೋವಿಂದರಾಜು, ನಿರ್ದೇಶಕರಾದ ವೈ.ಸಿ.ಸಿಂಗ್ರೀಗೌಡ, ಕೆ.ಎಸ್‌. ಹೊನ್ನಪ್ಪ, ಎ ಸ್‌.ಎಚ್‌.ಕುಮಾರಯ್ಯ, ಪೈರೋಜ್‌ ಪಾಷಾ,ಎಲ್‌.ಮಂಜುಳಾ,ಜಯ ಲಕ್ಷ್ಮಮ್ಮ,ಹಿರಿಯ ಸದಸ್ಯರಾದ ಎಂ.ಕೆ.ಧನಂಜಯ, ತ್ಯಾಗದೆರೆಪಾಳ್ಯದ ರಂಗಸ್ವಾಮಯ್ಯ, ಸೀಗೇಕುಪ್ಪೆ ಶಿವಣ್ಣ, ಕಲ್ಕೆರೆ ಕುಮಾರ್‌, ಎಚ್‌.ಜೆ.ಪುರುಶೋತ್ತಮ್‌, ಸೊಸೈಟಿಯ ಪ್ರಬಾರಿ ಕಾರ್ಯದರ್ಶಿ ಎಂ.ಜಿ.ನಾರಾಯಣ್‌, ಸಿಬ್ಬಂದಿ ಎಚ್‌.ಜೆ.ಪ್ರವೀಣ್‌, ಎಚ್‌.ಆರ್‌. ಚಂದ್ರಶೇಖರಯ್ಯ,ಕೆ.ಪಿ ಸವಿತಾ,ಆರ್‌.ಶ್ರೀನಿವಾಸ್‌,ಎಚ್‌.ಮುನಿರಾಜು, ಭಾಗ್ಯಮ್ಮ, ಗಾಯತ್ರಿದೇವಿ ಇತರರು ಇದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.