ಗ್ರಾಮದ ಅಭಿವೃದ್ಧಿ ಮಾಡಲು ಅವಕಾಶ ಕೊಡಿ
Team Udayavani, Dec 16, 2020, 3:27 PM IST
ಮಾಗಡಿ: ಮಹಿಳಾ ಮೀಸಲಾತಿ ಬಂದಿರುವುದರಿಂದ ಗ್ರಾಮದ ಅಭಿವೃದ್ಧಿ ಹಾಗೂ ಜನಗಳ ಸೇವೆ ಮಾಡಲು ಒಂದು ಭಾರಿ ನಮಗೂ ಅವಕಾಶ ಮಾಡಿಕೊಡಿ ಎಂದು ಚಕ್ರಬಾವಿ ಕ್ಷೇತ್ರದಿಂದ ಗ್ರಾಪಂ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಮಂಜುಳಾ ದೀಪಕ್ ಮನವಿ ಮಾಡಿದರು.
ತಾಲೂಕಿನ ಸೀಗೇಕುಪ್ಪೆ ಗ್ರಾಪಂ ವ್ಯಾಪ್ತಿಯ ಚಕ್ರಬಾವಿ-1 ಮಹಿಳಾಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಮಾತನಾಡಿದರು.ಗ್ರಾಪಂನಲ್ಲಿ ಆಯ್ಕೆಯಾದರೆ ನರೇಗಾ ಯೋಜನೆ ಮೂಲಕಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬರುವುದರಿಂದ ಗ್ರಾಮಸ್ಥರ ಪರವಾಗಿಸದಸ್ಯರಾಗಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಮಾದರಿ ಗ್ರಾಮವಾಗಿ ಮಾಡಲು ಸಂಕಲ್ಪ ಮಾಡಿಕೊಳ್ಳಲಾಗಿದೆ. ಈ ಭಾರಿ ಗ್ರಾಪಂ ಚುನಾವಣೆಗೆ ಗ್ರಾಮಸ್ಥರ ಒತ್ತಾಯದ ಮೇಲೆ ಸ್ಪರ್ಧೆ ಮಾಡಿದ್ದು ಈ ಚುನಾವಣೆಯಲ್ಲಿಬೆಂಬಿಸುತ್ತಾರೆಂಬ ವಿಶ್ವಾಸವಿದೆ. ನಿಮ್ಮ ಸೇವೆ ಮಾಡಲು ಒಂದು ಅವಕಾಶ ನೀಡಿ ಎಂದು ಮನವಿ ಮಾಡಿದರು.
ಯುವ ಮುಖಂಡ ಸಿ.ಎನ್.ದೀಪಕ್ ಮಾತನಾಡಿ, ಯುವಕರಿಗೆ ಹೆಚ್ಚಿನ ಅವಕಾಶ ನೀಡಿದರೆ ಹೆಚ್ಚು ಅಭಿವೃದ್ಧಿ ಮಾಡಲುಗಮನಹರಿಸಬಹುದು. ಚಕ್ರಬಾವಿ ಗ್ರಾಮ ಶಾಂತಿ ಗ್ರಾಮವಾಗಿದ್ದು ಈ ಭಾರಿ ನಡೆಯುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದರು.
ಬೆಂಬಲಿಗರ ಜತೆ ನಾಮಪತ್ರ ಸಲ್ಲಿಸಲಾಯಿತು. ನಾಮಪತ್ರ ಸಲ್ಲಿಸುವವೇಳೆ ಗ್ರಾಮಸ್ಥರಾದ ಮಹೇಶ್, ಸುರೇಶ್, ಚಂದ್ರ, ಸಿ.ಟಿ.ನಾಗರಾಜು, ಅಂಗ ಡಿ ನಾಗರಾಜು, ಮಹೇಶ್, ಮಂಜುನಾಥ್, ಲೋಕೇಶ್, ತಿಬ್ಬಲಿಂಗಯ್ಯ, ಪಾಪೇಗೌಡ, ಮೂರ್ತಿ,ಬಸವರಾಜು, ಸುರೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು